ವಿ.ಭದ್ರೇಗೌಡ ಅವಿರೋಧ ಆಯ್ಕೆ


Team Udayavani, Dec 6, 2018, 11:43 AM IST

v-bhadre.jpg

ಬೆಂಗಳೂರು: ಬಿಬಿಎಂಪಿಯ 54ನೇ ಉಪಮೇಯರ್‌ ಆಗಿ ನಾಗಪುರ ವಾರ್ಡ್‌ನ ವಿ.ಭದ್ರೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು. ಜತೆಗೆ 12 ಸ್ಥಾಯಿ ಸಮಿತಿಗಳ 132 ಸದಸ್ಯ ಸ್ಥಾನಗಳ ಪೈಕಿ 130 ಸದಸ್ಯರು ಅವಿರೋಧವಾಗಿ ಆಯ್ಕೆಯಾದರು. 

ರಮೀಳಾ ಉಮಾಶಂಕರ್‌ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಉಪಮೇಯರ್‌ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಿತು. ಆದರೆ, ಬಿಜೆಪಿಯಿಂದ ಉಪಮೇಯರ್‌ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಭದ್ರೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು.

ಬೆಂಗಳೂರು ನಗರ ಪ್ರಾದೇಶಿಕ ಆಯುಕ್ತ ಶಿವಯೋಗಿ ಸಿ. ಕಳಸದ ಅವರು ಬುಧವಾರ ಪಾಲಿಕೆಯ ಕೆಂಪೇಗೌಡ ಪೌರಸಭಾಂಗಣದಲ್ಲಿ ಉಪಮೇಯರ್‌ ಹಾಗೂ 12 ಸ್ಥಾಯಿ ಸಮಿತಿ ಸದಸ್ಯ ಸ್ಥಾನಗಳ ಆಯ್ಕೆಗೆ ಚುನಾವಣಾ ಸಭೆ ಕರೆದಿದ್ದರು. ಈ ವೇಳೆ ಉಪಮೇಯರ್‌ ಸ್ಥಾನಕ್ಕೆ ಭದ್ರೇಗೌಡ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಪ್ರಾದೇಶಿಕ ಆಯುಕ್ತರು ಕೇವಲ ಐದು ನಿಮಿಷಗಳಲ್ಲಿ ಭದ್ರೇಗೌಡ ಅವರು ಉಪಮೇಯರ್‌ ಎಂದು ಘೋಷಿಸಿದರು. 

ನಂತರ 12 ಸ್ಥಾಯಿ ಸಮಿತಿಗಳಲ್ಲಿ 11 ಸಮಿತಿಗಳಿಗೆ ತಲಾ 11 ಸದಸ್ಯರಂತೆ 121 ಸದಸ್ಯರ ಆಯ್ಕೆ ಸುಸೂತ್ರವಾಗಿ ನಡೆಯಿತು. ಉಳಿದಂತೆ ನಗರ ಯೋಜನೆ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ವೇಳೆ ಹೈಡ್ರಾಮ ನಡೆದು ಕೊನೆಗೆ ಸಮಿತಿಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯೇ ನಾಮಪತ್ರ ವಾಪಸ್‌ ಪಡೆದರ‌ು. ಈವೇಳೆ ಕೇವಲ 9 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 2 ಸದಸ್ಯರ ಸ್ಥಾನಗಳಿಗೆ ಮತ್ತೆ ಚುನಾವಣೆ ನಡೆಯಲಿದೆ.

ಮುಖಭಂಗ ತಪ್ಪಿಸಿಕೊಂಡ ಬಿಜೆಪಿ: ಉಪಮೇಯರ್‌ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಹಿಂದೆ ತಿಳಿಸಿತ್ತು. ಅದರಂತೆ ರಾಮಮೂರ್ತಿ ನಗರ ವಾರ್ಡ್‌ ಪಾಲಿಕೆ ಸದಸ್ಯೆ ಪದ್ಮಾವತಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ಮೇಯರ್‌ ಚುನಾವಣೆಯಂತೆ ಮತ್ತೂಮ್ಮೆ ಮುಖಭಂಗವಾಗಬಹುದು ಎಂಬ ಕಾರಣದಿಂದ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಬಿಜೆಪಿ ಮುಖಂಡರು ನಿರ್ಧರಿಸಿದರಿಂದ ಪದ್ಮಾವತಿ ಅವರು ನಾಮಪತ್ರ ಸಲ್ಲಿಸಲಿಲ್ಲ.

