ಭೀಕರ ರಸ್ತೆ ಅಪಘಾತ ವಿದ್ಯಾರ್ಥಿಗಳಿಬ್ಬರ ಸಾವು


Team Udayavani, Dec 19, 2018, 12:25 PM IST

bikara.jpg

ಬೆಂಗಳೂರು: ಕಾಲೇಜಿಗೆ ಹೋಗುವ ವೇಳೆ ಫ‌ುಟ್‌ಪಾತ್‌ ಮೇಲೆ ನಡೆದು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ಬಿಎಂಟಿಸಿ ಬಸ್‌ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಗೋಪಾಲನ್‌ ಮಾಲ್‌ ಸಮೀಪದ ಪೆಟ್ರೋಲ್‌ ಬಂಕ್‌ ಮುಂಭಾಗ ಮಂಗಳವಾರ ಬೆಳಗ್ಗೆ ನಡೆದಿದೆ.

ಆರ್‌.ಆರ್‌.ನಗರದಲ್ಲಿರುವ ಬಂಗಾರಪ್ಪನ ಗುಡ್ಡ ನಿವಾಸಿಗಳಾದ ಯದು ಕುಮಾರ್‌(18) ಮತ್ತು ಚಂದ್ರಕಾಂತ್‌(18) ಮೃತರು. ಘಟನೆಯಲ್ಲಿ ಗಾಯಗೊಂಡಿರುವ ಮತ್ತೂಬ್ಬ ವಿದ್ಯಾರ್ಥಿ ಬಾಪೂಜಿನಗರ ನಿವಾಸಿ ರಾಜೇಶ್‌ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಇಬ್ಬರು ವಿದ್ಯಾರ್ಥಿಗಳ ಪೈಕಿ ಯದುಕುಮಾರ್‌ ಬೆಳಗ್ಗೆ ಪೇಪರ್‌ ಹಾಕಿ ಬಳಿಕ ಕಾಲೇಜಿಗೆ ಹೋಗುತ್ತಿದ್ದ. ಮಂಗಳವಾರ ಕೂಡ ಯದುಕುಮಾರ್‌ ಬೆಳಗ್ಗೆ ಪೇಪರ್‌ ಹಾಕಿ ಕಾಲೇಜಿ ಬರುತ್ತಿದ್ದ. ಚಂದ್ರಕಾಂತ್‌ ಕೂಡ ಡ್ಯಾನ್ಸ್‌ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

ಮೈಸೂರು ರಸ್ತೆಯ ಕಸ್ತೂರಿಬಾ ನಗರ ಬಿಬಿಎಂಪಿ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದ ಚಂದ್ರಕಾಂತ್‌ ಮತ್ತು ದ್ವೀತಿಯ ಪಿಯು ವ್ಯಾಸಂಗ ಮಾಡುತ್ತಿದ್ದ ಯದು ಕುಮಾರ್‌ ಮತ್ತು ಸ್ನೇಹಿತ ರಾಜಶೇಖರ್‌ ಕಾಲೇಜಿಗೆ ಹೋಗಲು ಬೆಳಗ್ಗೆ 8.15ರ ಸುಮಾರಿಗೆ ಮೈಸೂರು ರಸ್ತೆಯ ಗೋಪಾಲನ್‌ ಮಾಲ್‌ ಸಮೀಪ ಬಸ್‌ ಇಳಿದು, ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ದೊಡ್ಡಬಸ್ತಿಯಿಂದ ಕೆ.ಆರ್‌.ಮಾರುಕಟ್ಟೆ ಕಡೆಗೆ ವೇಗವಾಗಿ ಹೋಗುತ್ತಿದ್ದ ಬಿಎಂಟಿಸಿ ಬಸ್‌ ಏಕಾಏಕಿ ಎಡಭಾಗಕ್ಕೆ ತಿರುಗಿದ ಪರಿಣಾಮ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಚಾಲಕ ನಿರ್ಲಕ್ಷ್ಯದಿಂದ ಪಾದಚಾರಿ ಮಾರ್ಗದಲ್ಲಿ ಹಾಕಿದ್ದ ಜಲ್ಲಿಕಲ್ಲು ರಾಶಿಗೆ ಬಸ್ಸನ್ನು ಗುದ್ದಿಸಿದ್ದಾªನೆ. ಬಸ್‌ ಜಖಂಗೊಂಡಿದೆ. 

