ಮತ್ತೆ ಎರಡು ಸಾವಿರ ಚೈಲ್ಡ್ ಲಾಕ್ ತೆರವು
Team Udayavani, Jan 15, 2019, 6:39 AM IST
ಬೆಂಗಳೂರು: ಕ್ಯಾಬ್ಗಳಲ್ಲಿರುವ ಚೈಲ್ಡ್ ಲಾಕ್ ತೆರವು ಕಾರ್ಯಾಚರಣೆ ಮುಂದುವರಿಸಿರುವ ಸಾರಿಗೆ ಇಲಾಖೆ ಸಿಬ್ಬಂದಿ, ಸೋಮವಾರ ಎರಡು ಸಾವಿರ ವಾಹನಗಳ ಚೈಲ್ಡ್ಲಾಕ್ ವ್ಯವಸ್ಥೆ ನಿಷ್ಕ್ರಿಯಗೊಳಿಸಿದ್ದಾರೆ.
ಚೈಲ್ಡ್ ಲಾಕ್ ತೆರವುಗೊಳಿಸಲಾದ ಎರಡು ಸಾವಿರ ಕ್ಯಾಬ್ಗಳ ಪೈಕಿ ನಗರದಲ್ಲೇ 1,500 ಕ್ಯಾಬ್ಗಳಿವೆ. ಜ್ಞಾನಭಾರತಿ, ಯಶವಂತಪುರ, ದೇವನಹಳ್ಳಿ ಸುತ್ತಲಿನ ಪ್ರದೇಶಗಳಲ್ಲಿ ಸೂಚನೆ ನೀಡಿದ ನಂತರವೂ ಈ ವ್ಯವಸ್ಥೆ ಅಳವಡಿಸಿಕೊಂಡಿದ್ದ ಕ್ಯಾಬ್ಗಳನ್ನು ತಡೆದು, ಯಂತ್ರವನ್ನು ನಿಷ್ಕ್ರಿಯಗೊಳಿಸಲಾಯಿತು.
ಈಗಾಗಲೇ ರಾಜ್ಯಾದ್ಯಂತ ಎಲ್ಲ ಸಾರಿಗೆ ಪ್ರಾದೇಶಿಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಚೈಲ್ಡ್ಲಾಕ್ ತೆರವುಗೊಳಿಸಲು ಇಲಾಖೆಯು ಜ.16ರ ಗಡುವು ವಿಧಿಸಿದೆ. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ಕರ್ನಾಟಕ ಮೋಟಾರು ವಾಹನ ನಿಯಮ 1988ರ ಕಲಂ 2 (25)ರ ಪ್ರಕಾರ ಸಾರಿಗೆ ವಾಹನಗಳಲ್ಲಿ (ಕ್ಯಾಬ್ಗಳು) ಚೈಲ್ಡ್ ಲಾಕ್ ಸಿಸ್ಟ್ಂ ಅಳವಡಿಸುವಂತಿಲ್ಲ.
ಅಂತಹ ವಾಹನಗಳಿಗೆ ರಹದಾರಿ ಕೂಡ ನೀಡುವಂತಿಲ್ಲ. ಹೈಕೋರ್ಟ್ ಕೂಡ ಈಚೆಗೆ ಟೂರಿಸ್ಟ್ ಟ್ಯಾಕ್ಸಿ ಮತ್ತು ಆ್ಯಪ್ ಆಧಾರಿತ ಟ್ಯಾಕ್ಸಿಗಳಲ್ಲಿರುವ ಚೈಲ್ಡ್ ಲಾಕ್ ನಿಷ್ಕ್ರಿàಯಗೊಳಿಸಬೇಕು. ದೃಢೀಕರಣ ಇಲ್ಲದ ಯಾವುದೇ ವಾಹನಗಳಿಗೆ ಕಾರ್ಯಾಚರಣೆಗೆ ಅವಕಾಶ ನೀಡಬಾರದು ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು