ಯುವತಿ ಓದಿಗೆ ವನಿತಾವಾಣಿ ಆಸರೆ


Team Udayavani, Dec 17, 2018, 12:16 PM IST

yuvati.jpg

ಬೆಂಗಳೂರು: ಹೆತ್ತ ತಾಯಿ ಕಡೆಯಿಂದಲೇ “ವೇಶ್ಯೆ’ ಆಗುವ ಆತಂಕ ಎದುರಿಸುತ್ತಿದ್ದ ಯುವತಿಯ ಅಳಲು ಕೇಳಿ ಆಕೆ ಪುನಃ ವಿದ್ಯಾಭ್ಯಾಸ ಮುಂದುವರಿಸಲು ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿರುವ ಪರಿಹಾರ ಕೇಂದ್ರ ನೆರವಾದ ಪ್ರಕರಣವಿದು.

“ತಂದೆಯಿಲ್ಲದೆ ಬದುಕುತ್ತಿರುವ ನನಗೆ ತಾಯಿ ವೇಶ್ಯೆಯಾಗಲು ಬಲವಂತ ಮಾಡುತ್ತಿದ್ದಾರೆ. ನನಗೆ, ಉನ್ನತ ವಿದ್ಯಾಭ್ಯಾಸ ಮುಗಿಸಿ ಗೌರವಯುತ ಜೀವನ ಸಾಗಿಸುವ ಆಸೆಯಿದೆ. ದಯಮಾಡಿ ಸಂಕಷ್ಟದಿಂದ ಪಾರು ಮಾಡಿ’ ಎಂಬ ಕೋರಿಕೆ ದೂರನ್ನು ನವೆಂಬರ್‌ನಲ್ಲಿ ಸ್ವೀಕರಿಸಿದ್ದ ಪರಿಹಾರ ಕೇಂದ್ರದ ಸಿಬ್ಬಂದಿಯೇ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಬಳಿಕ ಯುವತಿಗೆ ವನಿತಾ ಸಹಾಯವಾಣಿ ಆಪ್ತ ಸಮಾಲೋಚಕರ ಬಳಿ ಆಪ್ತ ಸಮಾಲೋಚನೆ ನಡೆಸಿದಾಗ, ಆಕೆ ನಗರದ ಕಾಲೇಜೊಂದರಲ್ಲಿ ದ್ವೀತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದುದು ಗೊತ್ತಾಗಿದೆ. ಆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ತಾನು ಇನ್ನೆಂದೂ ತಾಯಿಯ ಮನೆಗೆ ಹೋಗುವುದಿಲ್ಲ. ತಾಯಿಯೊಂದಿಗೆ ವಾಸಿಸಲು ಇಷ್ಟವಿಲ್ಲ.

ಪ್ರತ್ಯೇಕವಾಗಿ ವಾಸಿಸುತ್ತೇನೆ ಎಂಬ ಒಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ. ಈ ಒಪ್ಪಿಗೆ ಪತ್ರ ಆಧರಿಸಿ ಆಕೆಗೆ ಕಾನೂನಿನಡಿ ಅವಕಾಶ ಇರುವಂತೆ ಪುನರ್ವಸತಿ ಕೇಂದ್ರವೊಂದರಲ್ಲಿ ಆಶ್ರಯ ಕಲ್ಪಿಸಲಾಗಿದೆ. ಆಕೆ, ಓದುತ್ತಿದ್ದ ಕಾಲೇಜಿನಲ್ಲಿಯೇ ವಿದ್ಯಾಭ್ಯಾಸ ಮುಂದುವರಿಸಿದ್ದಾರೆ ಎಂದು ಕೇಂದ್ರದ ಆಪ್ತ ಸಮಲೋಚಕರು ಹೇಳಿದರು.

ಘಟನೆ ಬಳಿಕ ಆಕೆಯ ತಾಯಿಗೂ ಎಚ್ಚರಿಕೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಮಗಳಿಗೆ ತೊಂದರೆ ಕೊಡಬಾರದು. ಆಕೆಯ ಬಳಿ, ಕಾಲೇಜಿನ ಬಳಿಯೂ ತೆರಳುವಂತಿಲ್ಲ. ಒಂದೊಮ್ಮೆ ಹಾಗೆ ಮಾಡಿದರೆ ಕಾನೂನು ಕ್ರಮಕ್ಕೆ ಶಿಫಾರಸು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.

ಇದಾದ ಬಳಿಕ ಆಕೆ ಮತ್ತೆಂದೂ ಬಂದಿಲ್ಲ. ಇತ್ತ ಪುನರ್ವಸತಿ ಕೇಂದ್ರದಲ್ಲಿರುವ ವಿದ್ಯಾರ್ಥಿನಿ ಕಾಲೇಜಿಗೆ ಹೋಗಿ ಬರುತ್ತಿದ್ದಾರೆ. ಆಕೆ, ಮನೆಯಲ್ಲಿರುವುದಕ್ಕಿಂತ ಹೆಚ್ಚು ಸಂತೋಷದಿಂದ ಇರುವುದಾಗಿ ತಿಳಿಸಿದ್ದಾರೆ. ಆಕೆಗೆ, ಉನ್ನತ ವ್ಯಾಸಂಗ ಮಾಡುವ ಕನಸಿದೆ. ಅದನ್ನು ಮುಂದುವರಿಸಿ ಆಕೆಯ ಭವಿಷ್ಯ ಚೆನ್ನಾಗಿದ್ದರೆ ಅಷ್ಟೇ ಸಾಕು ಎಂದು ವನಿತಾವಾಣಿ ಸಿಬ್ಬಂದಿ ಆಶಿಸಿದರು.

