ರಕ್ತನಾಳ ಹೆಪ್ಪುಗಟ್ಟುವಿಕೆ ತಡೆಗೆ ಉಪಕರಣ


Team Udayavani, Nov 30, 2018, 11:43 AM IST

rakta-hep.jpg

ಬೆಂಗಳೂರು: ಕೋಮಾ ಸ್ಥಿತಿ ತಲುಪಿರುವ ರೋಗಿಗಳು ರಕ್ತನಾಳ ಹೆಪ್ಪುಗಟ್ಟುವಿಕೆ (ಡೀಪ್‌ ವೇಯ್ನ ಥ್ಯಾಂಬೋಸಿಸ್‌) ಸಮಸ್ಯೆಗೆ ಎದುರಾಗದಂತೆ ಇಂಟರ್‌ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್ ಇನ್ಫಾರ್ಮೇಷನ್‌ ಟೆಕ್ನಾಲಜಿ ಹಾಗೂ ನಿಮ್ಹಾನ್ಸ್‌ ಸಂಸ್ಥೆಗಳು ರೋಬೋಟಿಕ್‌ ಉಪಕರಣಗಳನ್ನು ಅಭಿವೃದ್ಧಿಪಡಿಸಿವೆ.

ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ವಿಜ್ಞಾನ ಇಲಾಖೆ ವತಿಯಿಂದ ನಗರದ ಅರಮನೆ ಮೈದಾನದಲ್ಲಿ “ಇನ್ನೋವೇಷನ್‌ ಅಂಡ್‌ ಇಂಪ್ಯಾಕ್ಟ್’ ಘೋಷವಾಕ್ಯದಡಿ ಗುರುವಾರ ಆರಂಭವಾದ ಮೂರು ದಿನಗಳ “ಬೆಂಗಳೂರು ಟೆಕ್‌ ಸಮಿಟ್‌’ ಕಾರ್ಯಕ್ರಮದಲ್ಲಿ ರೋಬೋಟಿಕ್‌ ಯಂತ್ರೋಪಕರಣಗಳು ಅನಾವರಣಗೊಂಡಿದ್ದು, ರಕ್ತನಾಳ ಹೆಪ್ಪುಗಟ್ಟುವಿಕೆ ತಡೆಯುವ ಉಪಕರಣಗಳು ಗಮನ ಸೆಳೆದವು.

ಅಪಘಾತ, ಪಾರ್ಶ್ವವಾಯು, ಮೆದುಳು ಜ್ವರ ಕಾಣಿಸಿಕೊಂಡ ಸಂದರ್ಭಗಳಲ್ಲಿ ರೋಗಿಗಳು ಕೋಮಾ ಸ್ಥಿತಿ ತಲುಪುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವೊಮ್ಮೆ ಅರವಳಿಕೆ (ಅನಸ್ತೀಶಿಯಾ) ನೀಡುವ ವೇಳೆ ಯಡವಟ್ಟಾದರೂ ರೋಗಿಗಳು ಕೋಮಾ ಸ್ಥಿತಿ ತಲುಪುವ ಅಪಾಯವಿರುತ್ತದೆ. ರೋಗಿಗಳು ಕೋಮಾ ಸ್ಥಿತಿ ತಲುಪಿದಾಗ ಅವರ ಕೈ-ಕಾಲುಗಳಲ್ಲಿ ಚಲನೆ ಸ್ಥಗಿತಗೊಳ್ಳುತ್ತದೆ. 

ಫಿಸಿಯೋ ಥೆರಪಿಸ್ಟ್‌ಗಳು ಚಿಕಿತ್ಸೆ ನೀಡಿದರೂ ಹೆಚ್ಚು ಸಮಯ ಕೈ-ಕಾಲುಗಳು ಒಂದೇ ಕಡೆ ಚಲನೆಯಿಲ್ಲದೆ ಇರುವುದರಿಂದ ರಕ್ತನಾಳ ಹೆಪ್ಪುಗಟ್ಟುವಿಕೆ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಒಂದೊಮ್ಮೆ ರೋಗಿಯು ಕೋಮಾ ಸ್ಥಿತಿಯಿಂದ ಚೇತರಿಸಿಕೊಂಡರೂ, ಕೈ-ಕಾಲುಗಳ ಚಲನೆಯಿಲ್ಲದೆ ಕಾಣಿಸಿಕೊಳ್ಳುವ ರಕ್ತನಾಳ ಹೆಪ್ಪುಗಟ್ಟುವಿಕೆ ಸಮಸ್ಯೆಯಿಂದ ಮತ್ತೆ ಆಸ್ಪತ್ರೆ ಸೇರಬೇಕಾಗುತ್ತದೆ.

