ಕ್ರೀಡೆಯಿಂದ ಆತ್ಮವಿಶ್ವಾಸ ವೃದ್ಧಿ
Team Udayavani, Dec 15, 2018, 12:29 PM IST
ಕೆಂಗೇರಿ: ವಿದ್ಯಾರ್ಥಿಗಳು ನಿತ್ಯ ಜೀವನದಲ್ಲಿ ಕ್ರೀಡೆಗೆ ಆದ್ಯತೆ ನೀಡಿದರೆ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಖ್ಯಾತ ಟ್ರಯಾಥ್ಲಾನ್ ಕ್ರೀಡಾಪಟು ಜಿ.ಆರ್.ಕೀರ್ತಿಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಮೈಸೂರು ರಸ್ತೆಯ ಗುರುಕುಲ ಇಂಟರ್ನ್ಯಾಷನಲ್ ಶಾಲೆಯ ಪ್ರಥಮ ವರ್ಷದ 3 ದಿನಗಳ ಗುರುಕುಲ ಒಲಿಂಪಿಕ್ ಕ್ರೀಡಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಲ್ಲೇ ತಮಗೆ ಇಷ್ಟವಾದ ಕ್ರೀಡೆ ಅಯ್ಕೆ ಮಾಡಿಕೂಂಡು ಅದರಲ್ಲಿ ಪರಿಣತಿ ಪಡೆದು, ಶಾಲೆ, ದೇಶಕ್ಕೆ ಕೀರ್ತಿ ತರಬೇಕು ಎಂದರು.
ಗುರುಕುಲ ಸಂಸ್ಥೆಯ ಸತ್ಸಂಗ್ ಪ್ರಿಯದಾಸ್ ಸ್ವಾಮೀಜಿ ಮಾತನಾಡಿ, ಬಾಲ್ಯದಿಂದಲೇ ಸ್ವಯಂ ನಿರ್ಣಯ ತೆಗೆದುಕೂಳ್ಳಲು ಹಾಗೂ ಉತ್ತಮ ಮನೋಭಾವ ಬೆಳೆಸಿಕೊಳ್ಳಲು ನೆರವಾಗುವ ಕ್ರೀಡೆಗಳು, ವಿದ್ಯಾರ್ಥಿಗಳು ಜೀವನ ರೂಪಿಸಿಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗುರುಕುಲ ಶಾಲೆ ಮುಖ್ಯ ನಿರ್ವಾಹಕರಾದ ಕೃಷ್ಣಚರಣ ದಾಸ್ ಸ್ವಾಮೀಜಿ, ಪ್ರಿನ್ಸಿಪಾಲ್ ಡಾ.ರಾಬಿನ್ ಪ್ರಾಮಾಣಿಕ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