ಒಂದೂವರೆ ಗಂಟೆ ಸಂಚಾರ ದಟ್ಟಣೆ: ರಸ್ತೆ ಅಪಘಾತದಿಂದ ವಾಹನ ಸವಾರರು ಸುಮಾರು ಒಂದೂವರೆ ಗಂಟೆಗಳ ಕಾಲ ರಸ್ತೆಯಲ್ಲೇ ಕಾಲ ಕಳೆಯ ಬೇಕಾಯಿತು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಬ್ಯಾಟರಾಯಪುರ ಸಂಚಾರ ಪೊಲೀಸರು ಕ್ರೇನ್‌ ಮೂಲಕ ಬಸ್‌ ಅನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ವಿಕ್ಟೋರಿಯಾ ಆಸ್ಪತ್ರೆಯ ಶವಗಾರದ ಬಳಿ ಮೃತರ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಒಬ್ಬನೇ ಯಪ್ಪಾ: “ನನ್ನ ಮಗ ಹೊಟ್ಟೆಯಲ್ಲಿ ಇದ್ದಾಗಲೇ ಗಂಡ ಬಿಟ್ಟು ಹೋಗಿಬಿಟ್ಟ (18 ವರ್ಷ ಕಳೆದಿದೆ). ಬಳಿಕ ನಾನು ತವರು ಮನೆಗೆ ಬಂದೆ. ನನ್ನ ಕೂಸನ್ನು ನಾನೇ ಸಾಕಿದ್ದೇನೆ. ಹಾಸ್ಟೆಲ್‌ನಲ್ಲಿ ಇಟ್ಟು ಓದಿಸಿದ್ದೇನೊ ಯಪ್ಪಾ. 10 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಬಂಗಾರಪ್ಪನ ಗುಡ್ಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇನೆ. ಹೋಟೆಲ್‌ವೊಂದರಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ.

ನನ್ನ ಕಷ್ಟ ನೋಡಲಾಗದೆ, ನನ್ನ ಮಗ ಕಾಲೇಜು ಮುಗಿಸಿಕೊಂಡು ಬಂದು ಡ್ಯಾನ್ಸ್‌ ಶಾಲೆಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ. ಆತನಿಗೆ ಮೂರು ಸಾವಿರ ರೂ. ಸಂಬಳ ಕೊಡುತ್ತಿದ್ದರು. ಇದಕ್ಕೆಲ್ಲ ಆಸೆ ಬಿಳಬೇಡ ಮಗನೇ, ಚೆನ್ನಾಗಿ ಓದಬೇಕು ಎಂದು ಬುದ್ಧಿ ಹೇಳಿದ್ದೆ. ಹೆದರಬೇಡ ಅವ್ವ, ನಿನ್ನ ಆಸೆಯಂತೆ ನಾನು ಚೆನ್ನಾಗಿ ಓದುತ್ತೇನೆ ಎಂದು ಹೇಳಿದ್ದ. ಆದರೆ, ಇವತ್ತು ಏನು ಹೇಳದೆ ಮೌನವಾಗಿ ಮಲಗಿದ್ದಾನೆ ಎಂದು ಚಂದ್ರಕಾಂತ್‌ ತಾಯಿ ಲಕ್ಷ್ಮಿ ಗೋಳಾಡಿದರು.

ಕಳೆದ ಪರೀಕ್ಷೆಯಲ್ಲಿ ನನ್ನ ಸಹೋದರ 515 ಅಂಕಗಳಿಸಿದ್ದ. ಮುಂದೆಯೂ ಇದೇ ರೀತಿಯ ಅಂಕಗಳಿಸಿ, ಕಾಲೇಜಿಗೆ ಫ‌ಸ್ಟ್‌ ಬರುತ್ತೇನೆ ಎಂದಿದ್ದ ಎಂದು ಹೇಳುವಾಗ ಚಂದ್ರಕಾಂತ್‌ ಸಹೋದರಿಯ ಕಣ್ಣುಗಳು ಒದ್ದೆಯಾಗಿದ್ದವು.

