ಭಾವಪೂರ್ಣ ವಿದಾಯ


Team Udayavani, Nov 14, 2018, 11:52 AM IST

bhavapoorna.jpg

ಬೆಂಗಳೂರು: ಅನಂತ ಕುಮಾರ್‌ ಅವರ ಪಾರ್ಥಿವ ಶರೀರ ಚಾಮರಾಜಪೇಟೆಯ ಹಿಂದೂ ರುದ್ರಭೂಮಿ ಪ್ರವೇಶಿಸುತ್ತಿದ್ದಂತೆ ಕಾರ್ಯಕರ್ತರಿಂದ “ಅನಂತ ಕುಮಾರ್‌ ಅಮರ್‌ ರಹೇ’ ಎಂಬ ಘೋಷಣೆ ಒಂದು ಕಡೆ, ಮತ್ತೂಂದೆಡೆ ನೀರವ ಮೌನ.

ನ್ಯಾಷನಲ್‌ ಕಾಲೇಜು ಮೈದಾನದಿಂದ ಮೆರವಣಿಗೆಯಲ್ಲಿ ನೇರವಾಗಿ ಪಾರ್ಥಿವ ಶರೀರವನ್ನು ಹಿಂದೂ ರುದ್ರಭೂಮಿಗೆ ತರಲಾಯಿತು. ಅಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಮಾಜಿ ಉಪ ಪ್ರಧಾನಿ ಎಲ್‌.ಕೆ.ಅಡ್ವಾಣಿ ಸಹತ ಕೇಂದ್ರ ಸಚಿವರು, ರಾಜ್ಯದ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್‌ ಮೊದಲಾದವರು ಪಾರ್ಥಿವ ಶರೀರಕ್ಕೆ ಅಂತಿಮವಾಗಿ ಪುಷ್ಪ ನಮನ ಸಲ್ಲಿಸಿದರು.

ಪಾರ್ಥಿವ ಶರೀರ ರುದ್ರಭೂಮಿ ಪ್ರವೇಶಕ್ಕೂ ಮೊದಲೇ ಪುರೋಹಿತರು ಅಂತ್ಯ ಸಂಸ್ಕಾರಕ್ಕೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಂಡಿದ್ದರು. ಬ್ರಾಹ್ಮಣ ವೈದಿಕ ವಿಧಿವಿಧಾನದಂತೆ ಅಂತ್ಯ ಸಂಸ್ಕಾರ ನೆರವೇರಿದ್ದು, ಅನಂತಕುಮಾರ್‌ ಅವರ ಸಹೋದರ ನಂದಕುಮಾರ್‌ ಅಂತ್ಯಕ್ರಿಯೆ ನೆರವೇರಿಸಿದರು.

ಇದಕ್ಕೂ ಮುನ್ನ ಪಾರ್ಥಿವ ಶರೀರಕ್ಕೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಸೈನ್ಯದ ಮುಖ್ಯಸ್ಥರು ಅನಂತಕುಮಾರ್‌ ಅವರ ಕುಟುಂಬದ ಸದಸ್ಯರಿಗೆ ನೀಡಿದರು. ಸರ್ಕಾರ ಮತ್ತು ಸೈನ್ಯದಿಂದ ಪಾರ್ಥಿವ ಶರೀರವನ್ನು ಕುಟುಂಬಕ್ಕೆ ವರ್ಗಾಯಿಸಿದ ನಂತರ ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ನೆರವೇರಿಸಿ, ಸರಿಸುಮಾರು ಮಧ್ಯಾಹ್ನ 2.50ರ ವೇಳೆಗೆ ಅಗ್ನಿ ಸ್ಪರ್ಶ ಮಾಡಲಾಯಿತು.

ಪಾರ್ಥಿವ ಶರೀರ ರುದ್ರಭೂಮಿ ಪ್ರವೇಶಿಸುವ ಮೊದಲೆ ಗಣ್ಯರಿಗೆ ಹಾಗೂ ಸಾರ್ವಜನಿಕರಿಗೆ ಅಂತ್ಯಕ್ರಿಯೆ ವೀಕ್ಷಿಸಲು ಪ್ರತ್ಯೇಕವಾದ ವ್ಯವಸ್ಥೆ ಮಾಡಲಾಗಿತ್ತು. ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ಆರಂಭವಾಗಿ, ಅಗ್ನಿ ಸ್ಪರ್ಶದವರೆಗೂ ಸ್ಮಶಾನದ ಒಳಗೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ಅನಂತಕುಮಾರ್‌ ಅವರ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಅನಂತಕುಮಾರ್‌ ಅಮರ್‌ ರಹೇ, ವಂದೇ ಮಾತರಂ ಇತ್ಯಾದಿ ಘೋಷಣೆ ಮುಗಿಲು ಮುಟ್ಟಿತ್ತು.

