ಚುಮು ಚುಮು ಚಳಿಗೆ ವೈನ್‌ ಕಿಕ್‌


Team Udayavani, Dec 6, 2018, 11:43 AM IST

chumu-chumu.jpg

ಬೆಂಗಳೂರು: ಚಳಿ ವಾತಾವರಣಕ್ಕೆ “ವೈನ್‌’ನ ಕಿಕ್‌ಕೊಡಲು ದ್ರಾಕ್ಷಾರಸ ಮಂಡಳಿ ಸಿದ್ಧತೆ ನಡೆಸಿದ್ದು, ರಾಜ್ಯದ ನಾಲ್ಕು ಕಡೆ ಡಿಸೆಂಬರ್‌ ಹಾಗೂ ಜನವರಿಯಲ್ಲಿ ಅಂತಾರಾಷ್ಟ್ರೀಯ ವೈನ್‌ ಮೇಳವನ್ನು ಹಮ್ಮಿಕೊಂಡಿದೆ. 

ವೈನ್‌ ಆರೋಗ್ಯಕ್ಕೂ ಹಿತಕರ. ಹೀಗಾಗಿ, ರಾಜ್ಯ ದ್ರಾಕ್ಷಾರಸ ಮಂಡಳಿಯು ದ್ರಾಕ್ಷಿ ಬೆಳೆಯುವ ರೈತರು, ರಾಜ್ಯದ 17 ವೈನ್‌ ಕಾರ್ಖಾನೆಗಳು ಹಾಗೂ ಮಾರಾಟಗಾರರಿಗೆ ವೇದಿಕೆ ಕಲ್ಪಿಸುವ ಜತೆಗೆ ವೈನ್‌ ಪ್ರಿಯರಿಗೆ ಸ್ಥಳೀಯ ಹಾಗೂ ವಿದೇಶಿ ಬ್ರಾಂಡ್‌ ವೈನ್‌ ರುಚಿಯನ್ನು ಪರಿಚಯಿಸಲು ಕಳೆದ 11 ವರ್ಷಗಳಿಂದ ರಾಜ್ಯದ ಪ್ರಮುಖ ನಗರಗಳಲ್ಲಿ ವೈನ್‌ಮೇಳ ಆಯೋಜಿಸುತ್ತಿದೆ.

ಈ ಬಾರಿ ಕಾರವಾರ, ಮಂಗಳೂರು, ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮೇಳವನ್ನು, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿಯಲ್ಲಿ ರಾಜ್ಯಮೇಳವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಡಿ.21ರಂದು ಕಾರವಾರದಲ್ಲಿ ಮೇಳಕ್ಕೆ ಚಾಲನೆ ದೊರೆಯಲಿದೆ.

ಆ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ, ಅಬಕಾರಿ ಇಲಾಖೆ, ಪೊಲೀಸ್‌ ಇಲಾಖೆ ಒಪ್ಪಿಗೆ ಪಡೆಯಲಾಗುತ್ತಿದೆ. ಸದ್ಯ ಅಂತಾರಾಷ್ಟ್ರೀಯ ಮೇಳಗಳಗೆ  ಮಂಡಳಿ ಸಜ್ಜಾಗಿದ್ದು, ಮೊದಲ ಮೇಳ ಕಾರವಾರದ ಕೋಡಿಬಾಗದಲ್ಲಿನ ಕಾಳಿ ರಿವರ್‌ ಗಾರ್ಡನ್‌ನಲ್ಲಿ  ಡಿ.21ರಿಂದ 23 ವರೆಗೆ ನಡೆಯಲಿದೆ.

ಇನ್ನು ಮೇಳಗಳ ಆಯೋಜನೆಗೆ ಇ ಟೆಂಡರ್‌ ಮೂಲಕ ಖಾಸಗಿ ಕಂಪನಿಗಳಿಗೆ ಆಹ್ವಾನಿಸಲಾಗಿತ್ತು, 36 ಲಕ್ಷ ರೂ. ಪಡೆದು “ಸೆನ್ಸಸ್‌ ಕ್ರಿಯೇಷನ್ಸ್‌’ ಎಂಬ ಖಾಸಗಿ ಇವೆಂಟ್‌ ಆರ್ಗನೈಜೇಷನ್‌ ಮೇಳಗಳನ್ನು ಆಯೋಜಿಸುತ್ತಿದೆ. ಉಳಿದಂತೆ ಜನವರಿ ಮೊದಲ ವಾರದಲ್ಲಿ ಮಂಗಳೂರು ಹಾಗೂ ಕೊನೆಯ ವಾರದಲ್ಲಿ ಬೆಂಗಳೂರಿನ ಜಯಮಹಲ್‌ನಲ್ಲಿ ಮೇಳ ನಡೆಯಲಿದೆ. 

