ದೀಪಿಕಾ-ರಣವೀರ್‌ ಅದ್ದೂರಿ ಆರತಕ್ಷತೆ


Team Udayavani, Nov 22, 2018, 2:23 PM IST

blore-5.jpg

ಬೆಂಗಳೂರು: ನ.14, 15ರಂದು ಇಟಲಿಯ ಲೇಕ್‌ ಕೋಮೊದಲ್ಲಿ ಅದ್ದೂರಿಯಾಗಿ ಹಸೆಮಣೆ ಏರಿದ್ದ ಬಾಲಿವುಡ್‌ ತಾರಾಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌, ವಿವಾಹ ಆರತಕ್ಷತೆ ಕಾರ್ಯಕ್ರಮ ನಗರದ “ದಿ ಲೀಲಾ ಪ್ಯಾಲೇಸ್‌’ ಹೋಟೆಲ್‌ನಲ್ಲಿ ಅದ್ದೂರಿಯಾಗಿ ನಡೆಯಿತು. ಖ್ಯಾತ ವಸ್ತ್ರವಿನ್ಯಾಸಕಾರ ಸಭ್ಯಸಾಚಿ ಮುಖರ್ಜಿ ವಿನ್ಯಾಸಗೊಳಿಸಿದ್ದ, ಚಿನ್ನದ ಬಣ್ಣದ ಬನಾರಸ್‌ ಸೀರೆಯುಟ್ಟು, ಮುತ್ತು ಹಾಗೂ ಪಚ್ಚೆ ಮಿಶ್ರಣದ ಸರ ಹಾಕಿಕೊಂಡು, ತಲೆಗೆ ಲೋ ಬನ್‌ ಅದರ ಸುತ್ತ ಮಲ್ಲಿಗೆ ಹೂ ಮುಡಿದು ಹಣೆಗೆ ಸಿಂಧೂರವಿಟ್ಟು ದೀಪಿಕಾ ಕಂಗೊಳಿಸುತ್ತಿದ್ದರೆ, ಕಪ್ಪು ಬಣ್ಣದ ಶೇರವಾನಿಯಲ್ಲಿ ರಣವೀರ್‌ ಮಿಂಚುತ್ತಿದ್ದರು.

ಆರತಕ್ಷತೆ ಕಾರ್ಯಕ್ರಮಕ್ಕೆ, ತೀರಾ ಆಪ್ತರಿಗೆ ಮಾತ್ರ ಆಮಂತ್ರಣ ನೀಡಲಾಗಿತ್ತು. ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು, ಕ್ರಿಕೆಟಿಗ ಅನಿಲ್‌ ಕುಂಬ್ಳೆ, ಇನ್ಫೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಸುಧಾಮೂರ್ತಿ ಸೇರಿದಂತೆ, ದೀಪಿಕಾ-ರಣವೀರ್‌ ಕುಟುಂಬದ ಹತ್ತಿರದ ಬಂಧುಗಳು, ಸ್ನೇಹಿತರು, ಉದ್ಯಮಿಗಳು ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಆರತಕ್ಷತೆಯಲ್ಲಿ ಕನ್ನಡದ ನಟರಾದ ಅಂಬರೀಶ್‌, ಉಪೇಂದ್ರ, ಸುದೀಪ್‌, ಯಶ್‌, ಪುನೀತ್‌ ರಾಜಕುಮಾರ್‌, ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಮೊದಲಾದವರಿಗೆ ಆರತಕ್ಷತೆಯ ಆಮಂತ್ರಣ ತಲುಪಿದ್ದು, ಕನ್ನಡದ ಜೊತೆಗೆ ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯ ಪ್ರಮುಖ ನಟ-ನಟಿಯರು, ನಿರ್ದೇಶಕ, ನಿರ್ಮಾಪಕರು, ಕ್ರೀಡಾ ತಾರೆಯರು ಸೇರಿದಂತೆ ಸುಮಾರು ಎರಡು ಸಾವಿರಕ್ಕೂ ಅಧಿಕ ಗಣ್ಯರ ಉಪಸ್ಥಿತರಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಅನೇಕ ನಿರೀಕ್ಷಿತ ಗಣ್ಯರು ಈ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ.

ಆರತಕ್ಷತೆಯಲ್ಲಿ ನೃತ್ಯ ಕಾರ್ಯಕ್ರಮಗಳ ಜೊತೆಗೆ ಅತಿಥಿಗಳಿಗಾಗಿ ಬಗೆಬಗೆಯ ಭೋಜನ, ಖಾದ್ಯಗಳನ್ನು ಸವಿಯುವ ವ್ಯವಸ್ಥೆ ಮಾಡಲಾಗಿತ್ತು. ಹಲವು ತಾರೆಯರು, ಗಣ್ಯರು ಕಾರ್ಯಕ್ರಮಕ್ಕೆ ಭಾಗವಹಿಸುವ ಸಾಧ್ಯತೆ ಇದ್ದ ಕಾರಣ ಹೋಟೆಲ್‌ ಸುತ್ತ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಇನ್ನು ಈ ಆರತಕ್ಷತೆ ಸಮಾರಂಭಕ್ಕೆ ಎರಡು ದಿನಗಳ ಮೊದಲೇ “ದಿ ಲೀಲಾ ಪ್ಯಾಲೇಸ್‌’ನಲ್ಲಿ ತಯಾರಿ ಆರಂಭವಾಗಿದ್ದು, ದಕ್ಷಿಣ ಭಾರತ ಮತ್ತು ಉತ್ತರ ಭಾರತ ಶೈಲಿಯ ವಿಶೇಷ ಖಾದ್ಯಗಳನ್ನು ತಯಾರಿಸುವ ಸಲುವಾಗಿಯೇ ನುರಿತ ಬಾಣಸಿಗರ ತಂಡ ಬೆಂಗಳೂರಿಗೆ ಆಗಮಿಸಿ, ಶುಚಿ-ರುಚಿಯಾದ ಅಡುಗೆಗೆ ಬೇಕಾದ ತಯಾರಿಗಳನ್ನು ಮಾಡಿಕೊಂಡಿತ್ತು. ಆರತಕ್ಷತೆ ಸಲುವಾಗಿ ಲೀಲಾ ಪ್ಯಾಲೇಸ್‌ ಹೋಟೆಲ್‌ಗೆ ವರ್ಣಮಯ ಲೈಟಿಂಗ್ಸ್‌ ಅಳವಡಿಸಲಾಗಿದ್ದು, ಒಳಾಂಗಣವನ್ನು ಬಗೆಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು.

ಮುಂಬೈನಲ್ಲೂ ಆರತಕ್ಷತೆ: ಇದೇ ತಿಂಗಳ 28ಕ್ಕೆ ಮುಂಬೈನಲ್ಲೂ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಾಲಿವುಡ್‌ನ‌ ಅನೇಕ ತಾರೆಯರು, ನಿರ್ಮಾಪಕರು, ನಿರ್ದೇಶಕರು ಮತ್ತು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮಕ್ಕೆ ಗೈರಾದ ಗಣ್ಯರು ಅದರಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. 

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.