ವಿದ್ಯಾರ್ಥಿಗಳ ಪ್ರತಿಭಟನೆ: ವಿಕ್ಟೋರಿಯಾ ಆಸ್ಪತ್ರೆಯ ಹಿಂಭಾಗದ ಗೇಟ್‌ ಬಳಿ ನೂರಾರು ವಿದ್ಯಾರ್ಥಿಗಳು ಕೆಲ ಕಾಲ ಪ್ರತಿಭಟನೆ ನಡೆಸಿದರು. ನಮ್ಮ ಸ್ನೇಹಿತರನ್ನು ಬಲಿ ಪಡೆದ ಬಿಎಂಟಿಸಿ ಚಾಲಕನನ್ನು ಬಂಧಿಸಿ ಜೈಲು ಶಿಕ್ಷೆ ಕೊಡಿಸಬೇಕು. ಮೈಸೂರು ರಸ್ತೆಯ ಕ್ರಿಶ್ಚಿಯನ್‌ ಸ್ಮಶಾನದ ಬಳಿ ರಸ್ತೆ ದಾಟಲು ಯಾವುದೇ ಸ್ಕೈವಾಕ್‌ಗಳಿಲ್ಲ. ರಸ್ತೆ ವಿಭಜಕಗಳು ಸರಿ ಇಲ್ಲ. ಪಾದಾಚಾರಿಗಳು ಓಡಾಡುವ ಫ‌ುಟ್‌ಪಾತ್‌ ಮೇಲೆ ಜಲ್ಲಿಕಲ್ಲುಗಳನ್ನು ಹಾಕಿದ್ದಾರೆ. ಕೂಡಲೇ ಸರಿಯಾದ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜಲ್ಲಿಕಲ್ಲು ಇಲ್ಲದಿದ್ದರೆ ಏನಾಗುತ್ತಿತ್ತು?: ಬೆಳಗ್ಗೆ 8 ಗಂಟೆ ಸುಮಾರಿಗೆ ಗೋಪಾಲನ್‌ ಮಾಲ್‌ ಸಮೀಪದ ಪೆಟ್ರೋಲ್‌ ಬಂಕ್‌ ಬಳಿಯ ಫ‌ುಟ್‌ಪಾತ್‌ ಮೇಲೆ ಇಬ್ಬರು ವಿದ್ಯಾರ್ಥಿಗಳು ನಡೆದು ಹೋಗುತ್ತಿದ್ದರು. ಪೆಟ್ರೋಲ್‌ ಬಂಕ್‌ ಪಕ್ಕದಲ್ಲೇ ಖಾಸಗಿ ಕಟ್ಟಡವೊಂದು ನಿರ್ಮಾಣ ಮಾಡುತ್ತಿದ್ದರಿಂದ ಜಲ್ಲಿಕಲ್ಲು ಮತ್ತು ಮರಳನ್ನು ಫ‌ುಟ್‌ಪಾತ್‌ ಮೇಲೆಯೇ ಹಾಕಲಾಗಿತ್ತು.

ಈ ವೇಳೆ ಬಿಎಂಟಿಸಿ ಬಸ್‌ ಬಂದು ಇಬ್ಬರು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ  ಮೃತಪಟ್ಟಿದ್ದಾರೆ.ಒಂದು ವೇಳೆ ಈ ಸ್ಥಳದಲ್ಲಿ ಜಲ್ಲಿಕಲ್ಲು ರಾಶಿ ಇಲ್ಲದಿದ್ದರೆ, ಬಸ್‌ ನೇರವಾಗಿ ಕಟ್ಟಡ ನಿರ್ಮಾಣಕ್ಕೆಂದು ಅಗೆದಿದ್ದ ಹತ್ತಾರು ಅಡಿ ಗುಂಡಿಗೆ ಹೋಗಿ ಬೀಳುತ್ತಿತ್ತು  ಎಂದು ಸಂಚಾರ ಪೊಲೀಸರು ಹೇಳಿದರು. 

ಬ್ರೇಕ್‌ ಫೆಲ್ಯೂರ್‌ ಕಾರಣ?: ಪ್ರಾಥಮಿಕ ಮಾಹಿತಿ ಪ್ರಕಾರ ಬ್ರೇಕ್‌ ಫೆಲ್ಯೂರ್‌ನಿಂದ ದುರ್ಘ‌ಟನೆ ನಡೆದಿದೆ ಎನ್ನಲಾಗಿದೆ. ನಾಯಂಡಹಳ್ಳಿ ಬಳಿಯೇ ಬಸ್‌ನ ಕ್ಲಚ್‌ನಲ್ಲಿ ಸದ್ದು ಬರುತ್ತಿದೆ ಎಂದು ಚಾಲಕ ಲೋಕೇಶ್‌ ಬಸ್‌ ನಿಲ್ಲಿಸಿದ್ದರು. ಆ ಬಳಿಕ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಅವರು, ಪ್ರಯಾಣಿಕರನ್ನು ಮಾರುಕಟ್ಟೆಗೆ ಬಿಟ್ಟು ಖಾಲಿ ಬರುವಂತೆ ಸೂಚಿಸಿದ್ದರು ಎಂದು ಚಾಲಕ ಲೋಕೇಶ್‌ ಹೇಳಿರುವುದಾಗಿ ಸಂಚಾರ ಪೊಲೀಸರು ತಿಳಿಸಿದರು.

