ಜೈನ “ಮಹಾಪುರಾಣ’ವೂ ಶ್ರೇಷ್ಠ ಗ್ರಂಥ


Team Udayavani, Dec 23, 2018, 3:15 PM IST

blore-6.jpg

ಬೆಂಗಳೂರು: ವಾಲ್ಮೀಕಿಯ ರಾಮಾಯಣ, ವ್ಯಾಸನ ಮಹಾಭಾರತದಂತೆಯೇ ಆಚಾರ್ಯ ಜಿನಸೇನ ಮತ್ತು ಗುಣಭದ್ರರು ರಚಿಸಿದ “ಮಹಾಪುರಾಣ’ ಕೂಡ ದೇಶದ ಶ್ರೇಷ್ಠ ಗ್ರಂಥವಾಗಿದೆ ಎಂದು ನಾಡೋಜ ಡಾ.ಹಂಪ ನಾಗರಾಜಯ್ಯ ವಿಶ್ಲೇಷಿಸಿದರು.

ನಗರದ ಕರ್ನಾಟಕ ಜೈನ ಭವನದಲ್ಲಿ ಶನಿವಾರ ಕರ್ನಾಟಕ ಜೈನ ಅಸೋಸಿಯೇಷನ್‌ ಹಮ್ಮಿಕೊಂಡಿದ್ದ “ಮಹಾಪುರಾಣ’ ಗ್ರಂಥದ ನಾಲ್ಕನೇ ಆವೃತ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಲ್ಮೀಕಿಯ ರಾಮಾಯಣ ಮತ್ತು ವ್ಯಾಸನ ಮಹಾಭಾರತ ದೇಶದ ಎರಡು ಮಹಾ ಗ್ರಂಥಗಳು. ಇವುಗಳಷ್ಟೇ ಶ್ರೇಷ್ಠ ಗ್ರಂಥ ಮಹಾಪುರಾಣ. ಅದನ್ನು ದೇವರ ಮನೆಯಲ್ಲಿಟ್ಟು ಪೂಜೆ ಮಾಡುವುದಕ್ಕಿಂತ ನಿತ್ಯ ಪಾರಾಯಣ
ಮಾಡುವುದೇ ಆ ಗ್ರಂಥಕ್ಕೆ ನಾವು ಕೊಡುವ ದೊಡ್ಡ ಗೌರವ ಎಂದು ತಿಳಿಸಿದರು.

ಮುಸ್ಲಿಮರಿಗೆ ಕುರಾನ್‌, ಕ್ರಿಶ್ಚಿಯನ್ನರಿಗೆ ಬೈಬಲ್‌ ಇದ್ದಂತೆ ಜೈನರಿಗೆ ತತ್ವರ್ಥಸೂತ್ರ ಮತ್ತು ಮಹಾಪುರಾಣ ಗ್ರಂಥಗಳಿವೆ ಡಾ.ಹಂಪ ನಾಗರಾಜಯ್ಯ, ಮೂಲತಃ ಪ್ರಾಕೃತ ಭಾಷೆಯಲ್ಲಿದ್ದ ಗ್ರಂಥವನ್ನು ಆಚಾರ್ಯ ಜಿನಸೇನ ಮತ್ತು ಗುಣಭದ್ರರು ಸಂಸ್ಕೃತಕ್ಕೆ ತಂದರು. ಆಮೇಲೆ ಪಂಡಿತರತ್ನ ಎ.ಶಾಂತಿರಾಜ ಶಾಸ್ತ್ರೀ ಕನ್ನಡದಲ್ಲಿ ಮರುಸೃಷ್ಟಿ ಮಾಡಿದರು ಎಂದು ಹೇಳಿದರು.

ಪರಿಷತ್ತಿನಿಂದ 10 ಪ್ರತಿ ಖರೀದಿ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್‌ ಮಾತನಾಡಿ, ಕನ್ನಡದ ಬುನಾದಿಯೇ ಜೈನ ಕಾವ್ಯ. ಶತಮಾನದ ಹಿಂದೆಯೇ ಎರ್ತೂರು ಶಾಂತಿರಾಜ ಶಾಸ್ತ್ರೀಗಳು ಹೊರತಂದ ಮಹಾಪುರಾಣ ಕನ್ನಡಿಗರ ಜ್ಞಾನದ ಬೆಳಕಾಗಿ ಬೆಳಗುತ್ತಿದೆ. ಪರಿಷತ್ತಿನ ವತಿಯಿಂದ ಮಹಾಪುರಾಣದ 10 ಪ್ರತಿಗಳನ್ನು ಖರೀದಿಸಲಾಗುವುದು ಎಂದು ಹೇಳಿದರು. ಎನ್‌.ಆರ್‌.ಪುರ ಜೈನ ಮಠದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಈ ಹಿಂದೆ ಅನೇಕರು ಮಹಾಪುರಾಣವನ್ನು ಕನ್ನಡಕ್ಕೆ ತರುವ ಪ್ರಯತ್ನ ಮಾಡಿದ್ದರು. ಆದರೆ, ಅವರಿಗೆಲ್ಲಾ
ಅನೇಕ ಅಡ್ಡಿ-ಆತಂಕಗಳು ಎದುರಾಗಿದ್ದವು.

ಸಮಾಜದಲ್ಲಿ ಒಳ್ಳೆಯವರ ಕಾಲೆಳೆಯುವವರೇ ಹೆಚ್ಚು. ಸಮಾಜದ ಸಾಧಕರು ಮರಣ ಹೊಂದಿದ ನಂತರ ಅವರ ಮೂರ್ತಿಗಳನ್ನು ವೃತ್ತಗಳಲ್ಲಿ ಪ್ರತಿಷ್ಠಾಪಿಸಿ ಪೂಜೆ ಮಾಡುವುದಲ್ಲ; ಅವರ ಜೀವಿತಾವಧಿ ಯಲ್ಲೇ ಗುರುತಿಸಿ, ಸಾಧನೆಗೆ ಪ್ರೋತ್ಸಾಹ ನೀಡಬೇಕು ಎಂದು ಸೂಚ್ಯವಾಗಿ
ಹೇಳಿದರು.

ಹೊಂಬುಜ ಜೈನಮಠದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ, ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಮಾತನಾಡಿದರು. ಪಂಡಿತರತ್ನ ಎ. ಶಾಂತಿರಾಜಶಾಸ್ತ್ರೀ ಟ್ರಸ್ಟ್‌ ಧರ್ಮದರ್ಶಿ ಎಸ್‌. ಜಿತೇಂದ್ರ ಕುಮಾರ್‌, ಎಂ.ಜೆ.ಇಂದ್ರಕುಮಾರ್‌, ಎ.ಸಿ.ವಿದ್ಯಾಧರ್‌ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.