ಪಾರಾಗಿದ್ದು ಹೇಗೆ?: ಬೆಂಗಳೂರು ದಕ್ಷಿಣ ಭಾಗದಲ್ಲಿ ತಾಯಿ ಜತೆ ವಾಸಿಸುತ್ತಿದ್ದು ತಂದೆ ಇರಲಿಲ್ಲ. ತಾಯಿ ವೇಶ್ಯೆ ವೃತ್ತಿ ಮಾಡುತ್ತಿದ್ದರು. ಈ ವಿಚಾರ ಮಗಳ ಗಮನಕ್ಕೆ ಕೆಲ ವರ್ಷಗಳ ಹಿಂದೆ ಬಂದಿತ್ತು. ಆದರೆ, ಪ್ರತಿರೋಧಿಸುವ ಸ್ಥಿತಿಯಲ್ಲಿ ಆಕೆಯಿರಲಿಲ್ಲ. ಕಳೆದ ಏಳೆಂಟು ತಿಂಗಳಿನಿಂದ ಆಕೆ, ವೇಶ್ಯಾ ವೃತ್ತಿ ಮಾಡುವಂತೆ ಮನವೊಲಿಸುತ್ತಿದ್ದಳು ನಾನು ಒಪ್ಪಿರಲಿಲ್ಲ.

ಆದರೆ, ತಿಂಗಳ ಹಿಂದೆ  ತಾಯಿ ಕೈಗೊಂಡ ನಿರ್ಧಾರ ನನ್ನ ಪಾಲಿಗೆ ಅತ್ಯಂತ ಕಠೊರವಾಗಿತ್ತು. ಸುಮಾರು 45 ವರ್ಷ ವಯೋಮಾನದ ಉದ್ಯಮಿಯೊಬ್ಬರನ್ನು ತೋರಿಸಿ, ಇವರೊಂದಿಗೆ ನೀನು ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಮುಂದೆ ಅವರು ನಿನ್ನನ್ನು ಮದುವೆಯಾಗುತ್ತಾರೆ. ನನಗೆ ಲಕ್ಷಾಂತರ ರೂ. ಹಣ ಸಿಗುತ್ತದೆ ಎಂದು ಹೇಳಿಬಿಟ್ಟರು. ಆ ದಿನ ನಾನು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಮನೆಯಲ್ಲಿದ್ದರೆ ಬದುಕು ಬೀದಿಪಾಲಾಗುತ್ತದೆ ಎಂದು ಭಯಪಟ್ಟು ಓಡಿಬಂದ ವಿದ್ಯಾರ್ಥಿನಿ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿರುವ ಸಹಾಯವಾಣಿ ಕೇಂದ್ರಕ್ಕೆೆ ರಕ್ಷಣೆ ನೀಡುವಂತೆ ಕೋರಿದ್ದರು. ಬಳಿಕ, ಪ್ರಕರಣ ಮುಖ್ಯ ಕಚೇರಿಗೆ ವರ್ಗಾವಣೆಯಾಯಿತು. ಬಳಿಕ ಪ್ರಕರಣವನ್ನು ಇತ್ಯರ್ಥಗೊಳಿಸಿ, ಯುವತಿಯ ಇಚ್ಛೆಯಂತೆ ಆಕೆಯ ವಿದ್ಯಾಭ್ಯಾಸಕ್ಕೆ ನೆರವಾಗುವ ವ್ಯವಸ್ಥೆ ಮಾಡಲಾಯಿತು ಎಂದು ಆಪ್ತ ಸಮಾಲೋಚಕರೊಬ್ಬರು ವಿವರಿಸಿದರು.

ಪರಿಹಾರ ಕೇಂದ್ರಕ್ಕೆ ಬರುವ ದೂರುಗಳಿಗೆ ಸಂಬಂಧಪಟ್ಟಂತೆ ಆಪ್ತ ಸಮಾಲೋಚಕರು ಕೌನ್ಸಿಲಿಂಗ್‌ ನಡೆಸಿ ಪರಿಹರಿಸುತ್ತಾರೆ. ಆದರೆ, ಈ ದೂರು ಮನಸ್ಸನ್ನೇ ಕಲಕಿತು. ಈ ರೀತಿಯ ಸಂಕಷ್ಟಗಳು ಹೆಣ್ಣುಮಕ್ಕಳಿಗೆ ಬರಬಾರದು.ಯುವತಿಗೆ ಕಾನೂನಿನಡಿ ನೀಡಬೇಕಾದ ನೆರವು ಕಲ್ಪಿಸಲಾಗಿದೆ. ಆಕೆ, ಪುನಃ ವಿದ್ಯಾಭ್ಯಾಸ ಮುಂದುವರಿಸಿರುವುದು ಸಮಾಧಾನ ತಂದಿದೆ.
-ರಾಣಿ ಶೆಟ್ಟಿ, ಪರಿಹಾರ ಕೇಂದ್ರದ ಮುಖ್ಯಸ್ಥೆ

* ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.