ಗರ್ಭಿಣಿಯರಿಗೂ ಸಮವಸ್ತ್ರ ಕಡ್ಡಾಯ


Team Udayavani, Nov 18, 2018, 12:26 PM IST

garbhini.jpg

ಬೆಂಗಳೂರು: ಗರ್ಭಿಣಿಯಾಗಿರುವ ಮಹಿಳಾ ಪೊಲೀಸ್‌ ಸಿಬ್ಬಂದಿ ಸಮವಸ್ತ್ರಕ್ಕೆ ಸಂಬಂಧಿಸಿದಂತೆ ರಾಜ್ಯ ಡಿಜಿಪಿ ನೀಲಮಣಿ ಎನ್‌ ರಾಜು ನಿರ್ದೇಶನದ ಪ್ರಕಾರ  ನಗರ ಪೊಲೀಸ್‌ ಆಯುಕ್ತರು ಹೊರಡಿಸಿರುವ ಮಾರ್ಗಸೂಚಿ ಚರ್ಚೆಗೆ ಗ್ರಾಸವಾಗಿದೆ.

ಗರ್ಭಿಣಿಯಾಗಿರುವ ಸಂದರ್ಭದಲ್ಲಿಯೂ ಮಹಿಳಾ ಕಾನ್‌ಸ್ಟೆಬಲ್‌ಗ‌ಳು ಪ್ಯಾಂಟ್‌ ಧರಿಸಿ ಔಟ್‌ ಶರ್ಟ್‌ ಮಾಡಿರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಆದರೆ, ಈ ಸಂದರ್ಭದಲ್ಲಿ ಪ್ಯಾಂಟ್‌ ಧರಿಸಿ ಕರ್ತವ್ಯ ನಿರ್ವಹಿಸುವುದು ಕಷ್ಟ ಎಂಬುದು ಮಹಿಳಾ ಸಿಬ್ಬಂದಿಯ ಅನಿಸಿಕೆ.

ಈ ಹಿಂದೆ ಗರ್ಭಿಣಿಯಾಗಿರುವ ಸಿಬ್ಬಂದಿ ಸೀರೆ ಧರಿಸಿ ಕರ್ತವ್ಯ ನಿರ್ವಹಿಸಬಹುದಿತ್ತು. ಆದರೆ, ಇದೀಗ ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌.ರಾಜು ಅವರ ಆದೇಶದ ಅನ್ವಯ ಗರ್ಭಿಣಿ ಮಹಿಳಾ ಸಿಬ್ಬಂದಿಯೂ ಕಡ್ಡಾಯವಾಗಿ ಪ್ಯಾಂಟ್‌- ಶರ್ಟ್‌ ಸಮವಸ್ತ್ರ ಧರಿಸಲೇಬೇಕು ಎಂದು ನಗರ ಪೊಲೀಸ್‌ ಆಯುಕ್ತ ಸುನಿಲ್‌ಕುಮಾರ್‌ ಆದೇಶ ಹೊರಡಿಸಿದ್ದಾರೆ.

ನ.17ರಿಂದ ಆದೇಶ ಜಾರಿಗೆ ಬರುವಂತೆ ನಗರ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಮಹಿಳಾ ಸಿಬ್ಬಂದಿ ಕಡ್ಡಾಯವಾಗಿ ಖಾಕಿ ಪ್ಯಾಂಟ್‌ ಮತ್ತು ಶರ್ಟ್‌(ಇನ್‌ ಶರ್ಟ್‌) ಧರಿಸಬೇಕು. ಒಂದು ವೇಳೆ ಮಹಿಳಾ ಸಿಬ್ಬಂದಿ ಗರ್ಭಿಣಿಯಾಗಿದ್ದ ಸಂದರ್ಭದಲ್ಲಿ ಈ ಬಗ್ಗೆ ವೈದ್ಯರಿಂದ ದೃಢೀಕರಣ ಪತ್ರವನ್ನು ಹಾಜರು ಪಡಿಸಿ ಸಮವಸ್ತ್ರವನ್ನು ಕಡ್ಡಾಯವಾಗಿ ಔಟ್‌ಶರ್ಟ್‌ ಮಾಡಿ ಧರಿಸಬೇಕು.

