ಕನ್ನಡ ಪ್ರಾಧಿಕಾರದ ಪುಸ್ತಕಗಳಿಗೆ ಹೆಚ್ಚಿದ ಬೇಡಿಕೆ


Team Udayavani, Dec 12, 2018, 12:33 PM IST

kannaada.jpg

ಬೆಂಗಳೂರು: ಪುಸ್ತಕ ಕೊಂಡು ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಮಾತು ಕೇಳಿಬರುತ್ತಿರುವ ನಡುವೆ ನಗರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಸೇರಿದಂತೆ ಅಕಾಡೆಮಿಗಳು ಆರಂಭಿಸಿದ ರಿಯಾಯ್ತಿ ದರದ ಮಾರಾಟದಲ್ಲಿ ಪ್ರಾಧಿಕಾರದ ಪುಸ್ತಕಗಳ ಮಾರಾಟ ಭರ್ಜರಿಯಾಗಿ ನಡೆದಿದೆ.

ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿಯಲ್ಲಿ ಬರುವ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಸಾಹಿತ್ಯ ಅಕಾಡೆಮಿ ಮತ್ತು ಕುವೆಂಪು ಭಾಷಾ ಭಾರತಿ ಪ್ರಾಧಿಕಾರಗಳು ತಾವು ಪ್ರಕಟಿಸಿದ ಹಲವು ಪುಸ್ತಕಗಳನ್ನು ಶೇ. 50ರ ರಿಯಾಯ್ತಿ ದರದಲ್ಲಿ ಮಾರಾಟ ಮಾಡಿದ್ದು, ಸುಮಾರು 5 ಲಕ್ಷ ರೂ. ವಹಿವಾಟು ನಡೆದಿದೆ.

ವೈದ್ಯಕೀಯ ಕೃತಿಗಳಿಗೆ ಡಿಮ್ಯಾಂಡ್‌: ನ‌ಗರದ ರವೀಂದ್ರ ಕಲಾಕ್ಷೇತ್ರದಲ್ಲಿರುವ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ರಿಯಾಯ್ತಿ ಮಾರಾಟ ನಡೆದಿದ್ದು ಆರೋಗ್ಯ ಸಂಬಂಧಿಸಿದ ಹಲವು ಮಾಲಿಕೆಗಳು ಮಾರಾಟವಾಗಿವೆ. ಇದರ ಜತೆಗೆ ಪ್ರೊ.ಎಸ್‌.ಜಿ.ಸಿದ್ಧಲಿಂಗಯ್ಯ ಅವರ “ಸಾಲು ದೀಪ’, ಬರಗೂರು ರಾಮಚಂದ್ರಪ್ಪ ಅವರ “ಕನ್ನಡ ಸಾಹಿತ್ಯ ಸಂಗಾತಿ’,

ಚಂದ್ರಶೇಖರ ಕಂಬಾರರ “ನೆಲಸಂಪಿಗೆ ನಾಟಕ ಸಂಪುಟ’, ಡಾ.ಪಿ.ವಿ.ನಾರಾಯಣ ಅವರ “ಪಂಪ ಭಾರತ’, ಲೇಖಕಿ ಡಾ.ಕುಸುಮ ಸೊರಬ ಅವರ “ಮೂಕ ಸಹ್ಯಾದ್ರಿಗೆ ಮಾತು ಕೊಟ್ಟವಳು’ ಸೇರಿದಂತೆ ಹಲವು ಕೃತಿಗಳು ಖರೀದಿಯಾಗಿವೆ. ವಿಮರ್ಶೆ ಸೇರಿದಂತೆ ವಿವಿಧ ಲೇಖಕರ ಸುಮಾರು 6,646 ಕೃತಿಗಳ ಮಾರಾಟವಾಗಿವೆ. 

