ರಾಜಧಾನಿಯಲ್ಲಿ ರಾಬರಿ ಹಾವಳಿ


Team Udayavani, Dec 16, 2018, 12:10 PM IST

rajadhani.jpg

ಬೆಂಗಳೂರು: ರಾಜಧಾನಿಯಲ್ಲಿ ರಾಬರಿ ಹಾಗೂ ಸುಲಿಗೆ ಕೃತ್ಯಗಳಿಗೆ ಕಡಿವಾಣ ಇಲ್ಲದಂತಾಗಿದ್ದು, ಪ್ರತಿ ನಿತ್ಯ ನಗರದ ಒಂದಿಲ್ಲೊಂದು ಭಾಗದಲ್ಲಿ ದುಷ್ಕರ್ಮಿಗಳು ಸಾರ್ವಜನಿಕರನ್ನು ದೋಚುತ್ತಿದ್ದಾರೆ. ಇಂಥ ಕೃತ್ಯಗಳಿಗೆ ಹೊರವಲಯದ ರಸ್ತೆಗಳನ್ನೇ ಆಯ್ಕೆ ಮಾಡಿರುವ ದುಷ್ಕರ್ಮಿಗಳು, ತಡರಾತ್ರಿ ಒಂಟಿಯಾಗಿ ಬೈಕ್‌ನಲ್ಲಿ ಹೋಗುವ, ನಡೆದು ಹೋಗುವವರನ್ನು ಅಡ್ಡಗಟ್ಟಿ, ಬೆದರಿಸಿ ಸುಲಿಗೆ ಮಾಡುತ್ತಿದ್ದಾರೆ. ಮೆಟ್ರೋ ನಿಲ್ದಾಣಗಳ ಸಮೀಪವೂ ಇಂಥ ಸುಲಿಗೆ ಕೃತ್ಯಗಳು ನಡೆದಿವೆ.

ವರ್ಷದಿಂದ ವರ್ಷಕ್ಕೆ ಸುಲಿಗೆ ಪ್ರಕರಣಗಳು ಹೆಚ್ಚುತ್ತಲೇ ಇವೆ. 2016ರಲ್ಲಿ 147 ಸುಲಿಗೆ ಕೇಸುಗಳು ದಾಖಲಾಗಿದ್ದು, 2017ರಲ್ಲಿ 163 ಪ್ರಕರಣಗಳು ದಾಖಲಾಗಿವೆ. 2018ರಲ್ಲಿ ಈವರೆಗೆ 190ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ರಾಬರಿ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚುತ್ತಿದ್ದು, ಕಳೆದ ವರ್ಷ ಡಿಸೆಂಬರ್‌ ಅಂತ್ಯಕ್ಕೆ  636 ಕೇಸ್‌ಗಳು ದಾಖಲಾಗಿದ್ದರೆ, ಈ ಬಾರಿ ಇದುವರೆಗೆ 650ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಟೆಕ್ಕಿ ಕತ್ತಿಗೆ ಚಾಕು ಇಟ್ಟು ಚಿನ್ನ ಲೂಟಿ: ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ವೇರ್‌ ಇಂಜಿನಿಯರ್‌ ಆಗಿರುವ ಯುವಕನನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿದ ಮೂವರು ದುಷ್ಕರ್ಮಿಗಳು, ಆತನ ಕತ್ತಿಗೆ ಚಾಕು ಇರಿಸಿ ಚಿನ್ನದ ಸರ, ಬೆಳ್ಳಿಯ ಬ್ರಾಸ್ಲೆಟ್‌ ಹಾಗೂ ಪರ್ಸ್‌ನಲ್ಲಿದ್ದ 400 ರೂ. ಕಿತ್ತುಕೊಂಡು ಹೋದ ಘಟನೆ ಎಚ್‌ಎಎಲ್‌ ಪೊಲೀಸ್‌ ಠಾಣೇ ವ್ಯಾಪ್ತಿಯಲ್ಲಿ ನಡೆದಿದೆ.

