ಕೃಷಿ ಮೇಳದಲ್ಲಿ ಮೊದಲ ದಿನವೇ ಜನ ಸಾಗರ


Team Udayavani, Nov 16, 2018, 11:38 AM IST

krushi.jpg

ಬೆಂಗಳೂರು: ರಾಗಿ, ಭತ್ತ, ಜೋಳ, ತೆಂಗು, ಅಡಕೆ ಹೀಗೆ ನಾನಾ ಬಗೆಯೆ ಹೊಸ ತಳಿಗಳು, ಕೃಷಿ ಉತ್ಪಾದನ ಸಾಮರ್ಥ್ಯ ಹೆಚ್ಚಿಸಬಲ್ಲ ವಿವಿಧ ಮಾದರಿಯ ಪರಿಕರಗಳು, ಕುರಿ, ಕೋಳಿ, ಮೀನು ಸಾಕಾಣಿಕೆ, ಹೈನುಗಾರಿಕೆಯ ದರ್ಶನದ ಕೃಷಿಮೇಳ 2018ಕ್ಕೆ ಗುರುವಾರ ಚಾಲನೆ ಸಿಕ್ಕಿದೆ.

ಮೊದಲ ದಿನ ರಾಜ್ಯ ಹಾಗೂ ಹೊರ ರಾಜ್ಯದ ಸಾವಿರಾರು ಕೃಷಿಕರು, ಕೃಷಿ ತಜ್ಞರು, ಸಾಧಕರು, ಪ್ರೋತ್ಸಾಹಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ಕೃಷಿ ಹಾಗೂ ತೋಟಗಾರಿಕಾ ಬೆಳೆಯ ಪ್ರಾತ್ಯಕ್ಷತೆ, ವಸ್ತು ಪ್ರದರ್ಶನ, ಜೈವಿಕ ಇಂಧನ ಹಾಗೂ ಜೈವಿಕ ತಂತ್ರಜ್ಞಾನದ ಬಳಕೆ, ಎರೆಹುಳುವಿನ ಗೊಬ್ಬರ ಘಟಕದ ಜತೆಗೆ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟದ 600ಕ್ಕೂ ಅಧಿಕ ಮಳಿಗೆಳು  ಮೇಳದ ವಿಶೇಷವಾಗಿದೆ.

ಗುರುವಾರ ಬೆಳಗ್ಗೆ 11.30ರ ಸುಮಾರಿಗೆ ಕೃಷಿ ಮೇಳಕ್ಕೆ ಚಾಲನೆ ಸಿಕ್ಕಿದ್ದು, ಅಷ್ಟೋತ್ತಿಗಾಗಲೇ ಬಹುತೇಕ ಎಲ್ಲ ಮಳಿಗೆಗಳಲ್ಲಿ ವಸ್ತು ಪ್ರದರ್ಶನ ಮತ್ತು ಮಾರಾಟಕ್ಕೆ ಸಿದ್ಧವಾಗಿತ್ತು. ಸಮಗ್ರ ಕೃಷಿ ಪದ್ಧತಿಯ ಪ್ರಾತ್ಯಕ್ಷತೆಯ ವ್ಯವಸ್ಥೆಯೂ ಮಾಡಲಾಗಿತ್ತು. ಉದ್ಘಾಟನಾ ಕಾರ್ಯಕ್ರಮದ ನಂತರ ವೇದಿಕೆಯಲ್ಲಿ ಕೃಷಿ ಕಲಾವಿದರಿಂದ ಜಾನಪದ ಗೀತೆ ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬೆಳಗ್ಗೆಯಿಂದ ಸಂಜೆಯ ವರೆಗೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ಕೃಷಿ ವಿಷಯದ ಆಸಕ್ತರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮೇಳಕ್ಕೆ ಆಗಮಿಸಿದ್ದರು.

ಈ ವರ್ಷ ಕೃಷಿ ಮೇಳದ ಇನ್ನೊಂದು ವಿಶೇಷವೆಂದರೆ, ಮೇಳಕ್ಕೆ ಬಂದಿರುವ ರೈತರಿಗೆ ಉಚಿತ ಆರೋಗ್ಯ ತಪಾಸಣಾ ವ್ಯವಸ್ಥೆ  ಮಾಡಲಾಗಿದೆ. ಮಧುಮೇಹ, ರಕ್ತದೊತ್ತಡ ಸೇರಿದಂತೆ ಆರೋಗ್ಯ ತಪಾಸಣೆಯ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ದಿನವೂ ಇದರ ವ್ಯವಸ್ಥೆ ಇರುತ್ತದೆ. ದ್ವಿಚಕ್ರ ವಾಹನ ಹಾಗೂ ಕಾರು ಮೊದಲಾದ ವಾಹನಗಳ ಪಾರ್ಕಿಂಗ್‌ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಮೇಳದಲ್ಲಿ ರಾಗಿಮುದ್ದೆ ಕಾಳು ಸಾರು ಊಟ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಫ‌ುಡ್‌ ಕೋರ್ಟ್‌ನಲ್ಲಿ ಊಟಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ನೂಕುನುಗ್ಗಲು ಇಲ್ಲದೆ, ಸಾವಿರಾರು ಜನರು ಏಕಕಾಲದಲ್ಲಿ ಊಟಕ್ಕೆ ಕುಳಿತುಕೊಳ್ಳಬಹುದಾದ ವ್ಯವಸ್ಥೆ ಮಾಡಲಾಗಿತ್ತು.
 
ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ: ಕೃಷಿ ಮೇಳೆ ವಿದ್ಯಾರ್ಥಿಗಳಿಗೆ ಅಧ್ಯಯನ ಪ್ರವಾಸ ಇದ್ದಂತೆ. ಬೆಂಗಳೂರು ನಗರ ಹಾಗೂ ನಗರದ ಹೊರವಲಯದ ಸರ್ಕಾರಿ, ಖಾಸಗಿ ಹಾಗೂ ಖಾಸಗಿ ಅನುದಾನಿತ ಶಾಲೆಗಳಿಂದ ವಿದ್ಯಾರ್ಥಿಗಳು ಕೃಷಿ ಮೇಳಕ್ಕೆ ತಂಡೋಪತಂಡವಾಗಿ ಬಂದಿದ್ದರು.

ಕೃಷಿ ಉತ್ಪನ್ನ, ಹೈನುಗಾರಿಕೆ, ಒಳನಾಡು ಮೀನುಗಾರಿಕೆ, ಕೃಷಿ ಪರಿಕರ, ಆಹಾರ ಸಾಮಗ್ರಿ, ನರ್ಸರಿ ಹೀಗೆ ಕೃಷಿ ಮೇಳೆ ಎಲ್ಲ ಮಳಿಗೆಗಳಿಗೂ ಶಾಲಾ ಮಕ್ಕಳು  ಭೇಟಿ ನೀಡಿ, ಅಗತ್ಯ ಮಾಹಿತಿ ಕಲೆ ಹಾಕಿದರು. ಕೃಷಿ ಮೇಳವು ಶಾಲಾ ಮಕ್ಕಳಿಗೆ ಒಂದು ರೀತಿಯ ಅಧ್ಯಯನ ಪ್ರವಾಸವಾಗಿತ್ತು. ಕಾಲೇಜು ವಿದ್ಯಾರ್ಥಿಗಳು ಮಧ್ಯಾಹ್ನದ ನಂತರ ಹೆಚ್ಚಿನ ಸಂಖ್ಯೆಯಲ್ಲಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.