ಬಿಜೆಪಿ ಸುಳ್ಳಿನಿಂದದಾರಿ ತಪ್ಪಿಸುತ್ತಿದೆ
Team Udayavani, Nov 22, 2018, 2:08 PM IST
ಬೆಂಗಳೂರು: ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಂಡು ಬಿಜೆಪಿಯವರು ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಗಾಂಧಿನಗರ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಹಾಗೂ ಶಕ್ತಿ ಯೋಜನೆಯ ಅನುಷ್ಠಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಚೌಕಿದಾರ ಎಂದು ಹೇಳುವ ಮೂಲಕ ಅವರೇ ದೊಡ್ಡ ಮೋಸಗಾರರಾಗಿದ್ದಾರೆ. ಕಳೆದ ನಾಲ್ಕೂವರೆ ವರ್ಷದಲ್ಲಿ ಪ್ರಧಾನಿ ಮೋದಿ ಕೊಡುಗೆ ಏನು ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಹೇಳಿದರು.
ಕಾಶ್ಮೀರದಲ್ಲಿ ಪ್ರತಿ ದಿನ ಹಿಂಸಾಚಾರ ನಡೆಯುತ್ತಿದೆ. ಪ್ರಧಾನಿಗೆ ಆಹ್ವಾನ ಇಲ್ಲದಿದ್ದರೂ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಆದರೆ, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಶ್ಮೀರದಲ್ಲಿ ಹಿಂಸಾಚಾರ ನಿಲ್ಲುವವರೆಗೂ ಪಾಕಿಸ್ತಾನಕ್ಕೆ ಭೇಟಿ ನೀಡುವುದಿಲ್ಲ ಎಂದು ಹೇಳಿದ್ದರು ಅದೇ ರೀತಿ ನಡೆದುಕೊಂಡರು. ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಬಿಜೆಪಿ ಮುಖಂಡರು ಬದಲಿಸುವುದಾಗಿ ಹೇಳಿದ್ದರೂ ಪ್ರಧಾನಿ ಮೌನವಾಗಿದ್ದಾರೆ. ಇದು ಒಳ್ಳೆಯದಲ್ಲ ಎಂದು ತಿಳಿಸಿದರು. ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್, ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