ಆನ್‌ಲೈನ್‌ನಲ್ಲೂ ಮಾರಾಟ: ಮತ್ತೂಂದು ವಿಶೇಷ ಅಂದರೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನಲ್ಲೂ ಓದುಗರ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಧಿಕಾರದ ಪುಸ್ತಕಗಳನ್ನು ಖರೀದಿ ಮಾಡಿದ್ದಾರೆ. ವಿವಿಧ ಲೇಖಕರ ಸುಮಾರು 764 ಕೃತಿಗಳು ಪ್ರಾಧಿಕಾರದ ಆನ್‌ಲೈನ್‌ನಲ್ಲಿ ಮಾರಾಟವಾಗಿದ್ದು 55,261 ವಹಿವಾಟು ನಡೆದಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಪುಸ್ತಕಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿದ್ದು ಸುಮಾರು 2 ಲಕ್ಷದ 48 ಸಾವಿರ ರೂ. ವಹಿವಾಟು ನಡೆಸಿದೆ. ಲೇಖಕ ಪ್ರಧಾನ ಗುರುದತ್ತ ಅವರ “ನಾಗರಿಕತೆಗಳು’ ಡಾ.ಸಿ.ಚಂದ್ರಪ್ಪ ಅವರ ‘ಪೆರಿಯಾರ್‌ ಚಿಂತನೆ’ ಕೃತಿಗಳು ಸೇರಿದಂತೆ ಹಲವು ಕೃತಿಗಳು ಸೇಲ್‌ ಆಗಿವೆ ಎಂದರು.

 ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪ್ರಕಟಿಸಿರುವ ಕೃತಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಯಾಗಿದ್ದು 1 ಲಕ್ಷದ 4 ಸಾವಿರ ವಹಿವಾಟು ನಡೆದಿದೆ. ಜತೆಗೆ ಕನ್ನಡ ಸಾಹಿತ್ಯ ಅಕಾಡೆಮಿ 60 ಸಾವಿರ ಪುಸ್ತಕಗಳು ಮಾರಾಟವಾಗಿವೆ.

ಊರು ಕೇರಿಗೆ ಬಾರಿ ಬೇಡಿಕೆ: ರಿಯಾಯ್ತಿ ದರದ ಪುಸ್ತಕ ಮಾರಾಟದಲ್ಲಿ ಕವಿ ಸಿದ್ಧಲಿಂಗಯ್ಯ ಅವರ ಆತ್ಮಕಥನ “ಊರು ಕೇರಿ’ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿದೆ. ಈ ಕೃತಿಯ ಸುಮಾರು ನೂರು ಪುಸ್ತಕಗಳು ಮಾರಾಟವಾಗಿವೆ. ಜತೆಗೆ ನಟರಾಜ ಹುಳಿಯಾರ್‌ ಮತ್ತು ಕಾಳೇಗೌಡ ನಾಗರವ ಸಂಪಾದಕತ್ವದ “ಲೋಹಿಯಾ ಚಿಂತನೆಗಳು’, ಜಿ.ಪಿ.ರಾಜರತ್ನಂ ಅವರ “ಮಕ್ಕಳ ಕತೆಗಳು’,” ವಿಶ್ವ ಸಮ್ಮೇಳನ ಪುಸ್ತಕ’, ಸಿದ್ದಯ್ಯ ಪುರಾಣಿಕ ಅವರ “ಶರಣ ಚರಿತಾಮೃತ’ ಕೃತಿಗಳಿಗೆ ಬೇಡಿಕೆ ಇದೆ ಎಂದು ಮಾರಾಟಗಾರರು ತಿಳಿಸಿದ್ದಾರೆ.

ಓದುಗರ ಬಳಿಗೆ ಪುಸ್ತಕಗಳನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಲವು ಯೋಜನೆಗಳನ್ನು ರೂಪಿಸಿದ್ದು, ರಿಯಾಯ್ತಿದರ ಮಾರಾಟ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಧಿಕಾರದ ಪುಸ್ತಕಗಳು ಮಾರಾಟವಾಗಿರುವುದು ಖುಷಿ ತಂದಿದೆ.
-ವಸುಂಧರಾ ಭೂಪತಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ.

ನನ್ನ “ಊರುಕೇರಿ’ ಕೃತಿಯನ್ನು ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕೊಳ್ಳುತ್ತಿದ್ದಾರೆ. ಈಗಾಗಲೇ ಮೂರು ಭಾಗಗಳನ್ನು ಹೊರತಂದಿದ್ದು, 4ನೇ ಭಾಗ ಬರೆಯಲು ಇದು ಪ್ರೇರಣೆ ನೀಡಿದೆ. ಶೀಘ್ರದಲ್ಲೇ ನಾಲ್ಕನೇ ಭಾಗ ಹೊರ ಬರಲಿದೆ.
-ಸಿದ್ದಲಿಂಗಯ್ಯ, ಕವಿ.

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.