ಚಿನ್ನಾಭರಣ ಕದ್ದ ಮನೆ ಕೆಲಸದಾಕೆ ಬಂಧನ


Team Udayavani, Jan 11, 2019, 6:40 AM IST

chinnabgharana.jpg

ಬೆಂಗಳೂರು: ಮನೆ ಮಾಲೀಕರ ನಂಬಿಕೆ ಗಳಿಸಿ ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದಲ್ಲದೆ, ಅವುಗಳನ್ನು ಅಡಮಾನ ಇಟ್ಟು ಮಕ್ಕಳ ಶಾಲಾ ಶುಲ್ಕ ಪಾವತಿಸಿ, ಪ್ರವಾಸಿ ತಾಣಗಳನ್ನು ಸುತ್ತಿದ ಮನೆಕೆಲಸದಾಕೆ, ಜೀವನ್‌ ಭೀಮಾನಗರ ಪೊಲೀಸರ ಬಲೆಗೆ ಬಿದಿದ್ದಾಳೆ.

ಬೈಯಪ್ಪನಹಳ್ಳಿ ನಿವಾಸಿ ರಾಜೇಶ್ವರಿ (37) (ಹೆಸರು ಬದಲಾಯಿಸಲಾಗಿದೆ) ಬಂಧಿತೆ. ಈಕೆಯಿಂದ 300 ಗ್ರಾಂ. ತೂಕದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಆರೋಪಿಯು ನ್ಯೂ ತಿಪ್ಪಸಂದ್ರದ ನಿವಾಸಿ ಜಾನಕಿ ಎಂಬುವವರ ಮನೆಯಲ್ಲಿ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಳು.

ನ್ಯೂ ತಿಪ್ಪಸಂದ್ರದ ನಿವಾಸಿ ಜಾನಕಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಐದು ವರ್ಷಗಳಿಂದ ರಾಜೇಶ್ವರಿ, ಜಾನಕಿ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಈ ಮಧ್ಯೆ 2018 ಜೂನ್‌ 3ರಂದು ಬ್ಯಾಂಕಿನ ಲಾಕರ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಜಾನಕಿ ಅವರು ಮನೆಗೆ ತಂದು ತಮ್ಮ ಕೊಠಡಿಯ ಬೀರುವಿನಲ್ಲಿ ಇರಿಸಿದ್ದರು.

ಚಿಕಿತ್ಸೆಗಾಗಿ ಆಗಾಗ ಆಸ್ಪತ್ರೆಗೆ ಹೋಗುತ್ತಿದ್ದರಿಂದ ಮನೆಯ ಬಾಗಿಲಿಗೆ ಬೀಗ ಹಾಕಿ ಕೀಲಿ ಕೈ ಅನ್ನು ಪಕ್ಕದ ಬಾಡಿಗೆದಾರರ ಕೈಲಿ ಕೊಟ್ಟು ಹೋಗುತ್ತಿದ್ದರು. ಮನೆ ಕೆಲಸಕ್ಕೆಂದು ಬರುತ್ತಿದ್ದ ರಾಜೇಶ್ವರಿ ಕೀಲಿ ಪಡೆದು ಬೀಗ ತೆಗೆದು ಮನೆಯನ್ನು ಸ್ವತ್ಛ ಮಾಡಿ ಹೋಗುತ್ತಿದ್ದಳು.

ಆರೋಗ್ಯ ಸರಿ ಇಲ್ಲದ ಕಾರಣ ಜಾನಕಿ ಅವರು ಮನೆಯಲ್ಲಿದ್ದ ಚಿನ್ನಾಭರಣಗಳ ಬಗ್ಗೆ ಹೆಚ್ಚು ಗಮನ ಹರಿಸಿರಿಲಿಲ್ಲ. ಈ ಮಧ್ಯೆ ಜ.1ರಂದು ಮಧ್ಯಾಹ್ನ ಬೀರು ಪರಿಶೀಲಿಸಿದಾಗ ಚಿನ್ನಾಭರಣ ಕಳುವಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಅನುಮಾನಗೊಂಡ ಜಾನಕಿ ಅವರು,

