2022ರೊಳಗೆ ಇಸ್ರೋ ವತಿಯಿಂದ ಮಾನವಸಹಿತ ಬಾಹ್ಯಾಕಾಶ ಯಾನ


Team Udayavani, Jan 11, 2019, 6:40 AM IST

2022rolage.jpg

ಬೆಂಗಳೂರು: “ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯಿಂದ 2022ರೊಳಗಾಗಿ ಮಾನವಸಹಿತ ಬಾಹ್ಯಾಕಾಶ ಯಾನ ಕೈಗೊಳ್ಳಲಾಗುವುದು’ ಎಂದು ಇಸ್ರೋ ನಿವೃತ್ತ ಅಧ್ಯಕ್ಷ ಎ.ಎಸ್‌.ಕಿರಣ್‌ಕುಮಾರ್‌ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಖಗೋಳಶಾಸ್ತ್ರ ಒಕ್ಕೂಟ (ಐಎಯು) 100 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಜವಾಹರ್‌ ಲಾಲ್‌ ನೆಹರು ತಾರಾಲಯ ಮತ್ತು ಬೆಂಗಳೂರು ಅಸೋಸಿಯೇಷನ್‌ ಫಾರ್‌ ಸೈನ್ಸ್‌ ಎಜುಕೇಷನ್‌ (ಬೇಸ್‌) ನಿಂದ ಗುರುವಾರ ಹಮ್ಮಿಕೊಂಡಿದ್ದ ಖಗೋಳ ಉತ್ಸವದಲ್ಲಿ ಮಾತನಾಡಿದರು.

“ಮುಂದಿನ ದಿನಗಳಲ್ಲಿ ಭಾರತದಿಂದ ಬಾಹ್ಯಾಕಾಶಕ್ಕೆ ಮನುಷ್ಯನನ್ನು ಕಳುಹಿಸಲು ಇಸ್ರೋ ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರ ಕೂಡ ಈ ಯೋಜನೆಗೆ ಅನುಮತಿ ನೀಡಿದ್ದು, 75ನೇ ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆ ವೇಳೆಗೆ ಭಾರತ ತನ್ನ ಮೊದಲ ಮಾನವಸಹಿತ ಬಾಹ್ಯಾಕಾಶ ಯಾನ ಮುಗಿಸಿರಲಿದೆ’ ಎಂದು ಹೇಳಿದರು.

900 ವಿಜ್ಞಾನಿಗಳ ಅಗತ್ಯ: ಮನುಷ್ಯರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಯೋಜನೆಗೆ ಇಸ್ರೋ ಅಗತ್ಯ ಸಂಶೋಧನೆಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಪ್ರಸ್ತುತ ಮಾನವಸಹಿತ ಬಾಹ್ಯಾಕಾಶ ನೌಕಾ ಕೇಂದ್ರ (ಹ್ಯೂಮನ್‌ಸ್ಪೇಸ್‌ ಫ್ಲೈಟ್‌ ಸೆಂಟರ್‌) ತೆರೆಯಲಾಗಿದೆ. ಈ ಯೋಜನೆಯ ಯಶಸ್ವಿಗಾಗಿ ಇಸ್ರೋನಲ್ಲಿರುವ ಎಲ್ಲ ವಿಜ್ಞಾನಿಗಳು ಶ್ರಮಿಸುತ್ತಿದ್ದು, ಇನ್ನೂ 900 ವಿಜ್ಞಾನಿಗಳು ಅಗತ್ಯವಿದ್ದಾರೆ. ಜಿಎಸ್‌ಎಲ್‌ವಿ ಎಂಕೆ 3 ಮೂಲಕ ಮಾನವನನ್ನು ಅಂತರಿಕ್ಷಕ್ಕೆ ಕಳುಹಿಸಲಾಗುವುದು. ಒಂದು ವಾರ ಬಾಹ್ಯಾಕಾಶದಲ್ಲಿ ಕಳೆಯುವ ಅವಕಾಶ ಗಗನಯಾತ್ರಿಗಳಿಗೆ ದೊರೆಯಲಿದೆ ಎಂದರು.

