ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಕೆಆರ್‌ಎಸ್‌ ಅಭಿವೃದ್ಧಿ


Team Udayavani, Nov 15, 2018, 11:06 AM IST

blore-3.jpg

ಬೆಂಗಳೂರು: ವಿಶ್ವವಿಖ್ಯಾತ ಕೆಆರ್‌ಎಸ್‌ ಉದ್ಯಾನವನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ.

1200 ಕೋಟಿ ರೂ. ವೆಚ್ಚದಲ್ಲಿ 125 ಅಡಿ ಕಾವೇರಿ ಮಾತೆ ಪ್ರತಿಮೆ ಒಳಗೊಂಡ 360 ಅಡಿ ಎತ್ತರದ ಮ್ಯೂಸಿಯಂ ಸಮುತ್ಛಯ ಗೋಪುರ ಸಮೇತ ಗಾಜಿನ ಮನೆ, ವೀಕ್ಷಣೆ ಗೋಪುರ, ಬ್ಯಾಂಡ್‌ ಸ್ಟಾಂಡ್‌, ಒಳಗಾಂಗಣ ಕ್ರೀಡಾಂಗಣ ಮತ್ತಿತರ ಐತಿಹ್ಯ ಸಾರುವ
ಕಟ್ಟಡಗಳನ್ನು ಡಿಸ್ನಿಲ್ಯಾಂಡ್‌ ಮಾದರಿಯು ಹೊಂದಿರಲಿದೆ. ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ನಂತರ ಮಾಹಿತಿ ನೀಡಿದ ಸಚಿವ ಡಿ.ಕೆ. ಶಿವಕುಮಾರ್‌, ಜೈಪುರದ ಹಿರಿಯ ಆರ್ಕಿಟೆಕ್ಟ್ ಕನ್ಸಲ್‌ ಟೆಂಟ್‌ ಸಂಸ್ಥೆ ನೀಡಿದ ಪ್ರಾತ್ಯಕ್ಷಿಕೆ ಆಧರಿಸಿ ಮತ್ತಷ್ಟು ಸಲಹೆ-ಸೂಚನೆಗಳನ್ನು ನೀಡಲಾಗಿದೆ. ಈ ಪಾರಂಪರಿಕ ತಾಣದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಬೃಂದಾವನವನ್ನು ವಿಶ್ವಪ್ರವಾಸಿ ತಾಣಗಳಲ್ಲಿ ಅಗ್ರಗಣ್ಯ ಸ್ಥಾನದಲ್ಲಿ ನಿಲ್ಲಿಸುವುದು ಯೋಜನೆಯ ಉದ್ದೇಶ.

ಯೋಜನೆಯ ಒಟ್ಟು ವೆಚ್ಚ 1200 ಕೋಟಿ ರೂ. ಆಗಲಿದ್ದು, ಜಾಗತಿಕ ಟೆಂಡರ್‌ ಮೂಲಕ ವಿಶ್ವಮಟ್ಟದ ಸಂಸ್ಥೆಗೆ ಯೋಜನೆ ಗುತ್ತಿಗೆ ವಹಿಸಿಕೊಡಲಾಗುವುದು. ಆದರೆ, ಸ್ಥಳಾವಕಾಶ ಬಿಟ್ಟು ರಾಜ್ಯ ಸರ್ಕಾರ ಒಂದು ಪೈಸೆ ಬಂಡವಾಳವನ್ನೂ ಹೂಡುವುದಿಲ್ಲ. ಟೆಂಡರ್‌ನಲ್ಲಿ ಭಾಗವಹಿಸುವ ಸಂಸ್ಥೆ ಉತ್ತಮ ಆರ್ಥಿಕ ಹಿನ್ನೆಲೆ ಹೊಂದಿದ್ದು, ಕಲಾತ್ಮಕ ವಿನ್ಯಾಸದಲ್ಲಿ ಜಾಗತಿಕ ಮಟ್ಟದ
ನೈಪುಣ್ಯತೆ ಸಹ ಹೊಂದಿದೆ ಎಂದು ಹೇಳಿದರು.