ಡಿ.13ರಂದು ಕೆಲಸ ಮುಗಿಸಿ ಸಂಜೆ 4.30ರ ಸುಮಾರಿಗೆ ಕುಂದನಹಳ್ಳಿ ಕೆರೆ ಸಮೀಪ ತಾವು ವಾಸವಿರುವ ಪಿ.ಜಿಯಹತ್ತ ನಡೆದು ಹೋಗುತ್ತಿದ್ದ ಚೆನ್ನೈ ಮೂಲದ ಟೆಕ್ಕಿ ಗುರುಶಂಕರ್‌ರನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಬಳಿಕ ಅವರಲ್ಲಿ ಒಬ್ಬ ಚಾಕು ತೆಗೆದು ಗುರುಶಂಕರ್‌ ಕತ್ತಿಗೆ ಹಿಡಿದು, ಕಿರುಚಿಕೊಂಡರೆ ಇರಿಯುವುದಾಗಿ ಬೆದರಿಸಿದ್ದಾನೆ. ಇನ್ನಿಬ್ಬರು ಅವರ ಕತ್ತಿನಲ್ಲಿದ್ದ 16 ಗ್ರಾಂ. ಚಿನ್ನದ ಸರ ಹಾಗೂ ಕೈಯಲ್ಲಿದ್ದ ಬೆಳ್ಳಿಯ ಬ್ರಾಸ್ಲೆಟ್‌, 400 ರೂ. ನಗದು ಕೂಡ ಕಿತ್ತುಕೊಂಡು ಪರಾರಿಯಾಗಿದ್ದಾರೆ. 

ಘಟನೆಯ ಕುರಿತು “ಉದಯವಾಣಿ’ ಜತೆ ಅಭಿಪ್ರಾಯ ಹಂಚಿಕೊಂಡ ಗುರುಶಂಕರ್‌, “ಹಾಡಹಗಲೇ ದುಷ್ಕರ್ಮಿಗಳು ನಡೆಸಿದ ಕೃತ್ಯ ಭಯ ಹುಟ್ಟಿಸಿತು. 20ರಿಂದ 25 ವಯೋಮಾನದ, ಹಿಂದಿ ಮಾತನಾಡುವ ಮೂವರು, ಕೇವಲ ಮೂರ್‍ನಾಲ್ಕು ನಿಮಿಷದಲ್ಲಿ ಕೃತ್ಯ ಎಸಗಿದರು. ಘಟನೆ ನಡೆದಾಗ ರಸ್ತೆಯಲ್ಲಿ ಯಾರೂ ಓಡಾಡುತ್ತಿರಲಿಲ್ಲ. ಇದೇ ಸಮಯಕ್ಕಾಗಿ ಅವರು ಹೊಂಚು ಹಾಕಿ ಕೃತ್ಯ ಎಸಗಿರಬಹುದು’ ಎಂದರು.

ಸಹಾಯಕ್ಕೆ ಅಂಗಲಾಚಿದರೂ ಸ್ಪಂದಿಸಲಿಲ್ಲ!: “ದುಷ್ಕರ್ಮಿಗಳು ನನ್ನನ್ನು ಬಿಟ್ಟ ತಕ್ಷಣ ಸಹಾಯಕ್ಕಾಗಿ ಕಿರುಚಿಕೊಂಡೆ, ಅದೇ ವೇಳೆ ಬಂದ ಬೈಕ್‌ ಸವಾರರರನ್ನು ಸಹಾಯ ಮಾಡಿ, ದುಷ್ಕರ್ಮಿಗಳನ್ನು ಬೆನ್ನಟ್ಟೋಣ ಎಂದು ಕೇಳಿಕೊಂಡೆ. ಆದರೆ ಸಹಾಯ ಸಿಗಲಿಲ್ಲ. ಕಡೆಗೆ ಆಟೋ ಚಾಲಕರೊಬ್ಬರು ನೆರವಾದರೂ, ಅಷ್ಟರಲ್ಲಾಗಲೇ ದುಷ್ಕರ್ಮಿಗಳು ಪರಾರಿಯಾಗಿದ್ದರು. ಬಳಿಕ ಪೊಲೀಸರಿಗೆ ದೂರು ನೀಡಿದೆ,’ ಎಂದು ಗುರುಶಂಕರ್‌ ಮಾಹಿತಿ ನೀಡಿದರು.