ಪ್ರಾಯೋಗಿಕ ಜ್ಞಾನ ಅತ್ಯಗತ್ಯ: ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಮಾತನಾಡಿ, ತರಗತಿಗಳಲ್ಲಿ ಪಠ್ಯದ ಮೂಲಕ ಮಕ್ಕಳಿಗೆ ವಿಜ್ಞಾನದ ಬಗ್ಗೆ ಕುತೂಹಲ ಹುಟ್ಟಿಸಬಹುದು. ಆದರೆ ಪ್ರಾಯೋಗಿಕ ಜ್ಞಾನ ಅವರಲ್ಲಿ ಮತ್ತಷ್ಟು ಆಸಕ್ತಿ ಮೂಡಿಸಲಿದೆ. ವಿಜ್ಞಾನ ವಿಷಯದಲ್ಲಿ ತರಗತಿಯಲ್ಲಿ ನೀಡುವ ಪಠ್ಯದ ಜ್ಞಾನದೊಂದಿಗೆ ಪ್ರಾಯೋಗಿಕ ಜ್ಞಾನವೂ ಅತ್ಯಗತ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾರತೀಯ ಖಭೌತ ಸಂಸ್ಥೆಯ ನಿರ್ದೇಶಕ ಪ್ರೊ.ಜಯಂತ್‌ ಮೂರ್ತಿ ಹಾಗೂ ಜವಾಹರ್‌ ಲಾಲ್‌ ನೆಹರು ತಾರಾಲಯದ ನಿರ್ದೇಶಕ ಪ್ರಮೋದ್‌ ಜಿ.ಗಲಗಲಿ ಉಪಸ್ಥಿತರಿದ್ದರು.

ಪ್ರಪಂಚದ ಸಣ್ಣ ದೂರದರ್ಶಕ ಭಾರತದ ಸಂಶೋಧನೆ: ಭಾರತದ ಆಸ್ಟ್ರೋಸ್ಯಾಟ್‌ ಎಂಬ ಉಪಗ್ರಹದಿಂದ ವಾತಾವರಣದಲ್ಲಿ ನಡೆಯುವ ಕ್ರಿಯೆಗಳ ಬಗ್ಗೆ ಸುಲಭವಾಗಿ ತಿಳಿದುಕೊಳ್ಳಬಹುದು. ಈ ಉಪಗ್ರಹದಲ್ಲಿ ಪ್ರಪಂಚದಲ್ಲಿಯೇ ಅತಿಸೂಕ್ಷ್ಮವಾದ ದೂರದರ್ಶಕವನ್ನು (ಟೆಲಿಸ್ಕೊಪ್‌) ಅಳವಡಿಸಲಾಗಿದೆ. ಇದರಿಂದಾಗಿ ವಾತಾವರಣದಲ್ಲಿ ಯಾವುದೇ ರೀತಿಯ ಕ್ರಿಯೆಗಳು ನಡೆದರೂ ನಮಗೆ ಸ್ಪಷ್ಟವಾದ ಚಿತ್ರಣ ದೊರೆಯಲಿದೆ.

ಈ ದೂರದರ್ಶಕ ಭಾರತೀಯರ ಸಂಶೋಧನೆಯಾಗಿದೆ ಎಂಬುದು ಹೆಮ್ಮೆಯ ವಿಚಾರ. ಭಾರತ ಇಂದು ಖಗೋಳಶಾಸ್ತ್ರದಲ್ಲಿ ವಿದೇಶಗಳಿಗೆ ಸರಿಸಮಾನವಾಗಿ ಹಾಗೂ ಕೆಲವು ವಿಭಾಗಳಲ್ಲಿ ಅನ್ಯ ದೇಶಗಳಿಗಿಂತ ಮುಂದುವರಿದ ಸಾಧನೆ ಮಾಡುತ್ತಿದೆ ಎಂದು ಕಿರಣ್‌ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

10

Nandini Ragi Ambali: ಮಾರುಕಟ್ಟೆಗೆ ಬಂತು ನಂದಿನಿ ರಾಗಿ ಅಂಬಲಿ: ಬೆಲೆ 10 ರೂ.!

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

ಕಾರು ಡಿಕ್ಕಿ: ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಬಾಲಕಿ ಸಜೀವ ದಹನ, 7 ಜನರಿಗೆ ಗಾಯ

Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ

Arrested: ನಶೆಯಲ್ಲಿ ನಿಂದನೆ; ಸ್ನೇಹಿತನ ಹತ್ಯೆಗೈದಿದ್ದ ಐವರ ಬಂಧನ

7

Theft: ಪ್ರಚಾರಕ್ಕೆ ತೆರಳಿದ್ದಾಗ ಮಾಜಿ ಮೇಯರ್‌ ಮನೆಯಲ್ಲಿ ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.