ರಾಜೇಶ್ವರಿ ಮತ್ತು ಇತರೆ ಮನೆ ಕೆಲಸದವರನ್ನು ವಿಚಾರಿಸಿದರೂ ಪ್ರಯೋಜನವಾಗಿಲ್ಲ. ಬಳಿಕ ಕೆಲಸಗಾರರ ಮೇಲೆ ಅನುಮಾನಗೊಂಡು ಜ.2ರಂದು ಜೀವನ್‌ ಭೀಮಾನಗರ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ತನಿಖೆ ಆರಂಭಿಸಿ,  ರಾಜೇಶ್ವರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

ಕದ್ದ ಹಣದಲ್ಲಿ ಪ್ರವಾಸ: “ಕಳವು ಮಾಡಿದ ಚಿನ್ನಾಭರಣಗಳನ್ನು ಫೈನಾನ್ಸ್‌ ಒಂದರಲ್ಲಿ ಅಡಮಾನ ಇಟ್ಟಿದ್ದು, ಮೂವರು ಮಕ್ಕಳ ಶಾಲಾ ಶುಲ್ಕ ಪಾವತಿಸಿದ್ದೇನೆ. ಜತೆಗೆ ಮನೆಗೆ ಬೇಕಾದ ಫ್ರೀಜ್‌, ವಾಷಿಂಗ್‌ ಮಷೀನ್‌, ಎಲ್‌ಇಡಿ ಟಿವಿ ಸೇರಿ ಇತರೆ ದಿನ ಉಪಯೋಗಿ ವಸ್ತುಗಳನ್ನು ಖರೀದಿಸಿದ್ದೇನೆ ಹಾಗೂ ಆಂಧ್ರಪ್ರದೇಶ, ತಂಜಾವೂರು ಹಾಗೂ ತಮಿಳುನಾಡಿನಲ್ಲಿರುವ ಪ್ರವಾಸಿ ತಾಣಗಳು ಹಾಗೂ ದೇವಾಲಯಗಳಿಗೆ ಕುಟುಂಬ ಸಮೇತ ಹೋಗಿ, ಹಣ ವ್ಯಯಿಸಿದ್ದೇನೆ,” ಎಂದು ರಾಜೇಶ್ವರಿ ವಿಚಾರಣೆ ಸಂದರ್ಭದಲ್ಲಿ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೆಲಸಕ್ಕೆ ಬರುತ್ತಿದ್ದ ರಾಜೇಶ್ವರಿ: 2-3 ತಿಂಗಳ ಹಿಂದೆಯೇ ಕೃತ್ಯವೆಸಗಿದ್ದ ಆರೋಪಿ ರಾಜೇಶ್ವರಿ, ಯಾರಿಗೂ ತಿಳಿಯದಂತೆ ಚಿನ್ನಾಭರಣಗಳನ್ನು ಅಡಮಾನ ಇಟ್ಟು ಐಷಾರಾಮಿ ಜೀವನ ನಡೆಸುತ್ತಿದ್ದಳು. ಆದರೂ ತಾನು ಒಡವೆ ಕದ್ದಿರುವ ವಿಚಾರ ಯಾರಿಗೂ ತಿಳಿಯಬಾರದು ಎಂದು ಪ್ರತಿನಿತ್ಯ ಕೆಲಸಕ್ಕೆ ಬರುತ್ತಿದ್ದಳು. ಹೀಗಾಗಿ ಜಾನಕಿ ಅವರಿಗೆ ಆಕೆಯ ಮೇಲೆ ಅನುಮಾನ ಬಂದಿರಲಿಲ್ಲ. ಈ ಮಧ್ಯೆ ಬೀರು ಪರಿಶೀಲಿಸಿದಾಗ ಕಳವು ಆಗಿರುವುದು ಬೆಳಕಿಗೆ ಬಂದಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.