ಬೇರಿಂಗ್‌ ಬದಲಿಸಲು ಡಿಸಿಎಂ ಸೂಚನೆ


Team Udayavani, Dec 16, 2018, 12:10 PM IST

bering.jpg

ಬೆಂಗಳೂರು: “ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿಯ ಕಾಂಕ್ರೀಟ್‌ ಶಿಥಿಲಗೊಂಡ ಡಯಾಫ್ರೆàಮ್‌ ಕೆಳಭಾಗದ ಬೇರಿಂಗ್‌ ಬದಲಿಸಲು ಸೂಚನೆ ನೀಡಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಸ್ಥಳ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, “ನಮ್ಮ ಮೆಟ್ರೋ ಅತ್ಯಂತ ಸುರಕ್ಷಿತವಾಗಿದೆ. ಕಂಬದಲ್ಲಿ ಯಾವುದೇ ದೋಷ ಇಲ್ಲ. ಬೀಮ್‌ನಲ್ಲಿ ಹಾಕಿದ ಕಾಂಕ್ರೀಟ್‌ ಶಿಥಿಲಗೊಂಡಿದ್ದರಿಂದ ಸ್ವಲ್ಪ ಜರುಗಿದೆ. ಅದರ ಭಾರ ಬೇರಿಂಗ್‌ ಮೇಲೆ ಬಿದ್ದಿದೆ.

ಆ ಬೇರಿಂಗ್‌ ರಿಪೇರಿ ಮಾಡುವುದು ಬೇಡ. ಬದಲಾಯಿಸಿಬಿಡಿ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್‌) ಸೂಚಿಸಿದ್ದೇನೆ ಎಂದು ಹೇಳಿದರು. ಕಂಬದ ಮೇಲೆ ಬೇರಿಂಗ್‌ ಹಾಕಿ, ಬೀಮ್‌ ಅನ್ನು ಅಳವಡಿಸಿರುತ್ತಾರೆ. ಕಾಂಕ್ರೀಟ್‌ ಶಿಥಿಲಗೊಂಡಿದ್ದರಿಂದ ಬೇರಿಂಗ್‌ ಜರುಗಿದ್ದು, ಎಂದಿನಂತೆ ಪರಿಶೀಲನೆ ನಡೆಸುವಾಗ ಸಿಬ್ಬಂದಿಯ ಕಣ್ಣಿಗೆ ಬಿದ್ದಿದೆ ಎಂದರು.

ತಜ್ಞರ ಅಭಿಪ್ರಾಯ ಆಧರಿಸಿ ಕ್ರಮ: ಇನ್ನು ಮೆಟ್ರೋ ಬೀಮ್‌ನಲ್ಲಿ ಕಾಣಿಸಿಕೊಂಡ ಜೇನುಗೂಡು ಮಾದರಿಯ ಶಿಥಿಲ ಕಾಂಕ್ರೀಟ್‌ ದುರಸ್ತಿಗೆ ಈಗಾಗಲೇ ದೆಹಲಿ ಮೆಟ್ರೋ ಮತ್ತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಶನಿವಾರದಿಂದ ದುರಸ್ತಿ ಕಾರ್ಯ ಆರಂಭವಾಗಲಿದೆ. ಅಲ್ಲದೆ, ಈ ಸಮಸ್ಯೆ ಯಾವಾಗ ಕಾಣಿಸಿಕೊಂಡಿದೆ ಎಂಬುದನ್ನೂ ತಜ್ಞರು ತಿಳಿಸಲಿದ್ದಾರೆ. ಅದನ್ನು ಆಧರಿಸಿ, ಆ ಅವಧಿಯಲ್ಲಿದ್ದ ಗುತ್ತಿಗೆದಾರರು ಅಥವಾ ಇಂಜಿನಿಯರ್‌ಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
 
ಟ್ರಿನಿಟಿ ನಿಲ್ದಾಣದಲ್ಲಿರುವಂತೆ ಮೆಟ್ರೋ ಮೊದಲ ಹಂತದ ಮಾರ್ಗದಲ್ಲಿ ಬಹುತೇಕ ಕಡೆ “ಶಾರ್ಟ್‌ ಸ್ಪ್ಯಾನ್‌’ (ಸಣ್ಣ ವಯಾಡಕ್ಟ್ಗಳು) ಕಂಡುಬರುತ್ತವೆ. ಅಲ್ಲೆಲ್ಲಾ ಇದೇ ರೀತಿಯ ಬೀಮ್‌ಗಳನ್ನು ಅಳವಡಿಸಲಾಗಿದ್ದು, ಅವೆಲ್ಲವುಗಳನ್ನೂ ಪರಿಶೀಲನೆಗೆ ಒಳಪಡಿಸುವಂತೆ ನಿರ್ದೇಶನ ನೀಡಲಾಗಿದೆ ಎಂದೂ ಡಾ.ಪರಮೇಶ್ವರ್‌ ತಿಳಿಸಿದರು.

