ಕ್ಯಾಮೆರಾ ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಆರೋಪಿ ಬಂಧನ
Team Udayavani, Nov 16, 2018, 11:38 AM IST
ಬೆಂಗಳೂರು: ಸಾಲ ತೀರಿಸಲು ಕ್ಯಾಮೆರಾಗಳನ್ನು ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಆಂಧ್ರಪ್ರದೇಶ ಮೂಲದ ಆರೋಪಿಯನ್ನು ಸಂಜಯ್ನಗರ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಮಹೇಶ್ (27) ಬಂಧಿತ. ಆರೋಪಿಯಿಂದ ಆರೂವರೆ ಲಕ್ಷ ರೂ. ಮೌಲ್ಯದ 6 ಕ್ಯಾಮೆರಾಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಕಳೆದ ಸೆಪ್ಟೆಂಬರ್ನಲ್ಲಿ ಯಶವಂತಪುರ, ಮಹಾಲಕ್ಷಿ ಲೇಔಟ್, ಸಂಜಯ್ನಗರ ಸೇರಿ ವಿವಿಧೆಡೆ ಕೆಲ ಸ್ಟುಡಿಯೋಗಳಿಗೆ ನೇರವಾಗಿ ಭೇಟಿ ಕೊಟ್ಟು ಹೆಚ್ಚಿನ ಬಾಡಿಗೆ ಕೊಡುವುದಾಗಿ ಹೇಳಿ ಲಕ್ಷಾಂತರ ರೂ. ಮೌಲ್ಯದ ಕ್ಯಾಮೆರಾಗಳನ್ನು ಪಡೆಯುತ್ತಿದ್ದ. ಬಳಿಕ ಬಾಡಿಗೆ ಹಣ ಕೊಡದೆ, ಕ್ಯಾಮೆರಾವನ್ನೂ ಹಿಂದಿರುಗಿಸದೆ ವಂಚಿಸುತ್ತಿದ್ದ.
ಈ ಸಂಬಂಧ ಮಹಾಲಕ್ಷಿ ಲೇಔಟ್ ಹಾಗೂ ಸಂಜಯ್ನಗರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಪ್ರಕರಣ ಸಂಜಯ್ನಗರ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