ಹೈಕೋರ್ಟ್ ಮೆಟ್ಟಿಲೇರಿದ ಪತ್ರಕರ್ತ ರವಿ ಬೆಳಗೆರೆ
Team Udayavani, Nov 16, 2018, 11:38 AM IST
ಬೆಂಗಳೂರು: ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿದ ಆರೋಪದಡಿ ಸಿಸಿಬಿ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ಹಾಗೂ ಈ ಸಂಬಂಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ರವಿ ಬೆಳಗೆರೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಸಿಸಿಬಿ ಪೊಲೀಸರಿಂದ ಸೆಷನ್ಸ್ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಕೆಯಾಗಿದ್ದು, ವಿಚಾರಣೆಗೆ ಬರಬೇಕಿದೆ. ಆದರೆ ಪ್ರಕರಣದಲ್ಲಿ ತನ್ನನ್ನು ಆರೋಪಿಯನ್ನಾಗಿಸಿರುವುದು ಕಾನೂನು ಬಾಹಿರ. ಪೊಲೀಸರು ಮಾಡಿರುವ ಆರೋಪಗಳಿಗೆ ಸಾಕ್ಷ್ಯಾಧಾರಗಳೇ ಇಲ್ಲ. ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಡಿ ಸಿಸಿಬಿ ಪೊಲೀಸರು ಕಳೆದ ವರ್ಷ ಡಿಸೆಂಬರ್ನಲ್ಲಿ ರವಿ ಬೆಳಗೆರೆ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ಪ್ರಕರಣದಲ್ಲಿ ಕೆಲ ದಿನ ನ್ಯಾಯಾಂಗ ಬಂಧನದಲ್ಲಿದ್ದ ರವಿ ಬೆಳಗೆರೆ, ಸದ್ಯ ಶರತ್ತುಬದ್ಧ ಜಾಮೀನು ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