ಅಂತಹ ರೋಗಿಗಳ ಅನುಕೂಲಕ್ಕಾಗಿ ಐಐಐಟಿ ಬೆಂಗಳೂರು ಹಾಗೂ ನಿಮ್ಹಾನ್ಸ್‌ ಸಂಸ್ಥೆಗಳ ಸರ್ಜಿಕಲ್‌ ಆಂಡ್‌ ಅಸಿಸ್ಟೀವ್‌ ರೋಬೋಟಿಕ್ಸ್‌ ಲ್ಯಾಬ್‌ನಲ್ಲಿ ರಕ್ತನಾಳ ಹೆಪ್ಪುಗಟ್ಟುವಿಕೆ ತಡೆಯುವ ಉಪಕರಣಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೈಗಳಿಗೆ ಅಂತ್ರೋಮೆಟ್ರಿಕ್‌ ಅಸೆಸ್ಟೀವ್‌ ಎಲೆಕ್ಟ್ರೋಮೆಕಾನಿಕಲ್‌ ಡಿವೈಸ್‌ ಹಾಗೂ ಕಾಲುಗಳಿಗೆ ಡಿವಿಟಿ ಪ್ರೋಫಿಲ್ಯಾಕ್ಸಿಸ್‌ ಡಿವೈಸ್‌ಗಳನ್ನು ಅಭಿವೃದ್ಧಿಪಡಿಸಲಾಗಿದೆ.

ಮೆದುಳಿನ ಸಮಸ್ಯೆ ತಿಳಿಸುತ್ತೆ ಹೆಲ್ಮೆಟ್‌: ಸರ್ಕಾರದ ಸಹಯೋಗದಲ್ಲಿ ಮಷೀನ್‌ ಇಂಟಿಲಿಜೆನ್ಸ್‌ ಆಂಡ್‌ ರೋಬೋಟಿಕ್ಸ್‌ ಸೆಂಟರ್‌ ಸಂಸ್ಥೆ ಮೆದುಳಿನ ಸಮಸ್ಯೆಗಳನ್ನು ತಿಳಿಯುವ ಹೆಲ್ಮೆಟ್‌ ತಯಾರಿಸಿದ್ದು, ಈ ಹೆಲ್ಮೆಟ್‌ ಮೆದುಳಿನಲ್ಲಿರುವ ಎಲೆಕ್ಟ್ರಾನಿಕ್‌ ತರಂಗಗಳ ಆಧಾರದ ಮೇಲೆ ಮೆದುಳಿನ ಚಿತ್ರಗಳನ್ನು ಸೆರೆಹಿಡಿಯುತ್ತದೆ. ಈ ಚಿತ್ರಗಳನ್ನು ಕಂಪ್ಯೂಟರ್‌ನಲ್ಲಿ ಪರಿಶೀಲನೆಗೆ ಒಳಪಡಿಸಿದಾಗ ಮೆದುಳಿನ ಯಾವ ಭಾಗದಲ್ಲಿ ತೊಂದರೆಯಾಗಿದೆ ಎಂಬುದು ಸುಲಭವಾಗಿ ತಿಳಿಯಲಿದ್ದು, ಇದರಿಂದಾಗಿ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ.  

ಉಪಕರಣಗಳು ಕಾರ್ಯನಿರ್ವಹಣೆ ಹೇಗೆ?: ಎರಡು ರೀತಿಯ ಉಪಕರಣಗಳನ್ನು ರೋಗಿಯ ಕೈ-ಕಾಲುಗಳಿಗೆ ಅವಳವಡಿಸಲಾಗುತ್ತದೆ. ಈ ರೋಬೋಟಿಕ್‌ ಉಪಕರಣಗಳು ವ್ಯಕ್ತಿಯ ಹೃದಯ ಬಡಿತಕ್ಕೆ ಅನುಗುಣವಾಗಿ ಕೈ-ಕಾಲುಗಳಿಗೆ ಚಲನೆ ನೀಡುತ್ತವೆ. ಜತೆಗೆ ರಕ್ತನಾಳ ಹೆಪ್ಪುಗಟ್ಟುವಿಕೆ ಸಮಸ್ಯೆ ಕಾಣಿಸಿಕೊಳ್ಳದಂತೆ ಎಚ್ಚರ ವಹಿಸುತ್ತವೆ. ಈ ಉಪಕರಣಗಳನ್ನು ಬಳಸಿದ ರೋಗಿಯು ಕೋಮಾದಿಂದ ಚೇತರಿಸಿಕೊಂಡ ನಂತರವೂ ಆರೋಗ್ಯವಾಗಿಬಹುದು ಎನ್ನುತ್ತಾರೆ ಐಐಐಟಿ ಬೆಂಗಳೂರು ಸಂಸ್ಥೆಯ ವ್ಯವಸ್ಥಾಪಕಿ ಕಲ್ಪನಾ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.