ಭತ್ತ ಬೆಳೆಯಲೂ ಬಂತು ಹನಿ ನೀರಾವರಿ


Team Udayavani, Nov 17, 2018, 12:43 PM IST

batta-bele.jpg

ಬೆಂಗಳೂರು: ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆಗಳಿಗೆ ನೀರಿನ ಕೊರತೆಯಿದ್ದು, ಬ್ಯಾರೇಜ್‌, ಕಾಲುವೆ ನೀರಾವರಿ ಇರುವ ಕಡೆಗಳಲ್ಲಿ ಮಾತ್ರ ಭತ್ತ ಬೆಳೆಯಲಾಗುತ್ತಿದೆ. ಆದರೆ, ಹನಿ ನೀರಾವರಿ ವಿಧಾನದಲ್ಲಿಯೂ ಭತ್ತ ಬೆಳೆಯಬಹುದು ಎಂಬ ಅಂಶ ಕೃಷಿಮೇಳದಲ್ಲಿ ಅನಾವರಣಗೊಂಡಿದೆ.

ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಾಂಪ್ರದಾಯಿಕ ಭತ್ತ ಬೆಳೆಯುವ ವಿಧಾನಕ್ಕೆ ಪರ್ಯಾಯವಾಗಿ ಮೂರು ಹೊಸ ವಿಧಾನಗಳ ಮೂಲಕವೂ ಭತ್ತ ಬೆಳೆಯಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಅದರಂತೆ “ಶ್ರೀ’ ವಿಧಾನ, “ನೇರ ಬಿತ್ತನೆ’ ಹಾಗೂ “ಹನಿ ನೀರಾವರಿ’ ಮೂಲಕ ಭತ್ತ ಬೆಳೆದು ಹೆಚ್ಚುವರಿ ಇಳುವರಿ ಪಡೆಯಬಹುದಾಗಿದೆ.

ವಿವಿಯ ವಿದ್ಯಾರ್ಥಿಗಳು ಜಿಕೆವಿಕೆಯ ಎರಡು ಎಕರೆ ಜಮೀನಿನಲ್ಲಿ ಹನಿ ನೀರಾವರಿ ಹಾಗೂ ಒಂದು ಎಕರೆ ಜಾಗದಲ್ಲಿ ಶ್ರೀ ವಿಧಾನದ ಮೂಲಕ ಭತ್ತ ಬೆಳೆದಿದ್ದು, ಉತ್ತಮ ಫ‌ಸಲು ಬಂದಿದೆ. ಮುಖ್ಯವಾಗಿ ಹನಿ ನೀರಾವರಿ ವಿಧಾನದಲ್ಲಿ, ಸಾಂಪ್ರದಾಯಿಕ ವಿಧಾನಕ್ಕಿಂತಲೂ ಶೇ.20ರಷ್ಟು ಹೆಚ್ಚು ಇಳುವರಿ ಬರಲಿದ್ದು, ಶೇ.55ರಿಂದ 60ರಷ್ಟು ನೀರು ಉಳಿತಾಯವಾಗುತ್ತದೆ ಎನ್ನುತ್ತಾರೆ ವಿದ್ಯಾರ್ಥಿಗಳು.

ಸಾಂಪ್ರದಾಯಿಕ ವಿಧಾನದಲ್ಲಿ ಭತ್ತ ಬೆಳೆಯುವಾಗ ಕನಿಷ್ಠ 5 ಸೆಂ.ಮೀ ನೀರು ಕಾಯ್ದುಕೊಳ್ಳಬೇಕಾಗುತ್ತದೆ. ಆದರೆ, ಶ್ರೀ ವಿಧಾನದಲ್ಲಿ ಮಣ್ಣು ತೇವಾಂಶದಿಂದ ಕೂಡಿದ್ದರೆ ಸಾಕಾಗುತ್ತದೆ. ಈ ವಿಧಾನದಿಂದ ಶೇ.30ರಷ್ಟು ನೀರು ಉಳಿಸಬಹುದಾಗಿದೆ. ಜತೆಗೆ ಸಾಂಪ್ರದಾಯಿಕ ವಿಧಾನದಂತೆ ಇಲ್ಲಿಯೂ ಪೈರು ನಾಟಿ ಮಾಡಬೇಕಾಗುತ್ತದೆ. ಆದರೆ, “ನೇರ ಬಿತ್ತನೆ’ ವಿಧಾನದಲ್ಲಿ ಪೈರು ಬದಲಿಗೆ, ತೇವಾಂಶದಿಂದ ಕೂಡಿರುವ ಮಣ್ಣಿಗೆ ನೇರವಾಗಿ ಬಿತ್ತನೆ ಭತ್ತ ಎಸೆಯಲಾಗುತ್ತದೆ.  

ಇನ್ನು ಹನಿ ನೀರಾವರಿ ವಿಧಾನದಲ್ಲಿ ಪೈರು ನಾಟಿ ಮಾಡುವಾಗ ಪ್ರತಿ ಸಾಲಿನ ನಡುವೆ 25-30 ಸೆಂ.ಮೀ ಅಂತರ ಕಾಯ್ದುಕೊಳ್ಳಬೇಕು. ನಂತರ ಡ್ರಿಪ್‌ ಪೈಪುಗಳ ಮೂಲಕ ಪೈರಿನ ಬೇರಿಗೆ ನೀರು ಹೋಗುವಂತೆ ವ್ಯವಸ್ಥೆ ಮಾಡಬೇಕಾಗುತ್ತದೆ. ಇದರಿಂದ ಶೇ.20ರಷ್ಟು ಹೆಚ್ಚುವರಿ ಇಳುವರಿ ಪಡೆಯುವ ಜತೆಗೆ, ಶೇ.60ರಷ್ಟು ನೀರು ಉಳಿತಾಯವಾಗಲಿದೆ ಎನ್ನುತ್ತಾರೆ ಸಂಶೋಧನಾ ವಿದ್ಯಾರ್ಥಿ ಸತೀಶ್‌.

ಟಾಪ್ ನ್ಯೂಸ್

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.