ಮಾರ್ಕ್ ಮಾಡಿ ಬಂದರೆ ಅಳಿಸುತ್ತಾರೆ
Team Udayavani, Nov 14, 2018, 11:51 AM IST
ಬೆಂಗಳೂರು: ಒತ್ತುವರಿ ತೆರವುಗೊಳಿಸಲು ಮಾಡಿರುವ ಮಾರ್ಕಿಂಗ್ನ್ನು ಒತ್ತುವರಿದಾರರು ಅಳಸಿಹಾಕುತ್ತಿದ್ದಾರೆ. ಹೀಗಾಗಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲು ಸಾಧ್ಯವಾಗುತ್ತಿಲ್ಲ…
ಸ್ವತಃ ಉಪಮುಖ್ಯಮಂತ್ರಿಗಳೂ ಆದ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರೂ, ತೆರವು ಕಾರ್ಯಾಚರಣೆಗೆ ಮುಂದಾಗದ ಅಧಿಕಾರಿಗಳು ನೀಡುತ್ತಿರುವ ಸಮಜಾಯಿಷಿ ಇದು.
ಭೂ ಮಾಪಕರು ಒತ್ತುವರಿಯನ್ನು ಗುರುತಿಸಿ ವರದಿ ನೀಡಿದ್ದು, ಅಕ್ಟೋಬರ್ 28ರಿಂದಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸುವುದಾಗಿ ತಿಳಿಸಿದ್ದ ಅಧಿಕಾರಿಗಳು ಎರಡು ವಾರಗಳು ಕಳೆದರೂ ಒಂದೇ ಒಂದು ಒತ್ತುವರಿ ಪ್ರಕರಣವನ್ನು ತೆರವುಗೊಳಿಸಿಲ್ಲ. ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರೆ ಇನ್ನೂ ಸಂಪೂರ್ಣವಾಗಿ ಮಾರ್ಕಿಂಗ್ ಆಗಿಲ್ಲ ಎಂಬ ಹಾರಿಕೆ ಉತ್ತರ ನೀಡುತ್ತಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ನಗರದಲ್ಲಿ ವಾರದೊಳಗೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸುವುದಾಗಿ ಉಪಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಮೇಯರ್ ಗಂಗಾಬಿಕೆ ಅವರು ಮಾಧ್ಯಮಗಳಿಗೆ ಹಲವಾರು ಬಾರಿ ಹೇಳಿಕೆ ನೀಡಿದ್ದಾರೆ. ಜತೆಗೆ ಈ ಮೊದಲಿನಂತೆ ಕಾರ್ಯಾಚರಣೆಯನ್ನು ಯಾವುದೇ ಕಾರಣಕ್ಕೂ ಅರ್ಧಕ್ಕೆ ನಿಲ್ಲಿಸುವುದಿಲ್ಲವೆಂದು ಹೇಳಿಕೆ ನೀಡಿದ್ದರು.
ಕಳೆದ ಎರಡು ವರ್ಷಗಳಂತೆ ನಗರದಲ್ಲಿ ಉತ್ತಮ ಮಳೆಯಾಗಿದ್ದರೆ ಹಲವಾರು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿ ಜನರು ತೊಂದರೆ ಅನುಭವಿಸುತ್ತಿದ್ದರು. ಅದೃಷ್ಟವಶಾತ್ ಈ ಬಾರಿ ನಗರದಲ್ಲಿ ಹೆಚ್ಚಿನ ಮಳೆಯಾಗಿಲ್ಲ. ಆದರೆ, ಅಧಿಕಾರಿಗಳು ಮಾತ್ರ ಒತ್ತುವರಿ ತೆರವುಗೊಳಿಸಲು ಮುಂದಾಗದೆ ತಮಗೂ ಒತ್ತುವರಿಗೂ ಏನೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ಟೀಕೆಗಳಿಗೆ ಕಾರಣವಾಗಿದೆ.
ವರದಿ ಬಂದರೂ ಕ್ರಮವಿಲ್ಲ: ಪಾಲಿಕೆಯ ಅಧಿಕಾರಿಗಳು ಮೊದಲು ಭೂಮಾಪಕರಿಲ್ಲ ಕಾರಣ ಒತ್ತುವರಿ ತೆರವು ಕಾರ್ಯ ನಡೆಸುತ್ತಿಲ್ಲ ಎನ್ನುತ್ತಿದ್ದರು. ಆ ಹಿನ್ನೆಲೆಯಲ್ಲಿ ಪರಮೇಶ್ವರ್ ಕಂದಾಯ ಇಲಾಖೆಗೆ ಸೂಚನೆ ನೀಡಿ 10 ಭೂಮಾಪಕರನ್ನು ನೇಮಿಸುವಂತೆ ಸೂಚನೆ ನೀಡಿದ್ದರು.
ಅದರಂತೆ ಪಾಲಿಕೆಗೆ ಪಾಲಿಕೆಗೆ ನಿಯೋಜನೆಗೊಂಡಿದ್ದ ಭೂ ಮಾಪಕರು ಸರ್ವೆ ನಡೆಸಿ ವರದಿಯನ್ನು ಪಾಲಿಕೆಯ ಅಧಿಕಾರಿಗಳಿಗೆ ನೀಡಿದ್ದರು. ಅದರಂತೆ 21 ಪ್ರದೇಶಗಳಲ್ಲಿನ 242 ಸರ್ವೆ ಸಂಖ್ಯೆಗಳ ಆಸ್ತಿ ರಾಜಕಾಲುವೆ ಒತ್ತುವರಿ ಪತ್ತೆ ಮಾಡಿಕೊಟ್ಟಿದ್ದರು. ಆ ಹಿನ್ನೆಲೆಯಲ್ಲಿ ಒತ್ತುವರಿ ಕಾರ್ಯಾಚರಣೆ ಆರಂಭಿಸುವುದಾಗಿಯೂ ಅಧಿಕಾರಿಗಳು ತಿಳಿಸಿದ್ದರು. ಆದರೆ, ಈವರೆಗೆ ಕಾರ್ಯಾಚರಣೆಗೆ ಆರಂಭಿಸಲು ಮುಂದಾಗಿಲ್ಲ.
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸುವಂತೆ ಉಪಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಆದರೆ, ಅಧಿಕಾರಿಗಳು ಒತ್ತುವರಿಯ ತೆರವುಗೊಳಿಸಲು ಮಾರ್ಕಿಂಗ್ ಮಾಡಿದರೆ, ಒತ್ತುವರಿದಾರರು ಅಳಿಸುತ್ತಿದ್ದಾರೆ ಎನ್ನುತ್ತಿದ್ದಾರೆ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮಕೈಗೊಳ್ಳುವಂತೆ ಸೂಚಿಸುತ್ತೇನೆ.
-ಗಂಗಾಂಬಿಕೆ, ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