ಕದ್ದ ಮಗು ಖರೀದಿಸಿದ ತಹಶೀಲ್ದಾರ್‌ ಸೆರೆ


Team Udayavani, Jan 20, 2019, 6:36 AM IST

kadda-magu.jpg

ಬೆಂಗಳೂರು: ಹಣದಾಸೆಗೆ ಇಲ್ಲಿನ ಜ್ಞಾನಜ್ಯೋತಿನಗರದಿಂದ ಹನ್ನೊಂದು ತಿಂಗಳ ಹೆಣ್ಣು ಮಗುವನ್ನು ಅಪಹರಿಸಿ ತಮಿಳುನಾಡಿನ ತೂತುಕುಡಿಯ ವಿಶೇಷ ತಹಾಶೀಲ್ದಾರ್‌ ಟಿ.ಥಾಮಸ್‌ ಪಯಸ್‌ ದಂಪತಿಗೆ ಮಾರಾಟ ಮಾಡಿರುವ ಪ್ರಕರಣವನ್ನು ಜ್ಞಾನಭಾರತಿ ಪೊಲೀಸರು ಭೇದಿಸಿದ್ದಾರೆ. ಥಾಮಸ್‌ ಸೇರಿದಂತೆ ಐವರನ್ನು ಈ ಸಂಬಂಧ ಸೇಲಂ ಬಳಿ ಬಂಧಿಸಲಾಗಿದೆ.

ಮಗುವನ್ನು ಖರೀದಿಸಿದ ತಮಿಳುನಾಡಿನ ತೂತುಕುಡಿ ನಿವಾಸಿ ಟಿ.ಥಾಮಸ್‌ ಪಯಸ್‌ (55) ಹಾಗೂ ಈತನ ಪತ್ನಿ ಅರುಣ ಪಯಸ್‌ (45) ಹಾಗೂ ಅವರಿಗೆ ಮಗುವನ್ನು ಮಾರಾಟ ಮಾಡಿದ ಮೂವರು ಅಪಹರಣಕಾರರನ್ನೂ ಬಂಧಿಸಲಾಗಿದೆ. ಮಲತ್ತಹಳ್ಳಿ ನಿವಾಸಿ ಅನ್ಬುಕುಮಾರ್‌ ಅಲಿಯಾಸ್‌ ಕುಮಾರ್‌ (43), ಈತನ ಸಹಚರರಾದ ಕೆ.ಪಿ.ಅಗ್ರಹಾರ ನಿವಾಸಿ ಮಂಜುನಾಥ್‌ ಅಲಿಯಾಸ್‌ ಮಂಜ(19), ಯೋಗೇಶ್‌ ಕುಮಾರ್‌ (21) ಬಂಧಿತರು.

ಆರೋಪಿಗಳು ಜ.16ರಂದು ರಾತ್ರಿ 8 ಗಂಟೆ ಸುಮಾರಿಗೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯ ಜ್ಞಾನಜ್ಯೋತಿನಗರದ ನಿವಾಸಿ ಚಂದನ್‌ ಮತ್ತು ರಾಣಿ ದಂಪತಿಯ 11 ತಿಂಗಳ ಹೆಣ್ಣು ಮಗು ಅರ್ನಾಬಿ ಕುಮಾರಿ ಸಿಂಗ್‌ಳ‌ನ್ನು ಮೂವರು ಆರೋಪಿಗಳು ಅಪಹರಿಸಿದ್ದರು. ಇದೀಗ ಮಗುವನ್ನು ಸುರಕ್ಷಿತವಾಗಿ ರಕ್ಷಿಸಿ ಪೋಷಕರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಅಪಹರಣಕ್ಕೆ ಒಳಗಾದ ಮಗುವಿನ ತಂದೆ ಚಂದನ್‌, ಬನ್ನೇರುಘಟ್ಟದಲ್ಲಿ ಕಟ್ಟಡಗಳಿಗೆ ಟೈಲ್ಸ್‌ ಅಳವಡಿಸುವ ಕೆಲಸ ಮಾಡುತ್ತಿದ್ದು, ತಾಯಿ ರಾಣಿ ಮನೆಯಲ್ಲೇ ಇರುತ್ತಿದ್ದರು. ಈ ಮಧ್ಯೆ ಕೆಲ ದಿನಗಳ ಹಿಂದೆ ಚಂದನ್‌ ದಂಪತಿ ಜ್ಞಾನಜ್ಯೋತಿನಗರದಲ್ಲಿರುವ ಮನೆ ಖಾಲಿ ಮಾಡಿ, ಅದೇ ಪ್ರದೇಶದಲ್ಲಿ ಹೊಸದಾಗಿ ಮನೆಯೊಂದನ್ನು ಬಾಡಿಗೆಗೆ ಪಡೆದುಕೊಂಡಿದ್ದರು. ಹೀಗಾಗಿ ಮನೆಯ ಸಾಮಗ್ರಿಗಳನ್ನು ಸ್ಥಳಾಂತರಿಸಬೇಕಿತ್ತು.