ದಾರಿಹೋಕನ ದೋಚಿದರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ, ಚಿನ್ನದ ಸರ ದೋಚಿರುವ ಘಟನೆ ಹೆಣ್ಣೂರಿನಲ್ಲಿ ನಡೆದಿದೆ. ಈ ಕುರಿತು ಪ್ರಮೋದ್‌ ಪೀಟರ್‌ ಎಂಬುವವರು ನೀಡಿದ್ದಾರೆ. ಖಾಸಗಿ ಕಂಪನಿ ಉದ್ಯೋಗಿ ಪ್ರಮೋದ್‌, ಶುಕ್ರವಾರ ತಡರಾತ್ರಿ ಹೆಣ್ಣೂರು ಮುಖ್ಯ ರಸ್ತೆಯಲ್ಲಿ ನಡೆದು ಹೋಗುವಾಗ ಕಾರಿನಲ್ಲಿ ಬಂದು ಅಡ್ಡಗಟ್ಟಿದ ಮೂವರು ದುಷ್ಕರ್ಮಿಗಳು, ಮಾರಕಾಸ್ತ್ರ ತೋರಿಸಿ ಬೆದರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಹೊಸ ಬೀಟ್‌ ಪದ್ಧತಿ ಯಶಸ್ಸು ಮರೀಚಿಕೆ?: ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧಗಳ ಕಡಿವಾಣ ದೃಷ್ಟಿಯಿಂದ ಆಯಾ ಪೊಲೀಸ್‌ ಠಾಣೆಯ ಪ್ರತಿ ಸಿಬ್ಬಂದಿಗೆ ಜವಾಬ್ದಾರಿ ನೀಡುವ ಸಲುವಾಗಿ ಕಳೆದ ವರ್ಷ ಏಪ್ರಿಲ್‌ನಲ್ಲಿ ಜಾರಿಗೆ ಬಂದ ಹೊಸ ಬೀಟ್‌ ಪದ್ಧತಿ ಸಂಪೂರ್ಣ ಯಶಸ್ಸು ಕಂಡಿಲ್ಲ ಎಂದು ಹೇಳಲಾಗುತ್ತಿದೆ.

ಠಾಣೆಯ ಮುಖ ಪೇದೆ, ಪೇದೆಗಳಿಗೂ ನಿರ್ದಿಷ್ಟ ವ್ಯಾಪ್ತಿಯ ಪ್ರದೇಶದ ಜವಾಬ್ದಾರಿ ನೀಡೊದರೆ ಆ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಬೀಳಲಿದೆ ಎಂಬ ಉದ್ದೇಶ ಬೀಟ್‌ ಪದ್ಧತಿಯದ್ದಾಗಿತ್ತು. ಆದರೆ, ನಗರದಲ್ಲಿ ಹೆಚ್ಚಾಗಿರುವ ಸುಲಿಗೆ, ಸರಕಳ್ಳತನ, ರಾಬರಿ ಪ್ರಕರಣಗಳ ಅಂಕಿ-ಅಂಶ ಗಮನಿಸಿದರೆ, ಬೀಟ್‌ ಪದ್ಧತಿ ಯಶಸ್ಸು ಕಂಡಿಲ್ಲ ಎಂಬುದು ಕಂಡುಬರುತ್ತಿದೆ.

ಬೆಂಗಳೂರಂತಹ ಮಹಾನಗರದಲ್ಲಿ ಅಪರಾಧ ಕೃತ್ಯಗಳ ಸ್ವರೂಪ ಬದಲಾಗುತ್ತದೆ. ಆರೋಪಿಗಳು ಪದೇ ಪದೆ ಸ್ಥಳ ಬದಲಿಸುತ್ತಾರೆ. ಜತೆಗೆ, ಜನಸಂಖ್ಯೆಯೂ ಹೆಚ್ಚಿದೆ ಈ ಕಾರಣಕ್ಕೆ ಹೊಸ ಬೀಟ್‌ ಪದ್ಧತಿ ಸಂಪೂರ್ಣ ಯಶಸ್ವಿ ಆಗದೇ ಇರಬಹುದು ಎಂದು ಹೆಸರು ಹೇಳಲು ಬಯಸದ ಹಿರಿಯ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟರು.

ಸುಲಿಗೆ ಅಂಕಿ-ಸಂಖ್ಯೆ
ವರ್ಷ    ಪ್ರಕರಣಗಳು

2016    147
2017    163
2018(ಈವರೆಗೆ)    190+

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.