ಕಸಾಪದಿಂದ ಆಧುನಿಕ ದಲಿತ ಸಾಹಿತ್ಯ ಸಂಪುಟ


Team Udayavani, Nov 9, 2018, 11:47 AM IST

kasapa.jpg

ಬೆಂಗಳೂರು: ಭಾರತದ ಸ್ವಾತಂತ್ರ್ಯ ನಂತರ ದಲಿತ ಸಾಹಿತ್ಯದಲ್ಲಾದ ಬದಲಾವಣೆಯನ್ನು “ಸಂಪುಟ’ರೂಪದಲ್ಲಿ ಕಟ್ಟಿಕೊಡಲು ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದೆ.

ಈಗಾಗಲೇ ಕನ್ನಡ ಸಾಹಿತ್ಯ ದಿಗ್ಗಜರ ಕವಿತೆಗಳನ್ನು ನೇಪಾಳಿ ಭಾಷೆಗೆ ಹಾಗೂ ಅಲ್ಲಿಯ ಕವಿಗಳ ಕವಿತೆಗಳನ್ನು ಕನ್ನಡಕ್ಕೆ ತರುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿರುವ ಕನ್ನಡ ಸಾಹಿತ್ಯ ಪರಿಷತ್ತು, ಇದೀಗ ದಲಿತ ಸಾಹಿತ್ಯ ಕುರಿತಾದ ಸಮಗ್ರ ಸಂಪುಟವನ್ನು  “ಆಧುನಿಕ ದಲಿತ ಸಾಹಿತ್ಯ ಸಂಪುಟಗಳು’ ಹೆಸರಿನಲ್ಲಿ ದಾಖಲಿಸಲು ತೀರ್ಮಾನಿಸಿದೆ.

ದಲಿತ ಸಾಹಿತಿಗಳ ಬರಹಗಳ ಮೇಲೆ ಸಮಾಜವಾದಿ ಚಿಂತಕ ರಾಮ ಮನೋಹರ ಲೋಹಿಯಾ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರಭಾವ. ಕಥೆ, ಕವಿತೆ, ನಾಟಕ, ಪ್ರಬಂಧ, ಆತ್ಮಕಥೆ, ವಿಮರ್ಶೆ ಮತ್ತು ಸಂಶೋಧನೆಯ ಪ್ರಕಾರಗಳಲ್ಲಿ ದಲಿತ ಲೇಖಕರು ಹೇಗೆ ತೊಡಗಿಸಿಕೊಂಡಿದ್ದಾರೆ.

ಅವರ ಆಕಾಂಕ್ಷೆಗಳು ಏನಿದ್ದವು.ಅಕ್ಷರ ಕಲಿತ ಮೇಲೆ ಅವರಲ್ಲಿ ಉಂಟಾದ ಭಾವನೆ ಹೇಗಿತ್ತು. ಪ್ರಸ್ತುತ ಅವರು ಯಾವ ರೀತಿಯ ಬರವಣಿಗೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬುವುದರ ಕುರಿತ ಸಮಗ್ರ ನೋಟವನ್ನು ಸಂಪುಟ ಕಟ್ಟಿಕೊಡಲಿದೆ ಎಂದು ಹೇಳಲಾಗಿದೆ.

ಸಮಗ್ರ ಸಂಪುಟ ಪ್ರಕಟ: ಸಂಸ್ಕೃತ ಚಿಂತಕ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ ಅವರ ಮಾರ್ಗ ದರ್ಶನದಲ್ಲಿ ಸಮಗ್ರ ಸಂಪುಟ ಪ್ರಕಟವಾಗಲಿದ್ದು “ಕಾವ್ಯ ಸಂಪಾದನೆ’ ಜವಾಬ್ದಾರಿ ಮೂಡ್ನಾಕೂಡು ಚಿನ್ನಸ್ವಾಮಿ,  “ಜಾನಪದ’ಕ್ಕೆ ಸಂಬಂಧಿಸಿದ ವಿಷಯ ಸಂಗ್ರಹಣೆ ಹೊಣೆ ಕಲಬುರ್ಗಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಚ್‌.ಟಿ.ಕೋಟೆ,

“ವೈಚಾರಿಕೆ ಬರಹ’ಕ್ಕೆ ಸಂಬಂಧಿಸಿದ ವಿಷಯ ಸಂಗ್ರಹಣೆ ಜವಾಬ್ದಾರಿ ಡಾ.ಬಿ.ಎಂ.ಪುಟ್ಟಯ್ಯಗೆ ವಹಿಸಲಾಗಿದೆ. “ಆತ್ಮಕತನಗಳ’ ಕುರಿತು ಅರ್ಜುನ್‌ ಗೊಳಸಂಗಿ ಹಾಗೂ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ “ದಲಿತ ಕನ್ನಡ ಸಂಶೋಧನೆ’ಕುರಿತು ಸಂಪುಟದಲ್ಲಿ ದಾಖಲಿಸಲಿದ್ದು ಒಟ್ಟು 8 ಸಂಪುಟಗಳಲ್ಲಿ ಇದು ಮೂಡಿಬರಲಿದೆ.

