ಆಂತರಿಕ ಭದ್ರತೆ ಬಗ್ಗೆಯೂ ಮೂಡಿದ ಪ್ರಶ್ನೆ


Team Udayavani, Dec 6, 2018, 11:43 AM IST

antarika.jpg

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಯೋಗಾಲಯದಲ್ಲಿ ನಡೆದ ಸ್ಫೋಟ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸದಾಶಿವನಗರ ಪೊಲೀಸರು ಪ್ರಯೋಗಾಲಯದ ಅಸುರಕ್ಷತೆ ಮತ್ತು ನಿರ್ಲಕ್ಷ್ಯ ಸೇರಿದಂತೆ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ.

ಈ ಹಿಂದೆ ಭಾರತೀಯ ವಿಜ್ಞಾನ ಸಂಸ್ಥೆಯ ಭದ್ರತಾ ಲೋಪದಿಂದ ಉಗ್ರರ ದಾಳಿ, ಚೀನಾ ಪ್ರಧಾನಿ ಆಗಮನದ ವೇಳೆ ಟಿಬೆಟಿಯನ್ನರ ಪ್ರತಿಭಟನೆಯಂತಹ ಘಟನೆಗಳು ನಡೆದಿತ್ತು. ಇದೀಗ ಸಂಸ್ಥೆಯ ಆವರಣದಲ್ಲಿರುವ ಪ್ರಯೋಗಾಲಯದಲ್ಲಿ ಸಿಲಿಂಡರ್‌ ಸ್ಫೋಟಗೊಂಡಿರುವ ಕಾರಣ ಸಂಸ್ಥೆಯ ಆತಂರಿಕ ಭದ್ರತೆ ಬಗ್ಗೆಯೂ ಪ್ರಶ್ನೆ ಮೂಡಿದೆ.

ಸಿಲಿಂಡರ್‌ ಸ್ಫೋಟಗೊಂಡಿರುವುದರಿಂದ ವಿಧಿವಿಜ್ಞಾನ ಪ್ರಯೋಗಾಲಯ ಸಿಬ್ಬಂದಿ ಘಟನಾ ಸ್ಥಳದಲ್ಲಿ ದೊರೆತ ಕೆಲ ಮಹತ್ವದ ವಸ್ತುಗಳನ್ನು ಸಂಗ್ರಹಿಸಿದ್ದಾರೆ. ಹೀಗಾಗಿ ಎಫ್ಎಸ್‌ಎಲ್‌ ವರದಿ ಬಂದ ನಂತರ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ಹೇಳಿದರು.

2005ರ ಉಗ್ರರ ದಾಳಿ: 2005ರ ಡಿಸೆಂಬರ್‌ನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ ದೆಹಲಿಯ ಪ್ರೊಫೆಸರ್‌ವೊಬ್ಬರನ್ನು ಹತ್ಯೆಗೈದು, ನಾಲ್ವರನ್ನು ಗಾಯಗೊಳಿಸಿದ್ದರು. ಅದೇ ವರ್ಷ ವಿಜ್ಞಾನಿಗಳ ಜತೆ ಸಂವಾದ ಕಾರ್ಯಕ್ರಮಕ್ಕೆ ಆಗಮಿಸಿದ ಚೀನಾ ಪ್ರಧಾನಿಗೆ ಟೆಬಿಟಿಯನ್‌ ಸಮುದಾಯದವರು ಪ್ರತಿಭಟನೆಯ ಆಹ್ವಾನ ನೀಡಿದ್ದರು.

ಬಳಿಕ ಎಚ್ಚೆತ್ತುಕೊಂಡಿದ್ದ ವಿಜ್ಞಾನ ಸಂಸ್ಥೆ ಬಾಹ್ಯ ಭದ್ರತೆಯನ್ನು ಹೆಚ್ಚಿಸಿಕೊಂಡಿತ್ತು. ಆದರೆ, ಬುಧವಾರ ಹೈಪರ್‌ಸೋನಿಕ್‌ ಆ್ಯಂಡ್‌ ಶಾಕ್‌ವೆರ್‌ ಆಫ್ ಏರೋಸ್ಪೇಸ್‌ ಪ್ರಯೋಗಾಲಯದಲ್ಲಿ ಹೈಡ್ರೋಜನ್‌ ಸಿಲಿಂಡರ್‌ ಸ್ಫೋಟಗೊಂಡಿರುವುದು ಇತರೆ ವಿಭಾಗದ ವಿದ್ಯಾರ್ಥಿಗಳಲ್ಲಿ ಆತಂಕ ಹುಟ್ಟಿಸಿದೆ.

ಈ ಮೂಲಕ ಪ್ರಯೋಗಾಲಯಗಳಲ್ಲಿಯೂ ಸುರಕ್ಷತಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳು ಸಂಸ್ಥೆಯ ಮುಖ್ಯಸ್ಥರನ್ನು ಪ್ರಶ್ನಿಸುವಂತಾಗಿದೆ. ಮತ್ತೂಂದೆಡೆ ಬುಧವಾರ ಸ್ಫೋಟದಲ್ಲಿ ಮೃತಪಟ್ಟ ಮನೋಜ್‌ ಕುಮಾರ್‌ ಕೂಡ ಪೋಷಕರ ಜತೆ ಪ್ರಯೋಗಾಲಯದಲ್ಲಿ ಹೇಳಿಕೊಳ್ಳುವಂತಹ ಸುರಕ್ಷತೆ ಇಲ್ಲದಿರುವ ಬಗ್ಗೆ ಚರ್ಚಿಸಿದ್ದರು ಎಂದು ಹೇಳಲಾಗಿದೆ.

ಪ್ರಯೋಗಾಲಯದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ತೊಡಗಿದ್ದರು. ಮಧ್ಯಾಹ್ನ 2.30ರ ಸುಮಾರಿಗೆ ಹೈಡ್ರೋಜನ್‌ ಸಿಲಿಂಡರ್‌ ಸ್ಫೋಟಗೊಂಡು ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ನಿಖರ ಕಾರಣ ಏನೆಂದು ಸದ್ಯಕ್ಕೆ ತಿಳಿದು ಬಂದಿಲ್ಲ. ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ.
-ಬಿ.ಕೆ.ಸಿಂಗ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ

ಟಾಪ್ ನ್ಯೂಸ್

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.