ಸ್ವಚ್ಛ, ಸುಂದರ ನಗರ ನಿರ್ಮಾಣಕ್ಕೆ ಆದ್ಯತೆ
Team Udayavani, Dec 6, 2018, 11:43 AM IST
ಬೆಂಗಳೂರು: ಸ್ವಚ್ಛ ಹಾಗೂ ಸುಂದರ ಬೆಂಗಳೂರು ನಿರ್ಮಾಣ ನನ್ನ ಆದ್ಯತೆ. ಆ ನಿಟ್ಟಿನಲ್ಲಿ ನಗರದ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಉಪಮೇಯರ್ ವಿ.ಭದ್ರೇಗೌಡ ತಿಳಿಸಿದರು.
ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರಿನ ಟ್ರಾಫಿಕ್, ಕಸದ ಸಮಸ್ಯೆಗಳ ನಿವಾರಣೆಗೆ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮೇಯರ್ ಜತೆ ಸೇರಿ ಸಮಗ್ರ ಬೆಂಗಳೂರು ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು. ಈ ವೇಳೆ ಪತ್ರಕರ್ತರು ಕೇಳಿದ ಕೆಲ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
* ಸಾರ್ವಜನಿಕರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸುತ್ತೀರ?
ಜನರ ಸಮಸ್ಯೆಗಳ ನಿವಾರಣೆಗೆ ನಾನು ಸದಾ ಸಿದ್ಧ. ನನ್ನ ವಾಟ್ಸ್ಆ್ಯಪ್ ಸಂಖ್ಯೆಯನ್ನು ಜನರಿಗೆ ನೀಡುತ್ತೇನೆ. ನಗರದ ಜನ ಎದುರಿಸುತ್ತಿರುವ ಸಮಸ್ಯೆಗಳನ್ನು ವಾಟ್ಸ್ಆ್ಯಪ್ ಮೂಲಕ ತಿಳಿಸಿದರೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ.
* ನೀವು ಲೆಕ್ಕಪರಿಶೋಧನೆ ವರದಿ ಮಂಡಿಸುತ್ತೀರಾ?
ಮೊದಲ ಅವಧಿಯಲ್ಲಿ ಉಪಮೇಯರ್ ಆಗಿದ್ದ ಹೇಮಲತಾ ಗೋಪಾಲಯ್ಯ ಅವರು ಲೆಕ್ಕಪರಿಶೋಧನಾ ವರದಿ ಮಂಡಿಸಿದ್ದರು. ಆದರೆ, ಅದರಲ್ಲಿ ಕೆಲವು ಲೋಪಗಳಿದ್ದರಿಂದ ಅಂಗೀಕರಿಸಿರಲಿಲ್ಲ. ಮೇಯರ್ ಹಾಗೂ ಆಯುಕ್ತರೊಂದಿಗೆ ಸಾಧಕ-ಬಾಧಕಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.
* ಎಂಟು ತಿಂಗಳಲ್ಲಿ ನಗರದ ಜನರು ನಿಮ್ಮಿಂದ ಏನನ್ನು ನಿರೀಕ್ಷಿಸಬಹುದು?
ಸರ್ಕಾರ ಹಾಗೂ ಪಾಲಿಕೆಯ ಅನುದಾನದಲ್ಲಿ ಈಗಾಗಲೇ ಹಲವಾರು ಯೋಜನೆಗಳು ಪ್ರಗತಿಯಲ್ಲಿವೆ. ಅವುಗಳನ್ನು ಶೀಘ್ರ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು. ಜತೆಗೆ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗುವುದು. ಜತೆಗೆ 198 ವಾರ್ಡ್ಗಳಲ್ಲಿ ಸುರಕ್ಷತೆ ದೃಷ್ಟಿಯಿಂದ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮಕೈಗೊಳ್ಳಲಾಗುವುದು.
* ತೆರಿಗೆ ಸಂಗ್ರಹ ಹೆಚ್ಚಿಸಲು ನಿಮ್ಮ ಮುಂದಿರುವ ಯೋಜನೆಗಳೇನು?
ಈಗಾಗಲೇ ಮೇಯರ್ ಗಂಗಾಂಬಿಕೆಯವರು ಆಸ್ತಿ ತೆರಿಗೆ ಸಂಗ್ರಹದ ಕುರಿತು ವಲಯವಾರು ಸಭೆಗಳನ್ನು ನಡೆಸುತ್ತಿದ್ದು, ಅವರೊಂದಿಗೆ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
MUST WATCH
ಹೊಸ ಸೇರ್ಪಡೆ
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