ಮೈಕ್ರೋಸಾಫ್ಟ್ಗೆ ಮಾಹಿತಿ ನೀಡದ ಪಾಲಿಕ


Team Udayavani, Dec 21, 2018, 12:16 PM IST

blore-7.jpg

ಬೆಂಗಳೂರು: ಮುಖ್ಯಮಂತ್ರಿಗಳ ಕನಸಿನ ಯೋಜನೆ “ಬಿಬಿಎಂಪಿ ರೋಶಿನಿ’ ಅನುಷ್ಠಾನಗೊಳಿಸಲು ಮೈಕ್ರೋಸಾಫ್ಟ್ ಸಂಸ್ಥೆಗೆ ಬಿಬಿಎಂಪಿ ಶಾಲಾ-ಕಾಲೇಜು ಗಳ ಮಾಹಿತಿ ನೀಡದೆ ಅಧಿಕಾರಿಗಳು ಸತಾಯಿ ಸುತ್ತಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪಾಲಿಕೆಯ ಶಾಲಾ-ಕಾಲೇಜುಗಳನ್ನು 500 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್‌ಗೊಳಿಸಲು ಮೈಕ್ರೋಸಾಫ್ಟ್ ಹಾಗೂ ಟೆಕ್‌ ಅವಾಂತ್‌ ಗಾರ್ಡ್‌ ಸಂಸ್ಥೆಗಳು ಮುಂದಾಗಿವೆ. ಆ ಹಿನ್ನೆಲೆಯಲ್ಲಿ ಶಾಲಾ ಕಟ್ಟಡಗಳು ಹಾಗೂ ಮೈದಾನಗಳ ಸರ್ವೆ ಸಂಖ್ಯೆ ಹಾಗೂ ವಿಸ್ತೀ ರ್ಣದ ಮಾಹಿತಿ ಕೋರಿ ಎರಡು ತಿಂಗಳು ಕಳೆದರೂ, ಈವರೆಗೆ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿಲ್ಲ.

ಬಡ ಮಕ್ಕಳಿಗೆ 21ನೇ ಶತಮಾನದ ಶಿಕ್ಷಣ ಕಲಿಕಾ ವಿಧಾನಗಳನ್ನು ಕಲಿಸುವ ರೋಶಿನಿ ಯೋಜನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಅವರು, ಯೋಜನೆ ಅನುಷ್ಠಾನಕ್ಕೆ ಸರ್ಕಾರ ಹಾಗೂ ಪಾಲಿಕೆಯಿಂದ ಅಗತ್ಯ ಸಹಕಾರ ನೀಡುವ ಅಭಯ ಹಸ್ತ ನೀಡಿದ್ದರು. ಆದರೆ, ಪಾಲಿಕೆಯ ಶಾಲಾ-ಕಾಲೇಜು ಕಟ್ಟಡಗಳ ಮಾಹಿತಿ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವ ಪರಿಣಾಮ, ಯೋಜನೆಗೆ ಹಿನ್ನಡೆಯಾದಂತಾಗಿದೆ.
 
ಪಾಲಿಕೆಯ ಶಾಲೆಗಳಿಗೆ ಹೊಸ ರೂಪ ನೀಡುವ ಉತ್ಸಾಹದಲ್ಲಿದ್ದ ಸಂಸ್ಥೆಗಳಿಗೆ ಪಾಲಿಕೆ ಅಧಿಕಾರಿಗಳ ನಡೆ ಬೇಸರವನ್ನುಂಟು ಮಾಡಿದ್ದು, ಪರಿಣಾಮ ಶಾಲಾ- ಕಾಲೇಜುಗಳ ಕಟ್ಟಡ, ಮೈದಾನಗಳ ವಿಸ್ತೀರ್ಣದ ಮಾಹಿತಿ ಕೊಡಿಸುವಂತೆ ಮೇಯರ್‌ ಹಾಗೂ ಬಿಬಿಎಂಪಿ ಆಯುಕ್ತರಿಗೂ ಪತ್ರ ಬರೆದು ಒಂದೂವರೆ ತಿಂಗಳು ಕಳೆದರೂ ಮಾಹಿತಿ ಮಾತ್ರ ಲಭ್ಯವಾಗಿಲ್ಲ. 

ಮಾಹಿತಿಯಿಲ್ಲದೆ ಯೋಜನೆ ಅನುಷ್ಠಾನವಿಲ್ಲ!: ರೋಶಿನಿ ಯೋಜನೆಯಡಿಯಲ್ಲಿ ನಿರ್ಮಿಸುವ ಪ್ರತಿಯೊಂದು ಶಾಲಾ-ಕಾಲೇಜು ಕಟ್ಟಡಗಳು ಉತ್ತಮ ಸ್ಥಿತಿಯಲ್ಲಿರಬೇಕೆಂಬ ಉದ್ದೇಶದಿಂದ ಸಂಸ್ಥೆಗಳು ಮಾಹಿತಿ ಕೋರಿವೆ. ಅದರಂತೆ ಪಾಲಿಕೆಯಿಂದ ಟೋಟಲ್‌ ಸ್ಟೇಷನ್‌ ಸರ್ವೆ ಮಾಡಿ ವರದಿಯನ್ನು ಸಂಸ್ಥೆಗೆ ನೀಡಬೇಕು. ವರದಿ ಬಂದ ಬಳಿಕ ಸಂಸ್ಥೆಗಳು ಕಟ್ಟಡ ವಿನ್ಯಾಸವನ್ನು ಅಂತಿಮಗೊಳಿಸಿದ ನಂತರವೇ ಯೋಜನೆ ಅನುಷ್ಠಾನ ಆರಂಭವಾಗುತ್ತದೆ. ಆದರೆ, ಪಾಲಿಕೆಯ ಅಧಿಕಾರಿಗಳು ಟೋಟಲ್‌ ಸ್ಟೇಷನ್‌ ಸರ್ವೆಗೆ ಇನ್ನೂ ಮುಂದಾಗದಿರುವುದು ಅನುಮಾನಗಳಿಗೆ ಕಾರಣವಾಗಿದೆ.