ಸಾಮೂಹಿಕವಾಗಿ ದ್ರಾಕ್ಷಿ ತುಳಿಯುವ ಆಟ(ವೈನ್‌ ಸ್ಟಾಂಪಿಂಗ್‌), ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳು, ಕುರುಕಲು ತಿಂಡಿ, ಆಹಾರ ಮಳಿಗೆಗಳು ಸಹ ಇರಲಿದ್ದು, ವಿವಿಧ ಕಂಪನಿಗಳಿಂದ ತಮ್ಮ ಬ್ರಾಂಡ್‌ನ‌ ರುಚಿ ನೋಡಲು ಕೊಡುವ ಉಚಿತ ವೈನ್‌ ಮೇಳದ ಮಜವನ್ನು ಹೆಚ್ಚಿಸಲಿವೆ.

ಇನ್ನು ದ್ರಾಕ್ಷಾರಸ ಮಂಡಳಿಯ ನೌಕರರು ಮೇಳದಲ್ಲಿ ಜನರಲ್ಲಿನ ವೈನ್‌ ಬಗ್ಗೆ ಇರುವ ತಪ್ಪು ಕಲ್ಪನೆ ಹೋಗಲಾಡಿಸುವ, ಮದ್ಯದ ಬದಲು ವೈನ್‌ ಬಳಕೆ ಮಾಡುವಂತೆ ಜಾಗೃತಿ ಮೂಡಿಸುವ ಹಾಗೂ ಆರೋಗ್ಯಕ್ಕೆ ವೈನ್‌ ಯಾವ ರೀತಿ ಒಳಿತು ಎಂಬ ಅರಿವು ಮೂಡಿಸಲಿದೆ. ಜತೆಗೆ ಮನೆಯಲ್ಲಿಯೇ ವೈನ್‌ ಹೇಗೆ ತಯಾರಿಸಬೇಕು ಎಂಬುದರ ಕುರಿತು ಪ್ರಾತ್ಯಕ್ಷಿಕೆ ನೀಡಲಿದೆ.

ಈ ಬಾರಿ ಮೇಳದಲ್ಲಿ ವೈನೆರಿಗಳಿಗೆ ಒಂದಿನ ಪ್ರವಾಸ (ವೈನ್‌ ಟೂರಿಸಂ) ಕುರಿತು ಸಾಕಷ್ಟು ಪ್ರಚಾರ ನೀಡಲು ಮಂಡಳಿ ಚಿಂತನೆ ನಡೆಸಿದೆ. ಈ ಪ್ರವಾಸದಲ್ಲಿ ವೈನ್‌ದ್ರಾಕ್ಷಿ ಬೆಳೆಯುವ ಜಾಗ, ಯಾವ ರೀತಿ ವೈನ್‌ ತಯಾರಿಸುತ್ತಾರೆ, ಯಾವೆಲ್ಲ ಮಾದರಿಯ ವೈನ್‌ಗಳಿವೆ, ಯಾವ ಖಾದ್ಯಕ್ಕೆ ಯಾವ ವೈನ್‌ ಸೂಕ್ತ ಎಂಬೆಲ್ಲ ಅಂಶವನ್ನು ಖುದ್ದು ವೈನರಿಗಳಿಗೆ ಸಾರ್ವಜನಿಕರನ್ನು ಕರೆದುಕೊಂಡು ಹೋಗಿ ತೋರಿಸಲಾಗುತ್ತದೆ. 

