ಚಿಂದಿ ಆಯುವವರಿಗೆ ಒಣ ತ್ಯಾಜ್ಯದ ಹೊಣೆ!


Team Udayavani, Dec 15, 2018, 12:32 PM IST

chindi.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈಗಾಗಲೇ ವಾರ್ಡ್‌ವಾರು ಟೆಂಡರ್‌ ಕರೆಯಲು ಮುಂದಾಗಿರುವ ಬಿಬಿಎಂಪಿ, ಚಿಂದಿ ಆಯುವವರಿಗೆ ಒಣತ್ಯಾಜ್ಯ ವಿಲೇವಾರಿ ಜವಾಬ್ದಾರಿ ವಹಿಸಲು ನಿರ್ಧರಿಸಿದೆ.

ನಗರದಲ್ಲಿ ಸಮರ್ಪಕ ತ್ಯಾಜ್ಯ ವಿಲೇವಾರಿಗೆ ಈಗಾಗಲೇ ಹಲವಾರು ಕ್ರಮಗಳನ್ನು ಪಾಲಿಕೆ ಕೈಗೊಂಡಿದೆ. ಮುಂದುವರಿದು ಹಸಿತ್ಯಾಜ್ಯ ಸಮಸ್ಯೆ ಪರಿಹಾರಕ್ಕೆ ವಾರ್ಡ್‌ವಾರು ಟೆಂಡರ್‌ ಕರೆಯಲು ಸಿದ್ಧತೆ ನಡೆಸಿದೆ. ಇದರಿಂದಾಗಿ ಒಣತ್ಯಾಜ್ಯ ವಿಲೇವಾರಿ ಸಮಸ್ಯೆ ಎದುರಾಗುವ ಸಾಧ್ಯತೆಯಿರುವುದರಿಂದ ಒಣತ್ಯಾಜ್ಯ ವಿಲೇವಾರಿಗೆ ಚಿಂದಿ ಆಯುವವರನ್ನು ನಿಯೋಜಿಸಿಕೊಳ್ಳಲು ನಿರ್ಧರಿಸಿದೆ. 

ನಗರದ ಪ್ರಮುಖ ರಸ್ತೆಗಳು, ಮೈದಾನ, ಖಾಲಿ ನಿವೇಶನ ಹಾಗೂ ತ್ಯಾಜ್ಯರಾಶಿ ಹೀಗೆ ಎಲ್ಲೆಂದರಲ್ಲಿ ಬಾಟಲ್‌, ಪ್ಲಾಸ್ಟಿಕ್‌ ವಸ್ತುಗಳ ಸಂಗ್ರಹಣೆಯಲ್ಲಿ ತೊಡಗುವ ಚಿಂದಿ ಆಯುವವರಿಗೆ ಹೊಸದೊಂದು ಕೆಲಸ ಕೊಡಲು ಪಾಲಿಕೆ ಸಜ್ಜಾಗಿದೆ. ಆ ಹಿನ್ನೆಲೆಯಲ್ಲಿ ನಗರದಲ್ಲಿನ 7 ಸಾವಿರ ಅಧಿಕೃತ ಚಿಂದಿ ಆಯುವವರ ಮಾಹಿತಿ ಕಲೆಹಾಕಿದೆ. 

ಅದರಂತೆ ತ್ಯಾಜ್ಯ ವಿಲೇವಾರಿ ಗುತ್ತಿಗೆ ಪಡೆಯುವವರು ಹಸಿತ್ಯಾಜ್ಯ ಹಾಗೂ ಸ್ಯಾನಿಟರಿ ತ್ಯಾಜ್ಯ ಸಂಗ್ರಹಿಸಿದರೆ, ಚಿಂದಿ ಆಯುವ ಸಿಬ್ಬಂದಿ ವಾರದಲ್ಲಿ ಎರಡು ಅಥವಾ ಮೂರು ದಿನಗಳಿಗೆ ಒಮ್ಮೆ ವಾರ್ಡ್‌ನಲ್ಲಿರುವ ಮನೆ ಮನೆಗೆ ತೆರಳಿ ಒಣತ್ಯಾಜ್ಯವನ್ನು ಸಂಗ್ರಹಿಸಲಿದ್ದು, ಸಮೀಪದ ಒಣತ್ಯಾಜ್ಯ ಸಂಗ್ರಹ ಕೇಂದ್ರಕ್ಕೆ ನೀಡಲಿದ್ದು, ಅವರಿಗೆ ಕೇಂದ್ರದಿಂದ ಹಣ ಪಾವತಿಸಲಾಗುತ್ತದೆ. ಇದರಿಂದಾಗಿ ಒಣತ್ಯಾಜ್ಯ ವಿಲೇವಾರಿಗೆ ಮತ್ತೆ ಟೆಂಡರ್‌ ಕರೆಯುವುದು ತಪ್ಪಲಿದೆ. 