ಹೈಡ್ರಾಮ ನಡುವೆ ಆಯ್ಕೆ: ಉಪಮೇಯರ್‌ ಹಾಗೂ ಸ್ಥಾಯು ಸಮಿತಿ ಸದಸ್ಯರ ಚುನಾವಣಾ ಪ್ರಕ್ರಿಯೆ ಆರಂಭವಾದರೂ, ಮೂರು ಸಮಿತಿಗಳಿಗೆ ಕೆಲವೇ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದರು. ಈ ಕಾರಣದಿಂದ ಪ್ರಾದೇಶಿಕ ಆಯುಕ್ತರು ಚುನಾವಣೆ ಪ್ರಕ್ರಿಯೆಯನ್ನು 12.30ವರೆಗೆ ಮುಂದೂಡಿದರು.

ಚುನಾವಣೆ ಪ್ರಕ್ರಿಯೆ ಮತ್ತೆ ಆರಂಭವಾದಾಗ ಮೊದಲು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ವೇಳೆ 13 ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ಕೊನೆಗೆ ಕಾಂಗ್ರೆಸ್‌ನ ಆರ್ಯ ಶ್ರೀನಿವಾಸ್‌ ಹಾಗೂ ಪಕ್ಷೇತರ ಲಕ್ಷ್ಮೀನಾರಾಯಣ್‌ ನಾಮಪತ್ರ ಹಿಂಪಡೆದು ಉಳಿದ 11 ಸದಸ್ಯರು ಅವಿರೋಧ ಆಯ್ಕೆಯಾದರು.

ನಂತರ ನಡೆದ ನಗರ ಯೋಜನೆ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಗೆ ಕಾಂಗ್ರೆಸ್‌ನಿಂದ 7 ಸದಸ್ಯರು ಹಾಗೂ ಬಿಜೆಪಿಯಿಂದ 6 ಮಂದಿ ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ಎರಡು ನಾಮಪತ್ರಗಳು ಹೆಚ್ಚಿಗೆ ಬಂದಿದ್ದರಿಂದ ಚುನಾವಣಾಧಿಕಾರಿಗಳು, ನಾಮಪತ್ರ ಹಿಂಪಡೆಯಲು ಕಾಲಾವಕಾಶ ನೀಡಿದರು. ಈ ವೇಳೆ ಕಾಂಗ್ರೆಸ್‌ನ ರಾಜಣ್ಣ ಅವರು ನಾಮಪತ್ರ ವಾಪಸ್‌ ಪಡೆದರು. ಆದರೆ, ಬಿಜೆಪಿ ಸದಸ್ಯರು ನಾಮಪತ್ರ ಹಿಂಪಡೆಯದೆ ಚುನಾವಣೆ ನಡೆಸಿ ಎಂದು ಒತ್ತಾಯಿಸಿದರು. 

ಬಿಜೆಪಿ ಸದಸ್ಯರು ನಾಮಪತ್ರ ವಾಪಸ್‌ ಪಡೆಯದಿದ್ದಾಗ ಶಿವಯೋಗಿ ಸಿ. ಕಳಸದ ಅವರು, ಸದಸ್ಯರ ಆಯ್ಕೆಗೆ ಮತದಾನ ನಡೆಸಲಾಗುವುದು. ಒಮ್ಮೆ ಮತದಾನ ಪ್ರಕ್ರಿಯೆ ಆರಂಭವಾದರೆ, ಪ್ರತಿಯೊಂದು ಸದಸ್ಯ ಸ್ಥಾನಕ್ಕೂ ಚುನಾವಣೆ ನಡೆಯಲಿದೆ. ಈ ಪ್ರಕ್ರಿಯೆ ನಡೆಸಲು ಒಂದು ವಾರ ಬೇಕಾಗಬಹುದು ಎಂದು ಹೇಳಿದರು.

