ಸರ್ಕಾರದಿಂದಲೇ ಭೂಸ್ವಾಧೀನ ಹಣ


Team Udayavani, Nov 20, 2018, 12:07 PM IST

sarkardinda.jpg

ಬೆಂಗಳೂರು: ರಾಜಧಾನಿಯ ಸಂಚಾರ ದಟ್ಟಣೆ ನಿವಾರಣೆಗಾಗಿ 2005ರಲ್ಲಿ ರೂಪಿಸಿದ್ದ ಪೆರಿಫೆರಲ್‌ ರಿಂಗ್‌ ರಸ್ತೆಗೆ ಅಗತ್ಯವಾದ ಭೂ ಸ್ವಾಧೀನ ವೆಚ್ಚ 4500 ಕೋಟಿ ರೂ. ರಾಜ್ಯ ಸರ್ಕಾರವೇ ಭರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಇದರಿಂದಾಗಿ ಯೋಜನೆಗೆ ಇದ್ದ ದೊಡ್ಡ ಸವಾಲು ನಿವಾರಣೆಯಾಗಿದ್ದು, ಆದಷ್ಟು ಬೇಗ ಯೋಜನೆಯ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಯೋಜನೆಗಾಗಿ ಒಟ್ಟು 1810 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಬೇಕಿದೆ. 65 ಕಿ..ಮೀ ಉದ್ದ, 75 ಮೀ. ಅಗಲದ ರಸ್ತೆ ನಿರ್ಮಾಣವಾಗಲಿದ್ದು, ಯೋಜನೆಗೆ 17 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಖಾಸಗಿ ಸಾರ್ವಜನಿಕ ಸಹಭಾಗಿತ್ವದಡಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಈಗಾಗಲೇ ನಗರದ ಒಂದು ಭಾಗದ ಹೊಸೂರು ರಸ್ತೆ, ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ, ಮೈಸೂರು ರಸ್ತೆ, ತುಮಕೂರು ರಸ್ತೆ ಮಾರ್ಗದಲ್ಲಿ ಹೊರವರ್ತುಲ ರಸ್ತೆಯನ್ನು ನೈಸ್‌ ಸಂಸ್ಥೆಯಿಂದ ನಿರ್ಮಿಸಲಾಗಿದೆ. ಅದರ ಮುಂದುವರಿದ ಭಾಗವಾಗಿ ಪೆರಿಫೆರಲ್‌ ರಸ್ತೆ ತುಮಕೂರು ರಸ್ತೆಯಿಂದ ಬಳ್ಳಾರಿ ರಸ್ತೆ, ಹಳೇ ಮದ್ರಾಸ್‌ ರಸ್ತೆ, ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸಲಿದೆ. ಇದರಿಂದ ಒಂದು ಸುತ್ತು  ರಸ್ತೆ ನಿರ್ಮಾಣವಾದಂತಾಗುತ್ತದೆ.

ಈ ಮಾರ್ಗದಿಂದ ನಗರದ ಸಂಚಾರ ದಟ್ಟಣೆ ನಿವಾರಣೆಯಾಗಲಿದೆ. ಮೆಟ್ರೋ, ಸಬ್‌ ಅರ್ಬನ್‌ ರೈಲು ಜತೆಗೆ ಹೊರವರ್ತುಲ ರಸ್ತೆ, ಪೆರಿಫೆರಲ್‌ ರಿಂಗ್‌ ರಸ್ತೆ, ಸಿಗ್ನಲ್‌ ಮುಕ್ತ ಕಾರಿಡಾರ್‌ ಹೀಗೆ ಎಲ್ಲ ರೀತಿಯಲ್ಲೂ ನಗರದ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ ಸರ್ಕಾರ ಕೈಗೊಳ್ಳುತ್ತಿದೆ ಎಂದು ಹೇಳಿದರು.

ಪೆರಿಫೆರಲ್‌ ರಿಂಗ್‌ ರಸ್ತೆಯಲ್ಲಿ ಟೋಲ್‌ ವಸೂಲಿ ಮೂಲಕ ವೆಚ್ಚ ಭರಿಸಲಾಗುವುದು. ಯೋಜನೆಗೆ ದೊಡ್ಡ ಮೊತ್ತ ವೆಚ್ಚವಾಗಲಿದ್ದು, ಕೇಂದ್ರ ಸರ್ಕಾರದ ನಗರಮಾಲಾ ಯೋಜನೆಯ ನೆರವು ಸಿಗಬಹುದು ಎಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಆದರೆ, ಕೇಂದ್ರದಿಂದ ಯಾವುದೇ ರೀತಿಯ ಸ್ಪಂದನೆ ದೊರೆಯಲಿಲ್ಲ. ಹೀಗಾಗಿ, ರಾಜ್ಯ ಸರ್ಕಾರವೇ ಭೂ ಸ್ವಾಧೀನ ವೆಚ್ಚ ಭರಿಸುವ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇದರಿಂದ ಆರ್ಥಿಕ ಹೊರೆಯಾಗಬಹುದು.ಆದರೆ, ಯೋಜನೆ ಪೂರ್ಣಗೊಳಿಸಲು ಇದು ಬಿಟ್ಟರೆ ಬೇರೆ ಮಾರ್ಗವಿಲ್ಲ ಎಂದು ತಿಳಿಸಿದರು.