ಇದಕ್ಕೂ ಮೊದಲು ಹಲಸೂರಿನಿಂದ ಟ್ರಿನಿಟಿ ವೃತ್ತದವರೆಗೆ ಮೆಟ್ರೋ ರೈಲಿನಲ್ಲಿ ಬಂದಿಳಿದ ಸಚಿವರು, ದೋಷ ಕಂಡುಬಂದ ಜಾಗವನ್ನು ಪರಿಶೀಲಿಸಿದರು. ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಸೇಠ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮೆಟ್ರೋದಲ್ಲೇ ಪ್ರಯಾಣಿಸಿದ ಸಚಿವ ಡಾ.ಜಿ.ಪರಮೇಶ್ವರ್‌: ಮೆಟ್ರೋ ಅಸುರಕ್ಷಿತ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಖುದ್ದು ಉಪ ಮುಖ್ಯಮಂತ್ರಿ ಡಾ.ಪರಮೇಶ್ವರ ಅವರು ಶನಿವಾರ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು.

ಬೆಳಗ್ಗೆ 10 ಗಂಟೆಗೆ ವಿಧಾನಸೌಧ ನಿಲ್ದಾಣದಿಂದ ಬಿಎಂಆರ್‌ಸಿ ಅಧಿಕಾರಿಗಳೊಂದಿಗೆ ಮೆಟ್ರೋ ಏರಿದ ಅವರು, ಬೀಮ್‌ನಲ್ಲಿ ದೋಷ ಕಾಣಿಸಿಕೊಂಡ ಮಾರ್ಗ ಟ್ರಿನಿಟಿ ನಿಲ್ದಾಣದ ಮೂಲಕ ಹಲಸೂರು ತಲುಪಿದರು. ಮತ್ತೆ ಟ್ರಿನಿಟಿ ವೃತ್ತಕ್ಕೆ ಆಗಮಿಸಿ, ಸ್ಥಳ ಪರಿಶೀಲನೆ ನಡೆಸಿದರು. ಮಾರ್ಗ ಮಧ್ಯೆ ಪ್ರಯಾಣಿಕರಿಂದ ಅಭಿಪ್ರಾಯ ಸಂಗ್ರಹಿಸಿದರು.

ಪ್ರಯಾಣದ ವೇಳೆ ಪ್ರಯಾಣಕರೊಬ್ಬರ ಜತೆ ಮಾತಿಗಿಳಿದಾಗ, “ಬಸ್‌ಗಿಂತ ಮೆಟ್ರೋ ರೈಲು ಉತ್ತಮವಾಗಿದೆ. ಸಂಚಾರ ದಟ್ಟಣೆ ಕಿರಿಕಿರಿ ಇರುವುದಿಲ್ಲ. ಯಾವುದೇ ಸಮಸ್ಯೆ ಇಲ್ಲ’ ಎಂದರು. “ಏನಾದರೂ ಸಮಸ್ಯೆಯಾದರೆ ನಾನೇ ಇರುತ್ತೇನೆ. ಆತಂಕಪಡುವ ಅಗತ್ಯವಿಲ್ಲ’ ಎಂದು ಸಚಿವರು ಭರವಸೆ ನೀಡಿದರು. 

ಸಗಟು ತ್ಯಾಜ್ಯ ಪ್ರತ್ಯೇಕ – ಸೂಚನೆ: ಸಗಟು ತ್ಯಾಜ್ಯ ಉತ್ಪಾದಕರನ್ನು ಪ್ರತ್ಯೇಕಗೊಳಿಸಲು ಈಗಾಗಲೇ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಡಾ.ಜಿ.ಪರಮೇಶ್ವರ ತಿಳಿಸಿದರು. ಸಾಮಾನ್ಯ ತ್ಯಾಜ್ಯಗಳೊಂದಿಗೆ ವಾಣಿಜ್ಯ ತ್ಯಾಜ್ಯ ಸೇರಿಕೊಳ್ಳುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈಗಾಗಲೇ ಕಡ್ಡಾಯವಾಗಿ ಪ್ರತ್ಯೇಕಗೊಳಿಸಲು ನಿರ್ದೇಶನ ನೀಡಲಾಗಿದೆ. ಅಲ್ಲದೆ, ಎಲ್ಲಿ ಹೆಚ್ಚು ಉತ್ಪಾದನೆ ಆಗುತ್ತಿದೆಯೋ ಅದನ್ನು ನಿಯಮಿತವಾಗಿ ಪರಿಶೀಲಿಸುವಂತೆ ಸೂಚಿಸಲಾಗಿದೆ’ ಎಂದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.