ಈ ವೇಳೆ ಕಾಂಗ್ರೆಸ್‌ ಶಾಸಕರಾದ ರಾಮಲಿಂಗಾರೆಡ್ಡಿ, ಮುನಿರತ್ನ, ಬಿ.ಬಸವರಾಜು ಸೇರಿ ಇತರರು ಬಿಜೆಪಿ ಶಾಸಕರಾದ ಆರ್‌.ಅಶೋಕ್‌, ವಿಶ್ವನಾಥ್‌, ಸತೀಶ್‌ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದರು. ಆದರೆ, ವಿಶ್ವನಾಥ್‌ ಅವರು, ಚಂದ್ರಪ್ಪರೆಡ್ಡಿ ನಾಮಪತ್ರ ವಾಪಸ್‌ ಪಡೆದರೆ ಮಾತ್ರವೇ ನಮ್ಮ ಸದಸ್ಯರು ನಾಮಪತ್ರ ಹಿಂಪಡೆಯುತ್ತಾರೆ. ಇಲ್ಲವೇ ಚುನಾವಣೆ ನಡೆಯಲಿ ಎಂದು ಪಟ್ಟುಹಿಡಿದರು. 

ಕೊನೆಗೆ ರಾಮಲಿಂಗಾರೆಡ್ಡಿ ಅವರು, ಚಂದ್ರಪ್ಪರೆಡ್ಡಿ ಅವರ ಮನವೊಲಿಸಿ ನಾಮಪತ್ರ ಹಿಂಪಡೆಯುವಂತೆ ಮಾಡಿದರು. ನಂತರ ಬಿಜೆಪಿಯ ನಾರಾಯಣರಾಜು ಮತ್ತು ಗುರುಮೂರ್ತಿರೆಡ್ಡಿ ನಾಮಪತ್ರ ವಾಪಾಸ್‌ ಪಡೆದರು. ಇದರಿಂದ ಸಮಿತಿಗೆ 9 ಸದಸ್ಯರು ಮಾತ್ರ ಆಯ್ಕೆಯಾಗಿದ್ದು, ನಗರ ಯೋಜನೆ ಸ್ಥಾಯಿ ಸಮಿಯ ಇಬ್ಬರು ಸದಸ್ಯರ ಆಯ್ಕೆಗೆ ಮತ್ತೂಮ್ಮೆ ಚುನಾವಣೆ ನಡೆಸುವುದಾಗಿ ಚುನಾವಣಾಧಿಕಾರಿ ತಿಳಿಸಿದರು.

ಸೇಡು ತೀರಿಸಿಕೊಂಡ ಬಿಜೆಪಿ?: ಮೇಯರ್‌ ಚುನಾವಣೆಯಲ್ಲಿ ಆಪರೇಷನ್‌ ಕಮಲಕ್ಕೆ ಒಳಗಾಗಿ ಮೊದಲು ಬಿಜೆಪಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದ ಪಕ್ಷೇತರರು ಕೊನೆಯ ಕ್ಷಣದಲ್ಲಿ ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯನ್ನು ಬೆಂಬಲಿಸಿದ್ದರು.

ಆ ಹಿನ್ನೆಲೆಯಲ್ಲಿ ಪಕ್ಷೇತರ ಸದಸ್ಯ ಚಂದ್ರಪ್ಪರೆಡ್ಡಿ ಅವರಿಂದ ಒತ್ತಾಯ ಪೂರ್ವಕವಾಗಿ ನಾಮಪತ್ರ ಹಿಂಪಡೆಯುವಂತೆ ಮಾಡಿ ಅವರಿಗೆ ಅಧ್ಯಕ್ಷ ಸ್ಥಾನ ದೊರೆಯದಂತೆ ಮಾಡುವ ಮೂಲಕ ಬಿಜೆಪಿ ಸೇಡು ತೀರಿಸಿಕೊಂಡಿತು. ಕಳೆದ ಬಾರಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ರ ಪತ್ನಿ ವಾಣಿಶ್ರೀ ಸೋಲಿಗೆ ಪಾಲಿಕೆ ಸದಸ್ಯ ಚಂದ್ರಪ್ಪ ರೆಡ್ಡಿ ಕಾರಣ ಎಂಬ ಸಿಟ್ಟಿನಿಂದ ಅವರು ನಾಮಪತ್ರ ವಾಪಸ್‌ ಪಡೆಯುವವರಿಗೆ ವಿಶ್ವನಾಥ್‌ ಅವರು ಪಟ್ಟು ಬಿಡಲಿಲ್ಲ ಎಂದು ಹೇಳಲಾಗಿದೆ. 

