ಜಕ್ಕೂರು ವಾರ್ಡ್ನ ಬೆಳ್ಳಹಳ್ಳಿವೃತ್ತಕ್ಕೆ ಟಿಪ್ಪು ಸುಲ್ತಾನ್ ಹೆಸರು?
Team Udayavani, Nov 15, 2018, 11:47 AM IST
ಬೆಂಗಳೂರು: ಜಕ್ಕೂರು ವಾರ್ಡ್ನ ಬೆಳ್ಳಹಳ್ಳಿ ವೃತ್ತಕ್ಕೆ “ಟಿಪ್ಪು ಸುಲ್ತಾನ್ ವೃತ್ತ’ ಎಂದು ನಾಮಕರಣ ಮಾಡುವ ಪ್ರಸ್ತಾವವನ್ನು ಕೌನ್ಸಿಲ್ ಸಭೆ ಮುಂದೆ ತರುವ ಬಿಬಿಎಂಪಿ ಕ್ರಮ ಆಡಳಿತ ಹಾಗೂ ವಿರೋಧ ಪಕ್ಷದ ನಡುವೆ ವಿವಾದ ಸೃಷ್ಟಿಸುವ ಸಾಧ್ಯತೆಯಿದೆ.
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರು ವಾರ್ಡ್ನ ಬೆಳ್ಳಹಳ್ಳಿ ವೃತ್ತಕ್ಕೆ “ಬೆಳ್ಳಹಳ್ಳಿ ಟಿಪ್ಪು ಸುಲ್ತಾನ್ ವೃತ್ತ’ ಎಂದು ನಾಮಕರಣ ಮಾಡಬೇಕು ಎಂದು ಇಸ್ಲಾಮಿಯಾ ಟ್ರಸ್ಟ್ ಹಾಗೂ ಇತರೆ ಸಂಸ್ಥೆಗಳು ಬಿಬಿಎಂಪಿ ಆಯುಕ್ತರು ಹಾಗೂ ಸ್ಥಳೀಯ ಶಾಸಕ ಕೃಷ್ಣಬೈರೇಗೌಡ ಅವರಿಗೆ ಮನವಿ ನೀಡಿವೆ. ಅದರಂತೆ ಕೃಷ್ಣಬೈರೇಗೌಡ ಅವರು ವೃತ್ತಕ್ಕೆ ಟಿಪ್ಪು ಹೆಸರು ನಾಮಕರಣ ಮಾಡಿ, ನಾಮಫಲಕ ಅಳವಡಿಸಲು ಕ್ರಮಕೈಗೊಳ್ಳುವಂತೆ ಜಂಟಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಅದರಂತೆ ವೃತ್ತಕ್ಕೆ ಟಿಪ್ಪು ಸುಲ್ತಾನ್ ವೃತ್ತ ಎಂದು ಹೆಸರಿಡಲು ಜಂಟಿ ಆಯುಕ್ತರು ಕಡತವನ್ನು ಆಯುಕ್ತರಿಗೆ ಸಲ್ಲಿಸಿದ್ದಾರೆ. ಅದಕ್ಕೆ ಒಪ್ಪಿಗೆ ನೀಡಿರುವ ಆಯುಕ್ತರು ಅಂತಿಮ ತೀರ್ಮಾನ ಕೈಗೊಳ್ಳುವ ಕುರಿತಂತೆ ಪ್ರಸ್ತಾವನೆಯನ್ನು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಹಾಗೂ ಪಾಲಿಕೆಯ ಕೌನ್ಸಿಲ್ ಸಭೆ ಮುಂದೆ ಮಂಡಿಸಲು ಮುಂದಾಗಿದ್ದು, ಶೀಘ್ರ ಪ್ರಸ್ತಾವನೆ ಕೌನ್ಸಿಲ್ ಸಭೆಯ ಮುಂದೆ ಬರುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