ಹೊಸಕೋಟೆ ಕೆರೆಗಳಿಗೆ ಸಂಸ್ಕರಿಸಿದ ನೀರು: ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ 30 ಕೆರೆಗಳಿಗೆ ಬೆಂಗಳೂರಿನ ತಾಜ್ಯ ನೀರು ಸಂಸ್ಕರಿಸಿ ಹರಿಸಲು ಸಣ್ಣ ನೀರಾವರಿ ಇಲಾಖೆಯ 100 ಕೋಟಿ ರೂ. ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ. 

ಜಯದೇವದಲ್ಲಿ ಹೆಚ್ಚುವರಿ 1150 ಹಾಸಿಗೆ: ಪ್ರತಿಷ್ಠಿತ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಹೆಚ್ಚುವರಿಯಾಗಿ 1150 ಹಾಸಿಗೆ ವ್ಯವಸ್ಥೆ ಕಲ್ಪಿಸುವ 45 ಕೋಟಿ ರೂ. ಯೋಜನೆಗೂ ಸಂಪುಟ ಒಪ್ಪಿಗೆ ನೀಡಿದೆ. ಈ ಪೈಕಿ ರಾಜ್ಯ ಸರ್ಕಾರ 22.50 ಕೋಟಿ ರೂ. ನೀಡಲಿದ್ದು, ಉಳಿದ 22.50 ಕೋಟಿ ರೂ.ಗಳನ್ನು ಜಯದೇವ ಹೃದ್ರೋಗ ಸಂಸ್ಥೆ ಭರಿಸಲಿದೆ.

ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಬರುವ ನೀರು ಶುದ್ಧೀಕರಿಸಿ ಬಿಡಲು ಸಂಸ್ಕರಣ ಘಟಕ ಸ್ಥಾಪಿಸುವುದು ಹಾಗೂ ಎತ್ತಿನಹೊಳೆ ಯೋಜನೆಯಡಿ ಲಭ್ಯವಾಗುವ 2.5 ಟಿಎಂಸಿ ನೀರು ಸಂಗ್ರಹಿಸಿ ಕುಡಿಯಲು ಪೂರೈಕೆ ಮಾಡುವ ಮೊದಲ ಹಂತದ 284.95 ಕೋಟಿ ರೂ. ಯೋಜನೆಗೆ ಸಂಪುಟ ಒಪ್ಪಿಗೆ ನೀಡಿತು.

ನೆಲಮಹಡಿ ಜತೆ 14 ಅಂತಸ್ತು ನಿರ್ಮಾಣ: ಮುಖ್ಯಮಂತ್ರಿಗಳ ಒಂದು ಲಕ್ಷ ಮನೆಗಳ ಸಮುತ್ಛಯದಲ್ಲಿ ಈ ಹಿಂದೆ ನಿರ್ಧರಿಸಿದ್ದ ನೆಲಮಹಡಿ ಮತ್ತು 3 ಅಂತಸ್ತು ಬದಲಿಗೆ ನೆಲಮಹಡಿ ಮತ್ತು 14 ಅಂತಸ್ತು ನಿರ್ಮಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರಿನಲ್ಲಿ ವಸತಿ ಯೋಜನೆಗೆ ಹೆಚ್ಚು ಜಾಗ ಲಭ್ಯ ಇರದ ಕಾರಣ ಇರುವ ಜಾಗದಲ್ಲೇ ಹೆಚ್ಚುವರಿ ಅಂತಸ್ತು ನಿರ್ಮಿಸಿದರೆ ಹೆಚ್ಚು ಫ‌ಲಾನುಭವಿಗಳಿಗೆ ನೀಡಬಹುದು ಎಂಬ ಕಾರಣಕ್ಕೆ  ಈ ತೀರ್ಮಾನ ಕೈಗೊಳ್ಳಲಾಗಿದೆ.

ಜತೆಗೆ ರಾಜ್ಯ ಸರ್ಕಾರವು ಯೋಜನೆಯಡಿ ಫ‌ಲಾನುಭವಿಗಳಿಗೆ 3 ಲಕ್ಷ ರೂ.ವರೆಗೆ ನೆರವು ನೀಡಲಿದ್ದು  ಉಳಿದ ಹಣ ಫ‌ಲಾನುಭವಿಗಳು ಭರಿಸಬೇಕು ಎಂದು  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಈಗಾಗಲೇ 50 ಸಾವಿರ ಅರ್ಜಿಗಳು ಬಂದಿವೆ ಎಂದು ಹೇಳಿದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.