ಮೂರು ವರ್ಷದ ಬಾಲಕಿ ಸೇರಿ ನಾಲ್ವರ ಸಾವು


Team Udayavani, Nov 13, 2018, 12:00 PM IST

mooru-var.jpg

ಬೆಂಗಳೂರು: ಮನೆ ಖರೀದಿಗೆ 25 ಲಕ್ಷ ರೂ. ಪಡೆದಿದ್ದ ವ್ಯಕ್ತಿ ಮೃತಪಟ್ಟ ಕಾರಣ, ಹಣ ವಾಪಸ್‌ ಬರುವುದಿಲ್ಲವೆಂದು  ಮೂರು ವರ್ಷದ ಬಾಲಕಿ ಸೇರಿ ನಾಲ್ವರ ದುರಂತ ಸಾವು ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ.

 25 ಲಕ್ಷ ರೂ. ಪಡೆದಿದ್ದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಹಣ ವಾಪಸ್‌ ಬರಲ್ಲ ಎಂದು ಆತಂಕಗೊಂಡ ಗೃಹಿಣಿ, ತನ್ನ ಮೂರು ವರ್ಷದ ಮಗಳು ಹಾಗೂ ತಂದೆ ತಾಯಿಗೆ ವಿಷಪೂರಿತ ಮಾತ್ರೆ ನುಂಗಿಸಿ ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಧಾರಾಣಿ (29) ಸೋನಿಕಾ (3)  ಜನಾರ್ದನ್‌ (55) ಅವರ ಪತ್ನಿ ಸುಮಿತ್ರಾ (45) ಮೃತರು.

ನಾಲ್ವರು ಮೃತಪಟ್ಟಿರುವ ಎರಡು ಪುಟಗಳ ಡೆತ್‌ ನೋಟ್‌ ದೊರೆತಿದ್ದು” ಮನೆ ಖರೀದಿಸುವ ಸಲುವಾಗಿ ನೀಡಿದ್ದ 25 ಲಕ್ಷ ರೂ. ಪಡೆದಿದ್ದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದು, ಹಣ ಹಾಗೂ ಮನೆ ಸಿಗುವುದಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆಯಲಾಗಿದೆ. ಆದರೆ, ಹಣ ಪಡೆದುಕೊಂಡ ವ್ಯಕ್ತಿ ಯಾರು? ಆತನ ವಿಳಾಸ ಏನನ್ನೂ ನಮೂದಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ವಿದ್ಯಾರಣ್ಯಪುರ ಠಾಣೆ ಪೊಲೀಸರು, ಹಲವು ಆಯಾಮಗಳಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ. ಮೃತ ಸುಧಾರಾಣಿ ಪತಿ ಅರ್ಜುನ್‌ನನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಮೃತ ದೇಹಗಳನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ಬಂದ ಬಳಿಕ ನಾಲ್ವರ ಸಾವು ಹೇಗೆ ಸಂಭವಿಸಿದೆ ಎಂಬುದು ಖಚಿತವಾಗಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ತಡವಾಗಿ ನಾಲ್ವರ ಸಾವು ಬೆಳಕಿಗೆ!: ಮೃತ ಸುಧಾರಾಣಿಗೆ 4 ವರ್ಷಗಳ ಹಿಂದೆ ಮತ್ತಿಕೆರೆಯ ಅರ್ಜುನ್‌ ಎಂಬಾತನ ಜತೆ ವಿವಾಹವಾಗಿದ್ದು, ದಂಪತಿಗೆ ಮೂರು ವರ್ಷದ  ಸೋನಿಕಾ ಮಗಳಿದ್ದಾಳೆ. ಅರ್ಜುನ್‌ ಮತ್ತಿಕೆರೆಯಲ್ಲಿ ಮೆಡಿಕಲ್‌ ಸ್ಟೋರ್‌ ನಡೆಸುತ್ತಿದ್ದ ಅದನ್ನು ಸುಧಾರಾಣಿ ನಿರ್ವಹಣೆ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಮಗಳ ಜತೆ  ಪೋಷಕರ ಮನೆಗೆ ಬಂದಿದ್ದ ಸುಧಾರಾಣಿ ಬಂದಿದ್ದರು.

