ರಕ್ತನಾಳ ಹೆಪ್ಪುಗಟ್ಟುವಿಕೆ ತಡೆಗೆ ಉಪಕರಣ


Team Udayavani, Nov 30, 2018, 11:43 AM IST

rakta-hep.jpg

ಬೆಂಗಳೂರು: ಕೋಮಾ ಸ್ಥಿತಿ ತಲುಪಿರುವ ರೋಗಿಗಳು ರಕ್ತನಾಳ ಹೆಪ್ಪುಗಟ್ಟುವಿಕೆ (ಡೀಪ್‌ ವೇಯ್ನ ಥ್ಯಾಂಬೋಸಿಸ್‌) ಸಮಸ್ಯೆಗೆ ಎದುರಾಗದಂತೆ ಇಂಟರ್‌ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್ ಇನ್ಫಾರ್ಮೇಷನ್‌ ಟೆಕ್ನಾಲಜಿ ಹಾಗೂ ನಿಮ್ಹಾನ್ಸ್‌ ಸಂಸ್ಥೆಗಳು ರೋಬೋಟಿಕ್‌ ಉಪಕರಣಗಳನ್ನು ಅಭಿವೃದ್ಧಿಪಡಿಸಿವೆ.

ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ವಿಜ್ಞಾನ ಇಲಾಖೆ ವತಿಯಿಂದ ನಗರದ ಅರಮನೆ ಮೈದಾನದಲ್ಲಿ “ಇನ್ನೋವೇಷನ್‌ ಅಂಡ್‌ ಇಂಪ್ಯಾಕ್ಟ್’ ಘೋಷವಾಕ್ಯದಡಿ ಗುರುವಾರ ಆರಂಭವಾದ ಮೂರು ದಿನಗಳ “ಬೆಂಗಳೂರು ಟೆಕ್‌ ಸಮಿಟ್‌’ ಕಾರ್ಯಕ್ರಮದಲ್ಲಿ ರೋಬೋಟಿಕ್‌ ಯಂತ್ರೋಪಕರಣಗಳು ಅನಾವರಣಗೊಂಡಿದ್ದು, ರಕ್ತನಾಳ ಹೆಪ್ಪುಗಟ್ಟುವಿಕೆ ತಡೆಯುವ ಉಪಕರಣಗಳು ಗಮನ ಸೆಳೆದವು.

ಅಪಘಾತ, ಪಾರ್ಶ್ವವಾಯು, ಮೆದುಳು ಜ್ವರ ಕಾಣಿಸಿಕೊಂಡ ಸಂದರ್ಭಗಳಲ್ಲಿ ರೋಗಿಗಳು ಕೋಮಾ ಸ್ಥಿತಿ ತಲುಪುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವೊಮ್ಮೆ ಅರವಳಿಕೆ (ಅನಸ್ತೀಶಿಯಾ) ನೀಡುವ ವೇಳೆ ಯಡವಟ್ಟಾದರೂ ರೋಗಿಗಳು ಕೋಮಾ ಸ್ಥಿತಿ ತಲುಪುವ ಅಪಾಯವಿರುತ್ತದೆ. ರೋಗಿಗಳು ಕೋಮಾ ಸ್ಥಿತಿ ತಲುಪಿದಾಗ ಅವರ ಕೈ-ಕಾಲುಗಳಲ್ಲಿ ಚಲನೆ ಸ್ಥಗಿತಗೊಳ್ಳುತ್ತದೆ. 

ಫಿಸಿಯೋ ಥೆರಪಿಸ್ಟ್‌ಗಳು ಚಿಕಿತ್ಸೆ ನೀಡಿದರೂ ಹೆಚ್ಚು ಸಮಯ ಕೈ-ಕಾಲುಗಳು ಒಂದೇ ಕಡೆ ಚಲನೆಯಿಲ್ಲದೆ ಇರುವುದರಿಂದ ರಕ್ತನಾಳ ಹೆಪ್ಪುಗಟ್ಟುವಿಕೆ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಒಂದೊಮ್ಮೆ ರೋಗಿಯು ಕೋಮಾ ಸ್ಥಿತಿಯಿಂದ ಚೇತರಿಸಿಕೊಂಡರೂ, ಕೈ-ಕಾಲುಗಳ ಚಲನೆಯಿಲ್ಲದೆ ಕಾಣಿಸಿಕೊಳ್ಳುವ ರಕ್ತನಾಳ ಹೆಪ್ಪುಗಟ್ಟುವಿಕೆ ಸಮಸ್ಯೆಯಿಂದ ಮತ್ತೆ ಆಸ್ಪತ್ರೆ ಸೇರಬೇಕಾಗುತ್ತದೆ.

