ಆಪರೇಷನ್ ಪ್ರಯತ್ನದ ಸತ್ಯ ಬಿಚ್ಚಿಟ್ಟಿರುವ ಆನಂದ್ಸಿಂಗ್
Team Udayavani, Jan 16, 2019, 6:25 AM IST
ಬೆಂಗಳೂರು: ಬಿಜೆಪಿಯವರು ಆಪರೇಷನ್ ಕಮಲ ನಡೆಸುತ್ತಿರುವ ಬಗ್ಗೆ ಮಹತ್ವದ ಮಾಹಿತಿಗಳನ್ನು ಹೊಸಪೇಟೆ ಶಾಸಕ ಆನಂದ್ ಸಿಂಗ್ ಪಕ್ಷದ ನಾಯಕರ ಎದುರು ಹಂಚಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರು ಪಕ್ಷೇತರ ಶಾಸಕರನ್ನು ಹೊರತು ಪಡೆಸಿ ಕಾಂಗ್ರೆಸ್ನ ಒಂಬತ್ತು ಶಾಸಕರನ್ನು ಕರೆತರುವುದಾಗಿ ರಮೇಶ್ ಜಾರಕಿಹೊಳಿ ಬಿಜೆಪಿ ಶಾಸಕರಿಗೆ ಭರವಸೆ ನೀಡಿದ್ದಾರೆ. ವಿಶೇಷವಾಗಿ ಬಳ್ಳಾರಿಯಿಂದ ನಾಲ್ವರು ಶಾಸಕರನ್ನು ಕರೆತರುವುದಾಗಿ ಹೇಳಿದ್ದಾರೆ. ಕಂಪ್ಲಿ ಗಣೇಶ್ ಹಾಗೂ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಕೊನೆ ಗಳಿಗೆಯಲ್ಲಿ ಹಿಂದೆ ಸರಿದಿದ್ದಾರೆ ಎಂದು ಆನಂದ್ ಸಿಂಗ್ ರಾಜ್ಯ ನಾಯಕರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತಾಪ್ಗೌಡ ಪಾಟೀಲ್, ಬಸವರಾಜ್ ದದ್ದಲ್, ಶಿವರಾಮ್ ಹೆಬ್ಟಾರ್ ಮೇಲೆಯೂ ಒತ್ತಡ ಹೇರಲಾಗುತ್ತಿದ್ದು, ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ ಎಂದು ಆನಂದ್ ಸಿಂಗ್ ಮಾಹಿತಿ ನೀಡಿದ್ದಾರೆ. ನನ್ನದೂ ಇಡಿ ಹಾಗೂ ಐಟಿ ಇಲಾಖೆಯ ಸಮಸ್ಯೆಗಳನ್ನು ಬಗೆ ಹರಿಸುವ ಭರವಸೆ ನೀಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದ್ದಾರೆ .
ಜೆಡಿಎಸ್ನ ಶಿರಾ ಶಾಸಕ ಸತ್ಯನಾರಾಯಣ ಹಾಗೂ ನಾಗಠಾಣಾ ಶಾಸಕ ದೇವಾನಂದ ಚೌಹಾನ್ ಅವರಿಗೂ ಬಿಜೆಪಿ ನಾಯಕರು ಕರೆ ಮಾಡಿ ಒತ್ತಡ ಹೇರುತ್ತಿದ್ದಾರೆ ಎಂದು ಆನಂದ್ ಸಿಂಗ್ ಪಕ್ಷದ ನಾಯಕರ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