ಅಂಚೆ ಮಾಹಿತಿಗೆ ಹೊಸ ತಂತ್ರ


Team Udayavani, Nov 9, 2018, 11:47 AM IST

anche.jpg

ಬೆಂಗಳೂರು: ಅಂಚೆ ಇಲಾಖೆ ಮತ್ತಷ್ಟು ತಂತ್ರಜ್ಞಾನ ಸ್ನೇಹಿಯಾಗುತ್ತಿದ್ದು, ರಿಜಿಸ್ಟರ್ಡ್‌ ಪೋಸ್ಟ್‌, ಸ್ಪೀಡ್‌ ಪೋಸ್ಟ್‌ ಹಾಗೂ ಪಾರ್ಸೆಲ್‌ ಸೇವೆ ಯಾವ ಹಂತದಲ್ಲಿದೆ (ಎಲ್ಲಿದೆ) ಹಾಗೂ ಯಾವ ಸಮಯಕ್ಕೆ ನಿಗದಿತ ಸ್ಥಳ ತಲುಪಲಿದೆ (ಟ್ರ್ಯಾಕ್‌ ಅಂಡ್‌ ಟ್ರೇಸ್‌) ಎಂಬುದರ ಪೂರ್ಣ ಮಾಹಿತಿ ಜನರಿಗೆ ಸಿಗಲಿದೆ.

ಇದಕ್ಕಾಗಿ ಟಾಟಾ ಕನ್ಸಲ್‌ಟೆನ್ಸಿ ಸರ್ವಿಸಸ್‌ (ಟಿಸಿಎಸ್‌)ಸಂಸ್ಥೆ ಕೋರ್‌ ಸಿಸ್ಟಂ ಇಂಟಗ್ರೇಟರ್‌(ಸಿಎಸ್‌ಐ) ಎಂಬ ನೂತನ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಅಂಚೆ ಇಲಾಖೆಗೆ ನೀಡಿದ್ದು, ಇತ್ತೀಚೆಗೆ ಈ ತಂತ್ರಜ್ಞಾನದ ಬಳಕೆಗೆ ಅಧಿಕೃತ ಚಾಲನೆ ನೀಡಲಾಯಿತು.

ಇದುವರೆಗೂ ರಿಜಿಸ್ಟರ್ಡ್‌ ಪೋಸ್ಟ್‌, ಸ್ಪೀಡ್‌ ಪೋಸ್ಟ್‌ ಹಾಗೂ ಪಾರ್ಸಲ್‌ ಸೇವೆಗಾಗಿ ಅಂಚೆ ಸಿಬ್ಬಂದಿ ಬೇರೆ ಬೇರೆ ಅಪ್ಲಿಕೇಷನ್‌ ಬಳಸಬೇಕಿತ್ತು. ಅಲ್ಲದೆ ಈ ಮೂರು ವಿಭಾಗಗಳಲ್ಲಿಯೂ ಬೆಳಗ್ಗಿನಿಂದ ಸಂಜೆವರೆಗೂ ಬಂದಂತಹ ಸೇವೆಗಳ ಮಾಹಿತಿ ಸಂಗ್ರಹಿಸಿ ಅದನ್ನು ಅಂಚೆ ಇಲಾಖೆಯ ನ್ಯಾಷನಲ್‌ ಸಾರ್ಟಿಂಗ್‌ ಹಬ್‌ (ಎನ್‌ಎಸ್‌ಎಚ್‌)(ಸ್ಪೀಡ್‌ ಪೋಸ್ಟ್‌ ವಿಭಾಗ)ನಲ್ಲಿರುವ ಸ್ಥಳೀಯ ಸರ್ವರ್‌ಗೆ ಅಳವಡಿಸಬೇಕಿತ್ತು.

ಅಲ್ಲಿಂದ ಆ ಮಾಹಿತಿ ಮೈಸೂರಿನಲ್ಲಿರುವ ಅಂಚೆ ಇಲಾಖೆಯ ತಾಂತ್ರಿಕ ಅತ್ಯುನ್ನತ ಕೇಂದ್ರ (ಸಿಇಪಿಟಿ)ಕ್ಕೆ ರವಾನೆಯಾಗುತ್ತಿತ್ತು. ಅಲ್ಲಿನ ಸಿಬ್ಬಂದಿ ಈ ಮಾಹಿತಿಯನ್ನು ಇಂಡಿಯನ್‌ ಪೋಸ್ಟ್‌ ವೆಬ್‌ಸೈಟ್‌ಗೆ ಕಳುಹಿಸುತ್ತಿದ್ದರು. ನಂತರ ಜನರಿಗೆ ತಮ್ಮ ರಿಜಿಸ್ಟರ್ಡ್‌ ಪೋಸ್ಟ್‌, ಸ್ಪೀಡ್‌ ಪೋಸ್ಟ್‌ ಹಾಗೂ ಪಾರ್ಸಲ್‌ ಸೇವೆ ಯಾವ ಹಂತದಲ್ಲಿದೆ ಎಂದು ವೆಬ್‌ಸೈಟ್‌ನಲ್ಲಿ ತಿಳಿಯುತ್ತಿತ್ತು.

