ಇಂದಿರಾ ಕ್ಯಾಂಟೀನ್ ಬಣ್ಣ ವಿವಾದ!
Team Udayavani, Nov 21, 2018, 11:50 AM IST
ಬೆಂಗಳೂರು: ಸುಭಾಷ್ನಗರ ವಾರ್ಡ್ನ ಇಂದಿರಾ ಕ್ಯಾಂಟೀನ್ಗೆ ಬಣ್ಣ ಬಳಿದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಇಂದಿರಾನಗರ ಕ್ಯಾಂಟೀನ್ಗೆ ಪ್ರತ್ಯೇಕ ಬಣ್ಣ ಬಳಿದು ಇಂದಿರಾ ಕ್ಯಾಂಟೀನ್ ಯೋಜನೆಯ ಮೂಲ ಉದ್ದೇಶಕ್ಕೆ ಧಕ್ಕೆ ತರಲಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಪಾಲಿಕೆ ವತಿಯಿಂದ ನಗರದಲ್ಲಿ ನಿರ್ಮಾಣವಾಗಿರುವ 170ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್ಗಳು ಒಂದೇ ಮಾದರಿಯಲ್ಲಿರಬೇಕು ಎಂಬ ಉದ್ದೇಶದಿಂದ ಫ್ರಿ ಫ್ಯಾಬ್ರಿಕೇಟೆಡ್ ಉತ್ಪನ್ನಗಳನ್ನು ಬಳಸಿ ಒಂದೇ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಯೋಜನೆಯ ಮೂಲ ಉದ್ದೇಶದ ಅಂಶಗಳಲ್ಲಿ ಕ್ಯಾಂಟೀನ್ಗಳೆಲ್ಲವೂ ಒಂದೇ ಮಾದರಿಯಲ್ಲಿ ಇರಬೇಕು ಎಂಬುದೂ ಆಗಿತ್ತು.
ಆದರೆ, ಇದೀಗ ಸುಭಾಷ್ ನಗರ ವಾರ್ಡ್ನ ಇಂದಿರಾ ಕ್ಯಾಂಟೀನ್ಗೆ ಪ್ರತ್ಯೇಕ ಬಣ್ಣ ಬಳಿದಿರುವುದು ಸರಿಯೇ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಜತೆಗೆ ಯೋಜನೆಯ ಮೂಲ ಉದ್ದೇಶಕ್ಕೆ ಧಕ್ಕೆ ತಂದು ಪ್ರತ್ಯೇಕ ಬಣ್ಣ ಬಳಿಯುವ ಅಗತ್ಯ ಏನಿತ್ತು ಎಂದು ಪ್ರಶ್ನಿಸುತ್ತಿದ್ದಾರೆ.
ಇಂದಿರಾ ಕ್ಯಾಂಟೀನ್ಗಳಿಗೆ ಯಾವುದೇ ಕಾರಣಕ್ಕೂ ಪ್ರತ್ಯೇಕ ಬಣ್ಣ ಬಳಿಯಬಾರದು ಎಂದು ಸೂಚಿಸಲಾಗಿದೆ. ಸುಭಾಷ್ ನಗರ ವಾರ್ಡ್ನ ಇಂದಿರಾ ಕ್ಯಾಂಟೀನ್ಗೆ ಯಾರು ಬಣ್ಣ ಬಳಿದಿದ್ದಾರೆ. ಯಾವ ಉದ್ದೇಶಕ್ಕಾಗಿ ಬಳಿಯಲಾಗಿದೆ ಎಂದು ಅಧಿಕಾರಿಗಳಿಗೆ ಮಾಹಿತಿ ಕೇಳಲಾಗಿದೆ. ಮಾಹಿತಿ ಆಧರಿಸಿ ಸೂಕ್ತ ಕ್ರಮ ಜರುಗಿಸಲಾಗುತ್ತದೆ
-ಮಂಜುನಾಥ್ ಪ್ರಸಾದ್, ಪಾಲಿಕೆ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್