ಒಣತ್ಯಾಜ್ಯ ಸಂಗ್ರಹ ಪಾಲಿಸಿ ತರಲು ಚಿಂತನೆ: ತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿಯನ್ನು ಸರಿದಾರಿಗೆ ತರುವ ಉದ್ದೇಶದಿಂದ ಪಾಲಿಕೆಯಲ್ಲಿ ಹೊಸ ಒಣತ್ಯಾಜ್ಯ ಸಂಗ್ರಹ ಕಾಯ್ದೆ ತರಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಅದರ ಸಾಧಕ-ಬಾಧಕಗಳ ಕುರಿತು ಈಗಾಗಲೇ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಶೀಘ್ರದಲ್ಲಿಯೇ ಕಾಯ್ದೆಯನ್ನು ಪಾಲಿಕೆಯ ಮುಂದೆ ಮಂಡಸಿ ಅನುಮೋದನೆ ಪಡೆಯುವ ಸಾಧ್ಯತೆಯಿದೆ. ಹೊಸ ಕಾಯ್ದೆ ಚಿಂದಿ ಆಯುವವರನ್ನು ಸೇವೆಗೆ ನಿಯೋಜಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಪ್ರೋತ್ಸಾಹ ಧನ ನೀಡಲಾಗುತ್ತದೆ: ಒಣತ್ಯಾಜ್ಯ ಸಂಗ್ರಹ ಕೇಂದ್ರಗಳು ಇಲ್ಲದ ಕಡೆಗಳಲ್ಲಿ ಚಿಂದಿ ಆಯುವವರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಪಾಲಿಕೆ ನಿರ್ಧರಿಸಿದೆ. ಅದರಂತೆ ಸೇವೆಗೆ ನಿಯೋಜನೆ ಮಾಡಿಕೊಳ್ಳುವವರಿಗೆ ಪಾಲಿಕೆಯಿಂದ ಅಗತ್ಯ ವಾಹನ ಸೌಲಭ್ಯ, ಸುರಕ್ಷತಾ ಪರಿಕರಗಳು ಹಾಗೂ ಪ್ರೋತ್ಸಾಹ ಧನ ಸೇರಿ ಇನ್ನಿತರ ಸಹಾಯ ಮಾಡಲಾಗುತ್ತದೆ. 

ಪಾಲಿಕೆಯಿಂದ ಹಸಿತ್ಯಾಜ್ಯ ಹಾಗೂ ಸ್ಯಾನಿಟರಿ ತ್ಯಾಜ್ಯ ವಿಲೇವಾರಿಗೆ ವಾರ್ಡ್‌ವಾರು ಟೆಂಡರ್‌ ಕರೆಯಲಾಗುತ್ತಿದ್ದು, ಒಣತ್ಯಾಜ್ಯ ವಿಲೇವಾರಿಗೆ ಚಿಂದಿ ಆಯುವವರನ್ನು ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ಆ ಹಿನ್ನೆಲೆಯಲ್ಲಿ ಅವರ ದಾಖಲೆಗಳನ್ನು ಕಲೆಹಾಕಲಾಗಿದ್ದು, ಸೇವೆ ನಿಯೋಜಿಸಿಕೊಂಡವರಿಗೆ ಪಾಲಿಕೆಯಿಂದಲೇ ಗುರುತಿನ ಚೀಟಿ ಸಹ ನೀಡಲಾಗುತ್ತದೆ. ಫೆಬ್ರುವರಿಯವರೆ ಹಳೆಯ ಪದ್ಧತಿ ಮುಂದುವರಿಲಿದ್ದು, ನಂತರದಲ್ಲಿ ಹೊಸ ಪ್ರಯತ್ನಗಳಿಗೆ ಮುಂದಾಗುತ್ತೇವೆ. 
-ರಂದೀಪ್‌, ವಿಶೇಷ ಆಯುಕ್ತರು (ಘನತ್ಯಾಜ್ಯ ನಿರ್ವಹಣೆ)

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.