ಕಳೆದ ಎರಡು ದಿನಗಳಿಂದ ಮನೆಯ ಬಾಗಿಲು ತೆಗೆದಿರಲಿಲ್ಲ. ಸೋಮವಾರ ಮಧ್ಯಾಹ್ನ 2.30ರ ಸುಮಾರಿಗೆ ಮನೆಯಿಂದ ಕೆಟ್ಟ ವಾಸನೆ ಬರಲಾರಂಭಿಸಿದೆ. ಇದನ್ನು ಗಮನಿಸಿದ ಮನೆಯ ಮಾಲೀಕರು ಮನೆಯ ಬಾಗಲು ಬಡಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಅನುಮಾನಗೊಂಡು ಸುಧಾರಾಣಿ ಪತಿಗೆ ಪೋನ್‌ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಅವರು ಬಂದು ನೋಡಿದಾಗ ಪತ್ನಿ, ಮಗಳು, ಅತ್ತೆ, ಮಾವ ಮೃತಪಟ್ಟಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಡೆತ್‌ನೋಟ್‌’ನಲ್ಲಿದೆಯೇ ಸಾವಿನ ರಹಸ್ಯ?: ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಮನೆಯನ್ನು ಪರಿಶೀಲಿಸಿದ್ದಾರೆ. ಜನಾರ್ದನ ಹಾಗೂ ಪತ್ನಿ ತಮ್ಮ ಕೊಠಡಿಯಲ್ಲಿ ತಮ್ಮ ಬೆಡ್‌ಮೇಲೆಯೇ ಅಸುನೀಗಿದ್ದರು. ಇತ್ತ ಸುಧಾರಾಣಿ ಹಾಗೂ ಸೋನಿಕಾ ಕೂಡ ಜೊತೆಯಲ್ಲಿಯೇ ಕೊನೆಯುಸಿರೆಳೆದಿದ್ದು, ಅಲ್ಲಿ ಡೆತ್‌ ನೋಟ್‌ ಲಭ್ಯವಾಗಿದೆ.

ಡೆತ್‌ನೋಟ್‌ನಲ್ಲಿರುವ ಮಾಹಿತಿಯನ್ನು ಗಮನಿಸಿದರೆ ಸುಧಾರಾಣಿ ಮೊದಲು ತಂದೆ, ತಾಯಿ ಮಗಳನ್ನು ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ಆದರೆ. ಡೆತ್‌ ನೋಟ್‌ ನಿಜವಾಗಿಯೂ ಬರೆದಿರುವುದು ಯಾರು ಎಂಬುದು ಖಚಿತವಾಗಬೇಕಿದೆ. ಹೀಗಾಗಿ, ಆಕೆಯ ಬರವಣಿಗೆ ಶೈಲಿಯನ್ನು ಪರಿಶೀಲಿಸಬೇಕಿದೆ. ಮೃತರ ಮರಣೋತ್ತರ ಪರೀಕ್ಷಾ ವರದಿಯೂ ಕೈ ಸೇರಬೇಕಿದೆ. ಜತೆಗೆ, 25 ಲಕ್ಷ ರೂ. ಹಣ ಪಡೆದಿದ್ದವರು ಯಾರು ಎಂಬುದು ತನಿಖೆಯಲ್ಲಿ ಗೊತ್ತಾಗಬೇಕಿದೆ.

ಜತೆಗೆ, ಸುಧಾರಾಣಿ ಹಾಗೂ ಆಕೆಯ ಪೋಷಕರು ಬಳಸುತ್ತಿದ್ದ ಮೊಬೈಲ್‌ ಫೋನ್‌ಗಳ ದೂರವಾಣಿ ಕರೆಗಳು, ಮೆಸೇಜ್‌ಗಳನ್ನು ಪರಿಶೀಲಿಸಲಾಗುತ್ತಿದ್ದು, ಕೊಲೆಯೇ? ಆತ್ಮಹತ್ಯೆಯೇ ಎಂಬುದು ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ನಾಲ್ವರು ಸಾವಿನ ಪ್ರಕರಣದ ತನಿಖೆಯನ್ನು ಹಲವು ದೃಷ್ಟಿಕೋನಗಳಲ್ಲಿ ನಡೆಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ದೊರೆತಿರುವ ಡೆತ್‌ನೋಟ್‌ನಲ್ಲಿ ಹಲವು ಮಾಹಿತಿಯಿದ್ದು, ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಮೃತರ ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಸಾವು ಸಂಭವಿಸಿರುವುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ.
-ಕಲಾ ಕೃಷ್ಣಮೂರ್ತಿ, ಡಿಸಿಪಿ, ಈಶಾನ್ಯ ವಿಭಾಗ

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.