ಎಸ್‌ಪಿ ರಸ್ತೆ ಮಳಿಗೆಗಳ ತೆರವು!


Team Udayavani, Dec 16, 2018, 12:10 PM IST

sp-road.jpg

ಬೆಂಗಳೂರು: ಕಾರ್ಪೊರೇಷನ್‌ ಕಚೇರಿ ಸಮೀಪದ ಜನಪ್ರಿಯ ಎಸ್‌.ಪಿ ರಸ್ತೆಯಲ್ಲಿ ಶನಿವಾರ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಬಿಬಿಎಂಪಿ ಅಧಿಕಾರಿಗಳು, 20ಕ್ಕೂ ಹೆಚ್ಚು ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸುವ ಮೂಲಕ ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿದರು.

ಕೆ.ಆರ್‌.ಮಾರುಕಟ್ಟೆ ವಾರ್ಡ್‌ ವ್ಯಾಪ್ತಿಯ ಎಸ್‌.ಪಿ ರಸ್ತೆ ಸುತ್ತಮುತ್ತಲಿನ ಭಾಗಗಳಲ್ಲಿ ಹಲವಾರು ವರ್ಷಗಳಿಂದ ವ್ಯಾಪಾರಿಗಳು ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡು ವ್ಯಾಪಾರ, ವಹಿವಾಟು ನಡೆಸುತ್ತಿದ್ದರು. ಈ ಹಿಂದೆ ಒತ್ತುವರಿ ತೆರವುಗೊಳಿಸುವಂತೆ ಹಲವು ಬಾರಿ ಸೂಚಿಸಿದ್ದರೂ, ವ್ಯಾಪಾರಿಗಳು ತೆರವು ಮಾಡದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಜೆಸಿಬಿ ಬಳಸಿ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಿದರು. 

ಎಸ್‌.ಪಿ ರಸ್ತೆಯಲ್ಲಿ ನೂರಾರು ಮೊಬೈಲ್‌ ಹಾಗೂ ಎಲೆಕ್ಟ್ರಿಕಲ್‌ ಸಾಧನಗಳ ಬಿಡಿಭಾಗಗಳ ಸಗಟು ಮಳಿಗೆಗಳಿವೆ. ಬಿಡಿ ಭಾಗಗಳ ಖರೀದಿಗಾಗಿ ನಿತ್ಯ ಹತ್ತಾರು ಸಾವಿರ ಜನ ಎಸ್‌.ಪಿ ರಸ್ತೆಗೆ ಭೇಟಿ ನೀಡುತ್ತಾರೆ. ಆದರೆ, ಕೆಲವರು ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ಕಬ್ಬಿಣದ ಬಾಕ್ಸ್‌ ಮಾದರಿಯ ಮಳಿಗೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಇದರಿಂದ ಪಾದಚಾರಿಗಳು ರಸ್ತೆಯಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು. 

ಜನರು ರಸ್ತೆಯಲ್ಲಿ ಓಡಾಡುತ್ತಿರುವ ಕಾರಣ ಅಪಘಾತಗಳು ಸಂಭವಿಸಿ ಜನ ತೊಂದರೆ ಅನುಭವಿಸಿದ್ದಾರೆ. ಜತೆಗೆ ವಾಹನಗಳ ಸಂಚಾರಕ್ಕೂ ತೊಂದರೆಯಾಗುತ್ತಿದೆ. ಇದರಿಂದ ತೀವ್ರ ಸಂಚಾರ ದಟ್ಟಣೆ ಕೂಡ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವುಗೊಳಿಸುವಂತೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು.

ಸಾರ್ವಜನಿಕರ ದೂರುಗಳನ್ನು ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಪಾಲಿಕೆ ಅಧಿಕಾರಿಗಳು, ಶನಿವಾರ 20ಕ್ಕೂ ಹೆಚ್ಚು ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಿದ್ದಾರೆ. ಈ ವೇಳೆ ಮುಂಜಾಗ್ರತೆ ಕ್ರಮವಾಗಿ ಪೊಲೀಸರು ಭದ್ರತೆ ಒದಗಿಸಿದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ. ಜತೆಗೆ ತಮ್ಮ ಮಳಿಗೆ ಅನಧಿಕೃತ ಎಂಬುದು ವ್ಯಾಪಾರಿಗಳಿಗೂ ತಿಳಿದಿದ್ದರಿಂದ ಯಾರೂ ವಿರೋಧಿಸುವ ಪ್ರಯತ್ನ ಮಾಡಲಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಅನಧಿಕೃತ ಮಳಿಗೆಗಳಿಂದ ಸಾವಿರಾರು ರೂ. ಬಾಡಿಗೆ: ಕೆಲ ಕಂಪ್ಯೂಟರ್‌ ಹಾಗೂ ಎಲೆಕ್ಟ್ರಿಕಲ್‌ ವಸ್ತುಗಳ ಮಾರಾಟ ಮಳಿಗೆಗಳು ತಮ್ಮ ಕಟ್ಟಡಕ್ಕೆ ಹೊಂದಿಕೊಂಡಿರುವ ಪಾದಚಾರಿ ಮಾರ್ಗದಲ್ಲೇ ಕಟ್ಟಡ ನಿರ್ಮಿಸಿಕೊಂಡಿದ್ದರು. ಇನ್ನು ಕೆಲವರು ಪಾದಚಾರಿ ಮಾರ್ಗದಲ್ಲಿಯೇ ಪೆಟ್ಟಿಗೆ ಅಂಗಡಿ ನಿರ್ಮಿಸಿಕೊಂಡಿದ್ದರು. ಹಲವರು ಅನಧಿಕೃತವಾಗಿ ಮಳಿಗೆಗಳನ್ನು ನಿರ್ಮಿಸಿ ಸಾವಿರಾರು ರೂ. ಬಾಡಿಗೆ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ವಾರ್ಡ್‌ನ ಇತರೆಡೆಯೂ ಕಾರ್ಯಾಚರಣೆ: ಸಾರ್ವಜನಿಕರು ಸಂಚರಿಸಲಿ ಎಂಬ ಉದ್ದೇಶದಿಂದ ಪಾದಚಾರಿ ಮಾರ್ಗಗಳನ್ನು ನಿರ್ಮಿಸಲಾಗಿದೆ. ಅವುಗಳನ್ನು ಒತ್ತುವರಿ ಮಾಡಿಕೊಂಡು ಮಳಿಗೆಗಳನ್ನು ನಿರ್ಮಿಸಿದರೆ ಜನ ಎಲ್ಲಿ ಓಡಾಡಬೇಕು? ಈ ಬಗ್ಗೆ ಸಾರ್ವಜನಿಕರು ನೀಡಿದ ದೂರುಗಳನ್ನು ಆಧರಿಸಿ ತೆರವು ಕಾರ್ಯಾಚರಣೆ ನಡೆಸಿದ್ದು, ವಾರ್ಡ್‌ನ ಉಳಿದ ಭಾಗಗಳಲ್ಲಿ ಆಗಿರುವ ಪಾದಚಾರಿ ಮಾರ್ಗದ ಒತ್ತುವರಿಯನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ನಾಗರಾಜು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.