ಭಾವಪೂರ್ಣ ಮೆರವಣಿಗೆ: ಅನಂತಕುಮಾರ್‌ ಅವರ ಅಂತಿಮ ಯಾತ್ರೆಯ ಹೊಣೆ ಸೇನಾಪಡೆಗೆ ವಹಿಸಲಾಗಿತ್ತು. ಮಂಗಳವಾರ ಬೆಳಗ್ಗೆ 7.45ರ ಸುಮಾರಿಗೆ ಭೂ ಸೇನೆ, ವಾಯು ಸೇನೆ ಮತ್ತು ನೌಕದಳದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಬಸವನಗುಡಿಯಲ್ಲಿರುವ ಸಚಿವರ ಮನೆಯಿಂದ ರಾಣೋಜಿ ರಾವ್‌ ರಸ್ತೆ, ಎಚ್‌.ಬಿ.ಸಮಾಜ ರಸ್ತೆ, ಲಾಲ್‌ಬಾಗ್‌ ಪಶ್ಚಿಮ ದ್ವಾರ ರಸ್ತೆ ಮಾರ್ಗವಾಗಿ ಮಿನರ್ವ ಸರ್ಕಲ್‌, ಜೆ.ಸಿ. ರಸ್ತೆ, ಭಾರತ್‌ ಜಂಕ್ಷನ್‌ ಮೂಲಕ ಸಂಪಿಗೆ ರಸ್ತೆ ಮಾರ್ಗವಾಗಿ ಬೆಳಗ್ಗೆ 9 ಗಂಟೆ ಸುಮಾರಿಗೆ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ತರಲಾಯಿತು.

ಬಳಿಕ ಸುಮಾರು ಒಂದೂವರೆ ತಾಸು ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಯಿತು. ನಂತರ ಸಂಪಿಗೆ ರಸ್ತೆ ಮಾರ್ಗವಾಗಿ ಲಾಲ್‌ಬಾಗ್‌ ಪಶ್ಚಿಮ ದ್ವಾರ, ಶೇಷ ಮಹಲ್‌ ಜಂಕ್ಷನ್‌-ಮೇಲು ಸೇತುವೆ ಮೂಲಕ ಶಂಕರಮಠ, ವಾಣಿವಿಲಾಸ ಜಂಕ್ಷನ್‌ ಮಾರ್ಗವಾಗಿ 11 ಗಂಟೆ ಸುಮಾರಿಗೆ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಮತ್ತೂಮ್ಮೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು.

ಅಪರಾಹ್ನ 12.30ರ ಸುಮಾರಿಗೆ ನ್ಯಾಷನಲ್‌ ಕಾಲೇಜು ಮೈದಾನದಿಂದ ಪಿಎಂಕೆ ರಸ್ತೆ ಜಂಕ್ಷನ್‌ ಮಾರ್ಗವಾಗಿ ರಾಮಕೃಷ್ಣ ಆಶ್ರಮ ಬಿ.ಟಿ.ರಸ್ತೆ ಚಾಮರಾಜಪೇಟೆ 5ನೇ ಮುಖ್ಯ ರಸ್ತೆ ಜಂಕ್ಷನ್‌,ಟಿ.ಆರ್‌.ಮಿಲ್‌ ರಸ್ತೆ ಜಂಕ್ಷನ್‌ ವಿಠಲನಗರ ಜಂಕ್ಷನ್‌ ಮಾರ್ಗವಾಗಿ ಚಾಮರಾಜಪೇಟೆಯ ಹಿಂದೂ ರುದ್ರಭೂಮಿವರೆಗೆ ಮೆರವಣಿಗೆ ಮಾಡಲಾಯಿತು. ರಸ್ತೆಯುದಕ್ಕೂ ಸೇನಾ ಬ್ಯಾಂಡ್‌ ಬಾರಿಸುವ ಮೂಲಕ ಅಂತಿಮ ಗೌರವ ಸೂಚಿಸಲಾಯಿತು.