ಎರಡು ಕೋಟಿ ರೂ. ವಹಿವಾಟು ನಿರೀಕ್ಷೆ: ಕಳೆದ ವರ್ಷದ ಮೇಳಕ್ಕೆ 10 ಸಾವಿರ ಜನ ಭೇಟಿ ನೀಡಿದ್ದು, 1.4 ಕೋಟಿ ರೂ. ವಹಿವಾಟು ನಡೆದಿತ್ತು. ಈ ಬಾರಿ ಮೇಳದಲ್ಲಿ 15 ಸಾವಿರ ಜನರನ್ನು ನಿರೀಕ್ಷಿಸಿದ್ದು, 2 ಕೋಟಿ ರೂ. ವಹಿವಾಟು ನಡೆಸುವ ಗುರಿ ಹೊಂದಿದ್ದೇವೆ.

ಪ್ರಸ್ತುತ ರಾಜ್ಯದಲ್ಲಿ 20,253 ಹೆಕ್ಟೇರ್‌ ಪ್ರದೇಶದಲ್ಲಿ ರಾಜ್ಯದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿದೆ. ವಾರ್ಷಿಕ ಸುಮಾರು 4 ಲಕ್ಷ ಟನ್‌ ವೈನ್‌ದ್ರಾಕ್ಷಿ, 80 ಲಕ್ಷ ಲೀಟರ್‌ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿದೆ. 17 ವೈನರಿಗಳು, 190 ವೈನ್‌ ಟಾವರಿನ್‌, 40 ವೈನ್‌ ಬೋಟಿಕ್‌ಗಳು ರಾಜ್ಯದಲ್ಲಿವೆ ಎಂದು ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಟಿ. ಸೋಮು ತಿಳಿಸಿದ್ದಾರೆ.

ಮೇಳದಲ್ಲಿ ಏನೆಲ್ಲಾ ಇರುತ್ತೆ?: ಮೂರು ದಿನ ನಡೆಯುವ ಮೇಳದಲ್ಲಿ ರಾಜ್ಯದ 17 ವೈನರಿಗಳು, ಅಮೆರಿಕ, ಆಸ್ಟ್ರೇಲಿಯ, ನೂಜಿಲೆಂಡ್‌ ಸೇರಿ ವಿವಿಧ ದೇಶಗಳ 12 ಕಂಪನಿಗಳು ತಮ್ಮ ಉತ್ಪನ್ನಗಳೊಂದಿಗೆ ಭಾಗವಹಿಸಲಿವೆ. ನಿತ್ಯ ಬೆಳಗ್ಗೆ 11 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೇಳಕ್ಕೆ ಸಾರ್ವಜನಿಕರಿಗೆ ಪ್ರವೇಶವಿದ್ದು, ದಿನದ ಪ್ರವೇಶ ಶುಲ್ಕ 20 ರೂ. ನಿಗದಿ ಪಡಿಸಲಾಗಿದೆ.

ಮೇಳದಲ್ಲಿ ಗ್ರಾಹಕರು ಕೊಂಡುಕೊಳ್ಳುವ ವೈನ್‌ ದರದಲ್ಲಿ ಶೇ.10ರಿಂದ 15ರಷ್ಟು ರಿಯಾಯಿತಿ ನೀಡಲಾಗುತ್ತದೆ. ಪ್ರಮುಖವಾಗಿ ರೆಡ್‌ ವೈನ್‌, ವೈಟ್‌ ವೈನ್‌, ಫಾಕ್ಲಿಂಗ್‌ ವೈನ್‌, ಡೆಸೆರ್ಟ್‌ ವೈನ್‌, ಪ್ರೂಟ್‌ ವೈನ್‌ ಮಾದರಿಯ 150ಕ್ಕೂ ಹೆಚ್ಚು ಬ್ರಾಂಡ್‌ನ‌ ವೈನ್‌ಗಳು ಮೇಳದಲ್ಲಿರಲಿವೆ. ಕನಿಷ್ಠ 200 ರೂ. ನಿಂದ ಗರಿಷ್ಠ 50,000 ಬೆಲೆಯ ವೈನ್‌ ಮಾರಾಟಕ್ಕೆ ಉಂಟು ಎಂದು ದ್ರಾಕ್ಷಾರಸ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದರು.

* ಜಯಪ್ರಕಾಶ್‌ ಬಿರಾದಾರ್‌ 

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.