ಖಾಸಗಿ ಪಾರ್ಸಲ್‌ ವಿಲೇವಾರಿ ಕಂಪನಿಗಳು ಯಾವ ಹಂತದಲ್ಲಿ ಸೇವೆಗಳಿವೆ ಎಂದು ಜನರಿಗೆ ಕ್ಷಣ ಕ್ಷಣದ ಮಾಹಿತಿ ನೀಡುವ ರೀತಿಯಲ್ಲಿ ಅಂಚೆ ಇಲಾಖೆ ಸೇವೆ ಇರಲಿಲ್ಲ. ಅಲ್ಲದೆ ಅಂಚೆ ಇಲಾಖೆಯ ಎನ್‌ಎಸ್‌ಎಚ್‌ ವಿಭಾಗದ ಸಿಬ್ಬಂದಿ ಮೈಸೂರಿನ ಸಿಇಪಿಟಿಗೆ ಮಾಹಿತಿ ರವಾನೆ ಮಾಡುವ ವೇಳೆ ಪ್ರತಿ 10 ನಿಮಿಷಕ್ಕೊಮ್ಮೆ ಸೇವೆಗಳು ಯಾವ ಹಂತದಲ್ಲಿದೆ ಎಂದು ಸಂವಹನ ನಡೆಸಬೇಕಿತ್ತು.

ಇದಕ್ಕಾಗಿ ಮತ್ತೂಂದು ಅಪ್ಲಿಕೇಷನ್‌ ಬಳಸಬೇಕಿತ್ತು. ಒಂದು ವೇಳೆ ಅಂಚೆ ಇಲಾಖೆ ಸಿಬ್ಬಂದಿ ಪ್ರತಿ 10 ನಿಮಿಷಕ್ಕೊಮ್ಮೆ ಸಂವಹನ ನಡೆಸುವುದನ್ನು ಮರೆತರೆ ಜನರಿಗೆ ರಿಜಿಸ್ಟರ್ಡ್‌ ಪೋಸ್ಟ್‌, ಸ್ಪೀಡ್‌ ಪೋಸ್ಟ್‌ ಹಾಗೂ ಪಾರ್ಸಲ್‌ ಸೇವೆ ಯಾವ ಹಂತದಲ್ಲಿ ಇದೆ ಎಂದು ಮಾಹಿತಿ ಲಭಿಸುತ್ತಿರಲಿಲ್ಲ. ಮಾಹಿತಿ ಸಂಗ್ರಹ, ರವಾನೆ, ಸಂವಹನ ಎಲ್ಲವನ್ನು ಅಂಚೆ ಸಿಬ್ಬಂದಿಯೇ ಮಾಡಬೇಕಿತ್ತು. 

ಈಗ ಸಿಎಸ್‌ಐ ತಂತ್ರಜ್ಞಾನ ಮೂಲಕ ಜನರು ರಿಜಿಸ್ಟರ್ಡ್‌ ಪೋಸ್ಟ್‌, ಸ್ಪೀಡ್‌ ಪೋಸ್ಟ್‌ ಹಾಗೂ ಪಾರ್ಸಲ್‌ ಸೇವೆ ಯಾವ ಹಂತದಲ್ಲಿದೆ ಎಂದು ಸುಲಭದಲ್ಲಿ ತಿಳಿಸುವ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ರಿಜಿಸ್ಟರ್ಡ್‌ ಪೋಸ್ಟ್‌, ಸ್ಪೀಡ್‌ ಪೋಸ್ಟ್‌ ಹಾಗೂ ಪಾರ್ಸಲ್‌ ಸೇವೆ ಮೂರಕ್ಕೂ ಸಿಎಸ್‌ಐ ತಂತ್ರಜ್ಞಾನ ಒಂದನ್ನೇ ಬಳಸಬಹುದು.

ಅಲ್ಲದೆ ಸೇವೆಗಳ ಮಾಹಿತಿಯನ್ನು ಎನ್‌ಎಸ್‌ಎಚ್‌ ಸಿಬ್ಬಂದಿ ಸ್ಥಳೀಯ ಸರ್ವರ್‌ಗೆ ಅಳವಡಿಸಿ ಮೈಸೂರಿನ ಸಿಇಪಿಟಿಗೆ ಕೇಂದ್ರಕ್ಕೆ ಕಳುಹಿಸುವ ಅಗತ್ಯವಿರುವುದಿಲ್ಲ. ಸಿಎಸ್‌ಐ ತಂತ್ರಜ್ಞಾನವೇ ಈ ಎಲ್ಲ ಕಾರ್ಯ ಮಾಡಲಿದ್ದು, ಜನರಿಗೆ ಸುಲಭದಲ್ಲಿ ತಮ್ಮ ಅಂಚೆ ಸೇವೆ ಯಾವು ಹಂತದಲ್ಲಿ ಎಂದು ತಿಳಿಸಲಿದೆ.

ಕಳೆದ ಎರಡುವರೆ ವರ್ಷಗಳಿಂದ ರಾಜ್ಯದ ವಿವಿಧ ಅಂಚೆ ಕಚೇರಿಗಳಲ್ಲಿ ಪ್ರಾಯೋಗಿಕವಾಗಿ ಹಂತ ಹಂತವಾಗಿ ಸಿಎಸ್‌ಐ ತಂತ್ರಜ್ಞಾನ ಅಳವಡಿಸಲಾಗುತ್ತಿತ್ತು. ನಗರದ ಜಿಪಿಒನಲ್ಲಿ ನ್ಯಾಷನಲ್‌ ಸಾರ್ಟಿಂಗ್‌ ಹಬ್‌ನಲ್ಲಿ ಹಾಗೂ ರೈಲ್ವೆ ಅಂಚೆ ಸೇವೆಗಳ ಹಿರಿಯ ಅಧಿಕ್ಷರ ಕಚೇರಿಯಲ್ಲಿ ಸಿಎಸ್‌ಐ ತಂತ್ರಜ್ಞಾನದ ಬಳಕೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
-ಆರ್‌.ಎನ್‌.ತವಕರಿ, ಎನ್‌ಎಸ್‌ಎಚ್‌ನ ವ್ಯವಸ್ಥಾಪಕ (ಸ್ಪೀಡ್‌ ಪೋಸ್ಟ್‌)

* ಶ್ರುತಿ ಮಲೆನಾಡತಿ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.