ಹೆರಿಗೆ ರಜೆಯನ್ನು ಮುಗಿಸಿಕೊಂಡು ಬಂದು ಕರ್ತವ್ಯಕ್ಕೆ ಹಾಜರಾದ ನಂತರವೂ ಕಡ್ಡಾಯವಾಗಿ ಖಾಕಿ ಪ್ಯಾಂಟ್‌ ಮತ್ತು ಶರ್ಟ್‌ ಸಮವಸ್ತ್ರ ಧರಿಸಬೇಕು ಎಂದು ಆದೇಶದಲ್ಲಿ ಉಲ್ಲೇಖೀಸಿದ್ದಾರೆ. ಈ ಆದೇಶವನ್ನು ನಿರ್ಲಕ್ಷಿಸುವ ಮಹಿಳಾ ಸಿಬ್ಬಂದಿಯನ್ನು ಠಾಣಾಧಿಕಾರಿಗಳು ಅಥವಾ ಮೇಲಾಧಿಕಾರಿಗಳು ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ತೆಗೆದುಕೊಳ್ಳಬಾರದು. ಶಿಸ್ತುಕ್ರಮ ಜರುಗಿಸಬೇಕು ಎಂದು ಪೊಲೀಸ್‌ ಆಯುಕ್ತರು ಸೂಚಿಸಿದ್ದಾರೆ.

ಮಹಿಳಾ ಸಿಬ್ಬಂದಿ ಅಸಮಾಧಾನ: ನಗರ ಪೊಲೀಸ್‌ ಆಯುಕ್ತರ ಆದೇಶಕ್ಕೆ ಮಹಿಳಾ ಪೊಲೀಸ್‌ ಸಿಬ್ಬಂದಿ ಅಸಮಾಧನ ವ್ಯಕ್ತಪಡಿಸಿದ್ದಾರೆ. ಗರ್ಭಿಣಿಯರು ಎಂದು ಸಾಬೀತುಪಡಿಸಲು ವೈದ್ಯರ ಧೃಡೀಕರಣ ಪತ್ರ ಸಲ್ಲಿಸಬೇಕು ಎಂದು ಹೇಳಿದರೆ ಹೇಗೆ? ಆಯುಕ್ತರ ಸೂಚನೆಯಂತೆ ಗರ್ಭಿಣಿ ಮಹಿಳೆ ಪ್ಯಾಂಟ್‌ ಧರಿಸಿ ಔಟ್‌ ಶರ್ಟ್‌ ಮಾಡಿ, ಲಾಠಿ ಹಿಡಿದು ರಸ್ತೆಯಲ್ಲಿ ನಿಲ್ಲುವುದು ಕಷ್ಟ. ಇದು ಮಹಿಳಾ ಸ್ವಾಭಿಮಾನಕ್ಕೂ ಧಕ್ಕೆಯಾಗುತ್ತದೆ.

ಕನಿಷ್ಠ 9 ತಿಂಗಳವರೆಗೆ ಸಿಬ್ಬಂದಿಗೆ ಮಾತೃತ್ವ ರಜೆ ಸಿಗುವುದಿಲ್ಲ. ಅದುವರೆಗೂ ಪ್ಯಾಂಟ್‌ ಧರಿಸಿ ಕರ್ತವ್ಯ ನಿರ್ವಹಣೆ ಕಷ್ಟವಾಗುತ್ತದೆ. ಈ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಗೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಇರುತ್ತವೆ. ಇಂತಹ ಸಂದರ್ಭದಲ್ಲಿ ಪ್ಯಾಂಟ್‌ ಧರಿಸುವುದು ಮುಜುಗರಕ್ಕಿಡಾಗುತ್ತದೆ.

ಕೇಂದ್ರ ಸರ್ಕಾರದ ಸಿಬ್ಬಂದಿಗೆ ಮಾತೃತ್ವ ರಜೆ ಜತೆಗೆ ಮಗುವಿನ ಪಾಲನೆಗಾಗಿ ಎರಡು ವರ್ಷಗಳವರೆಗೆ ರಜೆ ಕೊಡಲಾಗುತ್ತದೆ. ಆದರೆ, ರಾಜ್ಯ ಸರ್ಕಾರದಲ್ಲಿ ಅಂತಹ ಯಾವದೇ ನಿಯಮ ಇಲ್ಲ. ಹೀಗಾಗಿ ನಗರ ಪೊಲೀಸ್‌ ಆಯಕ್ತರು ಹೊರಡಿಸಿರುವ ಆದೇಶದಲ್ಲಿ ಗರ್ಭಿಣಿ ಸಂದರ್ಭದಲಾದರೂ ಸಮವಸ್ತ್ರ ವಿನಾಯಿತಿ ನೀಡಬೇಕು ಮಹಿಳಾ ಸಿಬ್ಬಂದಿ ಅನಿಸಿಕೆ.

* ಮೋಹನ್ ಭದ್ರಾವತಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.