ಮೇಕೆದಾಟು ಯೋಜನೆ ಬಗ್ಗೆತಮಿಳುನಾಡು ತಪ್ಪುಕಲ್ಪನೆ
Team Udayavani, Dec 13, 2018, 1:43 PM IST
ಬೆಳಗಾವಿ: ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಸರ್ಕಾರ ತಪ್ಪು ಕಲ್ಪನೆ ಯಲ್ಲಿದೆ. ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಗೊಳಿಸುತ್ತಿಲ್ಲ, ಕೇವಲ ಡಿಪಿಆರ್ ಮಾತ್ರ ಸಿದ್ಧಪಡಿಸುತ್ತಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯನ್ನು ತಮಿಳುನಾಡು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಕೇವಲ ರಾಜಕಾರಣಕ್ಕಾಗಿ ಯೋಜನೆಯನ್ನು ವಿರೋಧ ಮಾಡುವುದು ಸರಿಯಲ್ಲ. ಕಾನೂನು ಚೌಕಟ್ಟಿನೊಳಗೆ ಯೋಜನೆ ಜಾರಿ ಮಾಡಲು
ಮುಂದಾಗಿದ್ದೇವೆ ಎಂದು ಹೇಳಿದರು.
ಕೇಂದ್ರದ ಜಲ ಆಯೋಗ ಕೇವಲ ಡಿಪಿಆರ್ ಸಿದ್ದಪಡಿಸಲು ಮಾತ್ರ ಅನುಮತಿ ಕೊಟ್ಟಿದೆ. ಡಿಪಿಆರ್ ಬಿಟ್ಟು ನಾವು ಅಣೆಕಟ್ಟೆ ಕಟ್ಟುವ ಕೆಲಸ ಆರಂಭ ಮಾಡಿಲ್ಲ. ನಮ್ಮ ವಾದ ಮಂಡನೆ ಮಾಡಲು ಸುಪ್ರೀಂ ಕೋರ್ಟ್ 4 ವಾರಗಳ ಸಮಯ ಕೊಟ್ಟಿದೆ. ಇದಕ್ಕೆ ನಾವು ಸಿದ್ದವಾಗುತ್ತಿದ್ದೇವೆ. ಸಂಪೂರ್ಣ ತೀರ್ಪಿನ ವಿವರ ಬಂದ ಮೇಲೆ ನಾನು ಪ್ರತಿಕ್ರಿಯೆ ಕೊಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