ದಕ್ಷಿಣ ಭಾರತದಲ್ಲಿ ಹೊಸ ಪ್ರಯತ್ನ: ಈ ಕುರಿತಂತೆ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ ನೇತೃತ್ವದಲ್ಲಿ ಸದ್ಯದಲ್ಲೇ ಸಭೆ ನಡೆಯಲಿದ್ದು ಅಲ್ಲಿ ವಿಷಯ ಜೋಡಣೆ ಮತ್ತು ಸಮಗ್ರ ಸಂಪುಟದ ರೂಪರೇಷಗಳ ಕುರಿತು ಚರ್ಚೆ ನಡೆಯಲಿದೆ. ಡಿಸೆಂಬರ್‌ನಲ್ಲಿ ಮುದ್ರಣ ಕಾರ್ಯ ಆರಂಭವಾಗಲಿದೆ.

ಈ ಬಗ್ಗೆ”ಉದಯವಾಣಿ’ಯೊಂದಿಗೆ  ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್‌ ಮಾತನಾಡಿ, ದಲಿತ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಚರಿತ್ರೆ ದಾಖಲಿಸಲು ಇದು ಮೂಲ ಆಕಾರ ಗ್ರಂಥವಾಗಲಿದೆ. ದಲಿತ ಸಾಹಿತ್ಯದ ಬದಲಾವಣೆ ಕುರಿತಂತೆ ದಕ್ಷಿಣ ಭಾರತದಲ್ಲಿ ಇಂತಹ ಯಾವುದೇ ಪ್ರಯತ್ನ ನಡೆದಿಲ್ಲ.ಆ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಸಂಪುಟ ಹೊರತರುವ ಕುರಿತು ಸಲಹೆ ನೀಡಿದೆ.  

ದಲಿತ ಸಾಹಿತ್ಯದ ಮೇಲೆ ಬಂಡಾಯ ಮತ್ತು ನವ್ಯ ಸಾಹಿತ್ಯದ ಪ್ರಭಾವವೂ ಇರುವುದರಿಂದ ಅನೇಕ ರೀತಿಯ ಬದಲಾವಣೆಗಳಿಗೂ ಸಾಕ್ಷಿಯಾಗಿದೆ. ಹೀಗಾಗಿ, ಸಾಹಿತ್ಯ ಸಂಪುಟ ತರುತ್ತಿರುವುದು ಸೂಕ್ತವಾಗಿದೆ  ಎಂದು ಹೇಳಿದರು.

25ಲಕ್ಷ ರೂ. ಯೋಜನೆ: ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತು ಈ ಸಮಗ್ರ ಸಂಪುಟ ಹೊರತರಲು ಮುಂದಾಗಿದೆ.ದಲಿತ ಸಾಹಿತ್ಯಕ್ಕೆ ಸಂಬಂಧಿಸಿದ ಲೇಖನಗಳು, ಕೃತಿಗಳು ಒಂದು ಕಡೆ ಸಿಗಲಿ ಎಂಬ ಆಶಯ ಕೂಡ ಇದರಲ್ಲಿದೆ.ಈ ಯೋಜನೆಗಾಗಿ ಕನ್ನಡ ಸಾಹಿತ್ಯ ಪರಿಷತ್ತು ಸುಮಾರು 25 ಲಕ್ಷ ರೂ.ಗಳನ್ನ ಮೂಡುಪಾಗಿಟ್ಟಿದೆ ಎಂದು ಕಸಾಪದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದೇ ಮೊದಲ ಬಾರಿಗೆ ಕಸಾಪ ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ದಲಿತ ಸಾಹಿತ್ಯಕ್ಕೆ ಸಂಬಂಧಿಸಿದ ಸಮಗ್ರ ಸಂಪುಟ ಹೊರತರಲಾಗುತ್ತಿದ್ದು,ಮಾರ್ಚ್‌ನಲ್ಲಿ ಬಿಡುಗಡೆಗೊಳ್ಳಲಿದೆ.
-ಡಾ.ಮನುಬಳಿಗಾರ್‌, ಕಸಾಪ ಅಧ್ಯಕ್ಷ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.