ಇದಕ್ಕೂ ಮೊದಲು ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯ ಸುತ್ತ-ಮುತ್ತ ಭಾರೀ ಪೊಲೀಸ್‌ ಬಂದೋ ಬಸ್ತ್ ನಿಯೋಜಿಸಲಾಗಿತ್ತು. ಮಧ್ಯಾಹ್ನ 1 ಗಂಟೆಯಿಂದಲೇ ಟಿ.ಆರ್‌.ಮಿಲ್‌ ಜಂಕ್ಷನ್‌ನಿಂದ ಜಿಂಕೆ ಪಾರ್ಕ್‌ಗೆ ಸಂಪರ್ಕಿಸುವ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. 

ನ್ಯಾಷನಲ್‌ ಕಾಲೇಜು ಮೈದಾನ ಹಾಗೂ ಚಾಮರಾಜಪೇಟೆಯ ಹಿಂದೂರುದ್ರಭೂಮಿ ಸುತ್ತ-ಮುತ್ತ ಮೂವರು ಡಿಸಿಪಿಗಳ ನೇತೃತ್ವದಲ್ಲಿ ಸಂಚಾರಿ ವಿಭಾಗದ ಪೊಲೀಸರು, ಕೆಎಸ್‌ಆರ್‌ಪಿ ತುಕಡಿ, ಸ್ಥಳೀಯ ಪೊಲೀಸರು ಸೇರಿದಂತೆ 1,300 ಮಂದಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಮಲ್ಲೇಶ್ವರ ಬಿಜೆಪಿ ಕಚೇರಿ ಎದುರು ಉತ್ತರ ವಿಭಾಗದ ಡಿಸಿಪಿ ಚೇತನ್‌ ಸಿಂಗ್‌ ರಾಥೋಡ್‌ ನೇತೃತ್ವದಲ್ಲಿ ಮೂವರು ಎಸಿಪಿ, 10 ಮಂದಿ ಇನ್‌ಸ್ಪೆಕ್ಟರ್‌, 20 ಮಂದಿ ಪಿಎಸ್‌ಐ ಸೇರಿದಂತೆ 300ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

ಸಾಂತ್ವನ ಹೇಳಿ ಸಂತೈಸಿದ ಅಡ್ವಾಣಿ: ಹಿರಿಯ ನಾಯಕರಾದ ಲಾಲ್‌ಕೃಷ್ಣ ಅಡ್ವಾಣಿ ಹಾಗೂ ಅವರ ಪುತ್ರಿ ಪ್ರತಿಭಾ ಅಡ್ವಾಣಿಯವರು ಅನಂತಕುಮಾರ್‌ ಕುಟುಂಬದ ಸದಸ್ಯರನ್ನು ಆತ್ಮೀಯವಾಗಿ ಸಂತೈಸಿ, ಸಾಂತ್ವನ ಹೇಳಿದರು. ತೇಜಸ್ವಿನಿ ಅನಂತ ಕುಮಾರ್‌ ಅವರ ಕೈ ಹಿಡಿದು, ಸಾಂತ್ವಾನ ಹೇಳುವಾಗ ಅಡ್ವಾಣಿಯವರ ಕಣ್ಣಂಚು ತೇವವಾಗಿತ್ತು.

ಅಡ್ವಾಣಿಯವರ ಮಗಳು ಪ್ರತಿಭಾ, ಅಂತ್ಯ ಸಂಸ್ಕಾರದ ವಿಧಿ ವಿಧಾನ ಮುಗಿಯುವವರೆಗೂ ತೇಜಸ್ವಿನಿ ಅವರ ಜತೆಗೇ ಇದ್ದು ಸಂತೈಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಪಿಯುಷ್‌ ಗೋಯಲ್‌, ರಾಮದಾಸ್‌ ಅಠಾವಳೆ, ಧರ್ಮೇಂದ್ರ ಪ್ರಧಾನ್‌ ಮೊದಲಾದವರು ಅನಂತ ಕುಮಾರ್‌ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸಾ.ರ.ಮಹೇಶ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಏರ್‌ ಮಾರ್ಷಲ್‌ ಆರ್‌.ಕೆ.ಎಸ್‌.ಬಡೂರಿಯಾ, ಸೇನಾ ಸಿಬ್ಬಂದಿ ಮುಖ್ಯಸ್ಥ ಎಸ್‌.ಪಿ.ಯಾದವ್‌ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.