ಅಂತಹ ರೋಗಿಗಳ ಅನುಕೂಲಕ್ಕಾಗಿ ಐಐಐಟಿ ಬೆಂಗಳೂರು ಹಾಗೂ ನಿಮ್ಹಾನ್ಸ್‌ ಸಂಸ್ಥೆಗಳ ಸರ್ಜಿಕಲ್‌ ಆಂಡ್‌ ಅಸಿಸ್ಟೀವ್‌ ರೋಬೋಟಿಕ್ಸ್‌ ಲ್ಯಾಬ್‌ನಲ್ಲಿ ರಕ್ತನಾಳ ಹೆಪ್ಪುಗಟ್ಟುವಿಕೆ ತಡೆಯುವ ಉಪಕರಣಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೈಗಳಿಗೆ ಅಂತ್ರೋಮೆಟ್ರಿಕ್‌ ಅಸೆಸ್ಟೀವ್‌ ಎಲೆಕ್ಟ್ರೋಮೆಕಾನಿಕಲ್‌ ಡಿವೈಸ್‌ ಹಾಗೂ ಕಾಲುಗಳಿಗೆ ಡಿವಿಟಿ ಪ್ರೋಫಿಲ್ಯಾಕ್ಸಿಸ್‌ ಡಿವೈಸ್‌ಗಳನ್ನು ಅಭಿವೃದ್ಧಿಪಡಿಸಲಾಗಿದೆ.

ಮೆದುಳಿನ ಸಮಸ್ಯೆ ತಿಳಿಸುತ್ತೆ ಹೆಲ್ಮೆಟ್‌: ಸರ್ಕಾರದ ಸಹಯೋಗದಲ್ಲಿ ಮಷೀನ್‌ ಇಂಟಿಲಿಜೆನ್ಸ್‌ ಆಂಡ್‌ ರೋಬೋಟಿಕ್ಸ್‌ ಸೆಂಟರ್‌ ಸಂಸ್ಥೆ ಮೆದುಳಿನ ಸಮಸ್ಯೆಗಳನ್ನು ತಿಳಿಯುವ ಹೆಲ್ಮೆಟ್‌ ತಯಾರಿಸಿದ್ದು, ಈ ಹೆಲ್ಮೆಟ್‌ ಮೆದುಳಿನಲ್ಲಿರುವ ಎಲೆಕ್ಟ್ರಾನಿಕ್‌ ತರಂಗಗಳ ಆಧಾರದ ಮೇಲೆ ಮೆದುಳಿನ ಚಿತ್ರಗಳನ್ನು ಸೆರೆಹಿಡಿಯುತ್ತದೆ. ಈ ಚಿತ್ರಗಳನ್ನು ಕಂಪ್ಯೂಟರ್‌ನಲ್ಲಿ ಪರಿಶೀಲನೆಗೆ ಒಳಪಡಿಸಿದಾಗ ಮೆದುಳಿನ ಯಾವ ಭಾಗದಲ್ಲಿ ತೊಂದರೆಯಾಗಿದೆ ಎಂಬುದು ಸುಲಭವಾಗಿ ತಿಳಿಯಲಿದ್ದು, ಇದರಿಂದಾಗಿ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ.  

ಉಪಕರಣಗಳು ಕಾರ್ಯನಿರ್ವಹಣೆ ಹೇಗೆ?: ಎರಡು ರೀತಿಯ ಉಪಕರಣಗಳನ್ನು ರೋಗಿಯ ಕೈ-ಕಾಲುಗಳಿಗೆ ಅವಳವಡಿಸಲಾಗುತ್ತದೆ. ಈ ರೋಬೋಟಿಕ್‌ ಉಪಕರಣಗಳು ವ್ಯಕ್ತಿಯ ಹೃದಯ ಬಡಿತಕ್ಕೆ ಅನುಗುಣವಾಗಿ ಕೈ-ಕಾಲುಗಳಿಗೆ ಚಲನೆ ನೀಡುತ್ತವೆ. ಜತೆಗೆ ರಕ್ತನಾಳ ಹೆಪ್ಪುಗಟ್ಟುವಿಕೆ ಸಮಸ್ಯೆ ಕಾಣಿಸಿಕೊಳ್ಳದಂತೆ ಎಚ್ಚರ ವಹಿಸುತ್ತವೆ. ಈ ಉಪಕರಣಗಳನ್ನು ಬಳಸಿದ ರೋಗಿಯು ಕೋಮಾದಿಂದ ಚೇತರಿಸಿಕೊಂಡ ನಂತರವೂ ಆರೋಗ್ಯವಾಗಿಬಹುದು ಎನ್ನುತ್ತಾರೆ ಐಐಐಟಿ ಬೆಂಗಳೂರು ಸಂಸ್ಥೆಯ ವ್ಯವಸ್ಥಾಪಕಿ ಕಲ್ಪನಾ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.