ಘಟನೆ ನಡೆಯುತ್ತಿದ್ದಂತೆ ಚಾಲಕ ಲೋಕೇಶ್‌, ಗಾಬರಿಗೊಂಡು ಹೃದಯಘಾತಕ್ಕೊಳಗಾದವರಂತೆ ನಟಿಸಿದರು. ಬಳಿಕ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬಿಜಿಎಸ್‌ಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದರು.

ತಲಾ 10 ಲಕ್ಷ ರೂ. ಪರಿಹಾರ: ಬೆಂಗಳೂರು: ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದು ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಬಿಬಿಎಂಪಿಯಿಂದ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ತಿಳಿಸಿದರು. ಮಂಗಳವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದರು.

ಬಿಎಂಟಿಸಿ ಬಸ್‌ ಹರಿದು ಮೃತಪಟ್ಟಿರುವ ಚಂದ್ರಕಾಂತ್‌ ಹಾಗೂ ಯದುಕುಮಾರ್‌ ಎಂಬ ವಿದ್ಯಾರ್ಥಿಗಳು ಬಿಬಿಎಂಪಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮೃತರ ಕುಟುಂಬಕ್ಕೆ ಪಾಲಿಕೆಯಿಂದ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಇನ್ನು ಈ ಅಪಘಾತಕ್ಕೆ ಕಾರಣ ಚಾಲಕನ ನಿರ್ಲಕ್ಷ್ಯವೋ ಅಥವಾ ಬಸ್‌ ಬ್ರೇಕ್‌ ವೈಪಲ್ಯದಿಂದಾಗಿದೆಯೇ ಎಂಬುರ ಬಗ್ಗೆ ತನಿಖೆ ನಡೆಸಲು ಬಿಎಂಟಿಸಿ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ ಎಂದರು. 

ದುರ್ಘ‌ಟನೆಗೆ ಬ್ರೇಕ್‌ ಫೆಲ್ಯೂರ್‌ ಎಂದು ಹೇಳಲಾಗಿದೆ. ಆದರೆ, ಸಮಗ್ರ ತನಿಖೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ.  ಎರಡು ಕುಟುಂಬಗಳಿಗೆ ಬಿಬಿಎಂಪಿಯಿಂದ ಆರ್ಥಿಕ ನೆರವು ನೀಡಲಾಗುವುದು.  ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ರಸ್ತೆ ದಾಟಲು ಸ್ಕೈವಾಕ್‌ ಅಗತ್ಯವಿದೆ ಎಂದು ಕೇಳಿದ್ದಾರೆ. ಆದರೆ, 100 ಮೀಟರ್‌ ದೂರದಲ್ಲೇ ಸ್ಕೈವಾಕ್‌ ಇರುವುದರಿಂದ ಮತ್ತೂಂದು ಸ್ಕೈವಾಕ್‌ ಕಷ್ಟ.
-ಗಂಗಾಬಿಕೆ, ಬಿಬಿಎಂಪಿ ಮೇಯರ್‌ 

ಒಳ್ಳೆಯ ವಿದ್ಯಾರ್ಥಿಗಳು
ಯದುಕುಮಾರ್‌ ಮತ್ತು ಚಂದ್ರಕಾಂತ್‌ ಉತ್ತಮ ವಿದ್ಯಾರ್ಥಿಗಳು. ವಿದ್ಯಾಭ್ಯಾಸದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಯದುಕುಮಾರ್‌ ಮಾರ್ಚ್‌ನಲ್ಲಿ ನಡೆಯುವ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉನ್ನತ ದರ್ಜೆಯಲ್ಲಿ ಉತ್ತೀರ್ಣನಾಗುತ್ತಿದ್ದ.
-ಜಯರಾಮ್‌, ಬಿಬಿಎಂಪಿ ಕಾಲೇಜಿನ ಪ್ರಾಂಶುಪಾಲರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.