ಈಗಿರುವ ದೋಣಿ ವಿಹಾರ ಸರೋವರದ ಪಕ್ಕದಲ್ಲಿ ಮತ್ತೂಂದು ಸರೋವರ ನಿರ್ಮಿಸಲಾಗುವುದು. ಅದರ ಮಧ್ಯದಲ್ಲಿ 360 ಅಡಿ ಎತ್ತರದ ಮ್ಯೂಸಿಯಂ ಸಮುತ್ಛಯ ಅಸ್ತಿತ್ವಕ್ಕೆ ಬರಲಿದೆ. ಈ ಸಮುತ್ಛಯದ ಮೇಲ್ಭಾಗದಲ್ಲಿ ಕಾವೇರಿ ಮಾತೆಯ 125 ಅಡಿ ಎತ್ತರದ
ಪ್ರತಿಮೆ ಇರಲಿದೆ. ಕಾವೇರಿ ಮಾತೆಯ ಪಾದತಲದಲ್ಲಿ ಮ್ಯೂಸಿಯಂ ಕಟ್ಟಡ ಬರಲಿದೆ. ಬೃಂದಾವನದ ಎರಡೂ ಕಡೆಯಿಂದ ಅಣೆಕಟ್ಟೆಯ ವಿಹಂಗಮ ನೋಟ ಗೋಚರವಾಲಿದೆ. ಮ್ಯೂಸಿಯಂನಲ್ಲಿ ಕೆಆರ್‌ಎಸ್‌, ಮೈಸೂರು, ಕರ್ನಾಟಕದ ಐತಿಹ್ಯ ಸಾರುವ ಕಲಾತ್ಮಕ, ಪ್ರಾಚ್ಯವಸ್ತುಗಳು ಇರಲಿವೆ.

ಮೈಸೂರು ಹಾಗೂ ಮಂಡ್ಯದ ಕೆಆರ್‌ಎಸ್‌ ಈಗಾಗಲೇ ಜಗತøಸಿದ್ಧವಾಗಿವೆ. ಇವುಗಳನ್ನು ವಿಶ್ವದಲ್ಲೇ ಅಗ್ರಗಣ್ಯ ಪ್ರವಾಸಿ ಆಕರ್ಷಣೆಯ ತಾಣವಾಗಿ ಪರಿ ವರ್ತಿಸುವುದು ಯೋಜನೆಯ ಉದ್ದೇಶ. ಈಗ ಬೃಂದಾ ವನದಿಂದ ರಾಜ್ಯ ಸರ್ಕಾರಕ್ಕೆ ಬರುತ್ತಿರುವ ವಾರ್ಷಿಕ ಆದಾಯ 30 ಕೋಟಿ ರೂ. ಎಂದು ತಿಳಿಸಿದರು.

ಎರಡು ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿ ಹಾಕಿಕಳೊಳ್ಳಲಾಗಿದ್ದು ಯೋಜನಾ ವರದಿ ಹಾಗೂ ಒಪ್ಪಂದ ಕುರಿತು ನ.20ರಂದು ಕಾವೇರಿ ನೀರಾವರಿ ನಿಗಮದ ಆಡಳಿತ ಮಂಡಳಿ ಸಭೆ, ಸರ್ಕಾರದ ಉನ್ನತ ಮಟ್ಟದ ಸಮಿತಿಯಲ್ಲಿ ಕೂಲಂಕುಷ ಪರಿಶೀಲನೆ ನಡೆದು ನಂತರ ಸಚಿವ ಸಂಪುಟ ಸಭೆಯಲ್ಲಿ ಜಾಗತಿಕ ಟೆಂಡರ್‌ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು
ಹೇಳಿದರು.

ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಕಾರ್ಯದರ್ಶಿ ಜೈ ಪ್ರಕಾಶ್‌, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಡಾ.ಎಸ್‌.ಸುಬ್ರಹ್ಮಣ್ಯ, ಪ್ರವಾಸೋದ್ಯಮ ಇಲಾಖೆ
ಕಾರ್ಯದರ್ಶಿ ಅನಿಲ್‌ಕುಮಾರ್‌, ಕಾವೇರಿ ನೀರಾವರಿ ನಿಗಮ ವ್ಯವಸ್ಥಾಪಕ ಎಚ್‌.ಎಲ್‌.ಪ್ರಸನ್ನ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.