ಕ್ಷುಲ್ಲಕ ವಿಚಾರಕ್ಕೆ ಕೊಲೆ: ನಾಲ್ವರ ಬಂಧನ
Team Udayavani, Dec 28, 2018, 11:34 AM IST
ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವಿನ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಡಿ.ಜಿ.ಹಳ್ಳಿ ಠಾಣೆ ವ್ಯಾಪ್ತಿಯ ದೊಡ್ಡಣ್ಣ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.
ದೊಡ್ಡಣ್ಣನಗರ ನಿವಾಸಿ ಜಗದೀಶ್ ಕುಮಾರ್ (28) ಕೊಲೆಯಾದವನು. ಕೊಲೆ ಪ್ರಕರಣ ಸಂಬಂಧ ಕೂಲಿ ಕಾರ್ಮಿಕ ಅರುಣ್ (21) ಹಾಗೂ ಈತನ ಸ್ನೇಹಿತರಾದ ಶರತ್ (22), ಜಾನ್ಪೀಟರ್ (22) ಮತ್ತು ಅಪ್ಪು (22) ಎಂಬುವವರನ್ನು ಬಂಧಿಸಲಾಗಿದೆ.
ಟೈಲ್ಸ್ ಹಾಗೂ ಪೇಟಿಂಗ್ ಕೆಲಸ ಮಾಡುವ ಜಗದೀಶ್ ಕುಮಾರ್, ಡಿ.25ರಂದು ಕಂಠಪೂರ್ತಿ ಮದ್ಯ ಸೇವಿಸಿದ್ದಾನೆ. ಬಳಿಕ ದೊಡ್ಡಣ್ಣನಗರದ ಚರ್ಚ್ ಮುಂಭಾಗ ಹೋಗುವಾಗ ಎದುರಿಗೆ ಬಂದ ಅರುಣ್ ಜತೆ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಹಲ್ಲೆ ನಡೆಸಿದ್ದಾನೆ.
ಇದರಿಂದ ಆಕ್ರೋಶಗೊಂಡ ಅರುಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತನ್ನ ಸ್ನೇಹಿತರಾದ ಶರತ್, ಜಾನ್ಪೀಟರ್ ಮತ್ತು ಅಪ್ಪುನನ್ನು ಕರೆ ತಂದಿದ್ದಾನೆ. ನಂತರ ನಾಲ್ವರೂ ಜಗದೀಶ್ ಜತೆ ವಾಗ್ವಾದ ನಡೆಸಿದ್ದಾರೆ. ಇದು ವಿಕೋಪಕ್ಕೆ ಹೋಗಿದ್ದು, ಆರೋಪಿ ಅರುಣ್, ಅಲ್ಲೇ ಇದ್ದ ಕಬ್ಬಿಣ ಪೈಪ್ನಿಂದ ಜಗದೀಶ್ ಕುಮಾರ್ ತಲೆಗೆ ಹೊಡೆದಿದ್ದಾನೆ.
ಪರಿಣಾಮ ತೀವ್ರ ರಕ್ತಸ್ರಾವದಿಂದ ಗಾಯಗೊಂಡಿದ್ದ ಜಗದೀಶ್ನನ್ನು ಸ್ಥಳೀಯರು ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜಗದೀಶ್ ಬುಧವಾರ ರಾತ್ರಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್