ಹೊಸ ಕಟ್ಟಡ ಭಾಗ್ಯ: ಪಾಲಿಕೆಯ ಎಲ್ಲ ಶಾಲಾ ಕಾಲೇಜು ಗಳು ಒಂದೇ ವಿನ್ಯಾಸವನ್ನು ಹೊಂದಿರಬೇಕೆಂಬ ಉದ್ದೇಶದಿಂದ ಕಟ್ಟಡ ವಿನ್ಯಾಸ ರೂಪಿಸುತ್ತಿದ್ದಾರೆ. ಅದರಂತೆ ಪಾಲಿಕೆಯ ಶಾಲಾ-ಕಾಲೇಜುಗಳನ್ನು ಹಂತ ಹಂತವಾಗಿ ಮರು ನಿರ್ಮಾಣ ಮಾಡುವ ಮೂಲಕ ಹೊಸ ರೂಪ ನೀಡುವುದು ಸಂಸ್ಥೆಯ ಉದ್ದೇಶ ವಾಗಿದೆ. ಆದರೆ, ಕೇವಲ ಗಾಂಧಿನಗರ ಶಾಲೆಯ ಮಾಹಿತಿ ಮಾತ್ರ ಸಂಸ್ಥೆಗಳಿಗೆ ಲಭ್ಯವಾಗಿದೆ. ಆ ಹಿನ್ನೆಲೆಯಲ್ಲಿ ಗಾಂಧಿನಗರ ಶಾಲೆಯನ್ನು ಮಾತ್ರ ಅಭಿವೃದ್ಧಿಪಡಿಸಲು ಸಂಸ್ಥೆ ಸಿದ್ಧತೆ ನಡೆಸಿದೆ.

ಮೈದಾನದಲ್ಲಿ ಅಂಕಣಗಳ ನಿರ್ಮಾಣ: ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ಮಕ್ಕಳಿಗೆ ಶಿಕ್ಷಣ ದೊರೆಯಬೇಕೆಂಬ ಉದ್ದೇಶ ಯೋಜನೆ ಹೊಂದಿದೆ. ಆ ಹಿನ್ನೆಲೆಯಲ್ಲಿ ಪ್ರತಿಯೊಂದು ಶಾಲೆಯ ಮೈದಾನದಲ್ಲಿ ವಿವಿಧ ಕ್ರೀಡೆಗಳಿಗಾಗಿ ಅಂಕಣಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಅದರಂತೆ ಶಾಲೆಗಳ ಮೈದಾನದ ವಿಸ್ತೀರ್ಣಕ್ಕೆ ಅನುಗುಣವಾಗಿ ಯಾವ ಕ್ರೀಡೆಗಳ ಅಂಕಣ ನಿರ್ಮಿಸಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ. ಆದರೆ, ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಯೋಜನೆಗೆ ಹಿನ್ನಡೆ ಯಾದಂತಾಗಿದೆ.

ಚೈನಾ ಜತೆಗೆ ಒಪ್ಪಂದ: ಬಿಬಿಎಂಪಿ ಶಾಲೆಗಳ ಸದೃಢತೆ ಹಾಗೂ ಕಟ್ಟಡ ವಿನ್ಯಾಸಕ್ಕಾಗಿ ಈಗಾಗಲೇ ಮೈಕ್ರೋಸಾಫ್ಟ್ ಎರಡು ಏಜೆನ್ಸಿಗಳನ್ನು ನೇಮಿಸಿಕೊಂಡಿದ್ದು, ಕಟ್ಟಡ ನಿರ್ಮಾಣ ಕುರಿತಂತೆ ಚೈನಾದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದೆ. ಅದರಂತೆ ಏಜೆನ್ಸಿಗಳು ನೀಡುವ ವರದಿಯನ್ನು ಆಧರಿಸಿ ಎಲ್ಲಿ ಹೊಸ ಕಟ್ಟಡ ನಿರ್ಮಿಸಬೇಕು ಹಾಗೂ ಹಳೆಯ ಕಟ್ಟಡಗಳನ್ನು ನವೀಕರಣಗೊಳಿಸಬೇಕು ಎಂಬುದನ್ನು ಸಂಸ್ಥೆಗಳು ನಿರ್ಧರಿಸಲಿವೆ.

ಮೈಕ್ರೋಸಾಫ್ಟ್ ಹಾಗೂ ಟೆಕ್‌ ಅವಾಂತ್‌ ಗಾರ್ಡ್‌ ಸಂಸ್ಥೆಗಳು ಪಾಲಿಕೆಯ ಶಾಲಾ-ಕಾಲೇಜು ಸರ್ವೆ ಸಂಖ್ಯೆ ಹಾಗೂ ವಿಸ್ತೀರ್ಣ ಮಾಹಿತಿ ಕೋರಿದ್ದು, ಈಗಾಗಲೇ ಕಂದಾಯ ವಿಭಾಗದ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿದ್ದರಿಂದ ಸಂಸ್ಥೆಗಳಿಗೆ ನೀಡಲು ಸಾಧ್ಯವಾಗಲಿಲ್ಲ. ಶೀಘ್ರದಲ್ಲಿಯೇ ವರದಿಯನ್ನು ಸಂಸ್ಥೆಗಳಿಗೆ ನೀಡಲಾಗುವುದು.
ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.