ಬಿಜೆಪಿ ಶಾಸಕರ ವಿರುದ್ಧ ಗರಂ: ತಮ್ಮ ಕ್ಷೇತ್ರದ ಪಾಲಿಕೆ ಸದಸ್ಯರನ್ನು ಪ್ರಮುಖ ಸ್ಥಾಯಿ ಸಮಿತಿಗಳ ಸದಸ್ಯರನ್ನಾಗಿಸಬೇಕೆಂಬ ವಿಚಾರ ಬಿಜೆಪಿ ಶಾಸಕರಾದ ಆರ್‌.ಅಶೋಕ್‌ ಮತ್ತು ಸತೀಶ್‌ರೆಡ್ಡಿ ಕಿತ್ತಾಟಕ್ಕೆ ಕಾರಣವಾಯಿತು. ಬೆಳಗ್ಗೆ 9 ಗಂಟೆಗೆ ಬಿಬಿಎಂಪಿ ವಿರೋಧ ಪಕ್ಷ ನಾಯಕ ಕಚೇರಿಯಲ್ಲಿ ಸಭೆ ನಡೆಸಿದ ವೇಳೆ ತಮ್ಮ ಕ್ಷೇತ್ರದ ಪಾಲಿಕೆ ಸದಸ್ಯರಿಗೆ ಪ್ರಮುಖ ಸ್ಥಾಯಿ ಸಮಿತಿಗಳಿಗೆ ನೇಮಿಸಬೇಕೆಂದು ಸತೀಶ್‌ರೆಡ್ಡಿ ಪಟ್ಟು ಹಿಡಿದರು. ಅದಕ್ಕೆ ಆರ್‌.ಅಶೋಕ ಒಪ್ಪದಿದ್ದಾಗ, ಸತೀಶ್‌ ರೆಡ್ಡಿ ಗರಂ ಆದರು. ಈ ವೇಳೆ ಸಂಸದ ಪಿ.ಸಿ.ಮೋಹನ್‌ ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನ ಪಡಿಸಿದರು. 

ಮೀ ಟೂ ಆರೋಪ ಮಾಡಿದ ಬಿಜೆಪಿ ಸದಸ್ಯೆ: ತಮ್ಮನ್ನು ಯಾವುದೇ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ಮಾಡದ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಟ್ಟೂರು ವಾರ್ಡ್‌ನ ಪಾಲಿಕೆ ಸದಸ್ಯೆ ನೇತ್ರಾ ಪಲ್ಲವಿ, ಬಿಜೆಪಿ ಮುಖಂಡರ ಮೇಲೆ ಮೀ ಟೂ ಆರೋಪ ಮಾಡಿದ್ದಾರೆ.

ಸ್ಥಾಯಿ ಸಮಿತಿ ಚುನಾವಣೆಗೂ ಮೊದಲು ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಚೆನ್ನಾಗಿರುವ ಸದಸ್ಯೆಯರನ್ನು ಕರೆಯುತ್ತಾರೆ. ಆಗ ಹೋಗದಿದ್ದರೆ ಯಾವುದೇ ಸ್ಥಾನಮಾನ ನೀಡುವುದಿಲ್ಲ ಎಂದು ಕಣ್ಣೀರು ಹಾಕಿದರು. ಆದರೆ, ನೇತ್ರಾ ಪಲ್ಲವಿ ಅವರ ಆರೋಪದ ಬಗ್ಗೆ ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌, ಮಾಜಿ ಡಿಸಿಎಂ ಆರ್‌.ಅಶೋಕ್‌ ಸೇರಿ ಬಿಜೆಪಿ ಮುಖಂಡರು ಯಾರೂ ಪ್ರತಿಕ್ರಿಯೆ ನೀಡಲಿಲ್ಲ.

* ಉಪಮೇಯರ್‌ ಚುಣಾವಣೆಗೆ ಹಾಜರಿದ್ದ ಮತದಾರರು: 219
* ಸ್ಥಾಯಿ ಸಮಿತಿ ಚುನಾವಣೆಗೆ ಹಾಜರಿದ್ದ ಮತದಾರರು: 200

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.