ಈ ಹಿನ್ನೆಲೆಯಲ್ಲಿ ಸಾಮಗ್ರಿ ಸ್ಥಳಾಂತರಿಸಲು ಕೆಲ ಯುವಕರನ್ನು ಕಳುಹಿಸಿಕೊಂಡುವಂತೆ ಮನೆ ಬಳಿ ವಾಸವಾಗಿದ್ದ ಆರೋಪಿ ಅನ್ಬುಕುಮಾರ್‌ಗೆ ರಾಣಿ ಕೇಳಿಕೊಂಡಿದ್ದಾರೆ. ಆಗ ಆರೋಪಿ ತನಗೆ ಪರಿಚಯವಿದ್ದ ಯುವಕನನ್ನು ರಾಣಿ ಅವರ ಜತೆ ಹೊಸ ಮನೆ ಬಳಿ ಕಳುಹಿಸಿದ್ದಾನೆ. ಮತ್ತೂಂದೆಡೆ ತನ್ನ ಸಹಚರರಾದ ಯೋಗೇಶ್‌ ಹಾಗೂ ಮಣಿಯನ್ನು ರಾಣಿ ಅವರ ಹಳೇ ಮನೆಗೆ ಕಳುಹಿಸಿ ಮಲಗಿದ್ದ 11 ತಿಂಗಳ ಮಗುವನ್ನು ಅಪಹರಿಸುವಂತೆ ಸೂಚಿಸಿದ್ದಾನೆ.

ಕುಮಾರನ ಸೂಚನೆ ಮೇರೆಗೆ ಸಹಚರರು ಮಗುವನ್ನು ಅಪಹರಿಸಿದ್ದಾರೆ. ಕೆಲ ಸಮಯದ ಬಳಿಕ ಮನೆಗೆ ಬಂದ ರಾಣಿ ಅವರಿಗೆ ಮಗು ಕಾಣೆಯಾಗಿರುವುದು ತಿಳಿದಿದೆ. ಕೂಡಲೇ ಅಕ್ಕಪಕ್ಕದ ಮನೆಯ ನಿವಾಸಿಗಳನ್ನು ವಿಚಾರಿಸಿದಾಗ, ಇಬ್ಬರು ಅಪರಿಚಿತ ಯುವಕರು ಬೈಕ್‌ನಲ್ಲಿ ಮಗು ಕರೆದೊಯ್ದ ಬಗ್ಗೆ ಮಾಹಿತಿ ನೀಡಿದ್ದರು. ಇದರಿಂದ ಆತಂಕಗೊಂಡ ರಾಣಿ, ಕೂಡಲೇ ಜ್ಞಾನಭಾರತಿ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಹೆಣ್ಣು ಮಗು ಅಪಹರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಕೂಡಲೇ ರಾಣಿ ಅವರು ನೀಡಿದ ಪ್ರಾಥಮಿಕ ಮಾಹಿತಿ ಆಧರಿಸಿ ಅನ್ಬುಕುಮಾರ್‌ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಅಷ್ಟರಲ್ಲಿ ಯೋಗೇಶ್‌ ಮತ್ತು ಮಂಜುನಾಥ್‌ ಹಾಗೂ ಮಣಿ ನಾಯಂಡಹಳ್ಳಿ ಜಂಕ್ಷನ್‌ ಬಳಿ ತಮಿಳುನಾಡಿನ ಥಾಮಸ್‌ ಪಯಸ್‌ ದಂಪತಿಯಿಂದ 2 ಲಕ್ಷ ರೂ. ಪಡೆದು, ಮಗುವನ್ನು ಮಾರಾಟ ಮಾಡಿದ್ದರು. ಅಲ್ಲದೆ, ತಾವೇ ಬಾಡಿಗೆ ಕಾರು ಮಾಡಿ ತಮಿಳುನಾಡಿನ ತೂತುಕುಡಿಗೆ ಕಳುಹಿಸಿಕೊಟ್ಟಿದ್ದರು ಎಂದು ಪೊಲೀಸರು ಹೇಳಿದರು.

250 ಕಿ.ಮೀಟರ್‌ ಬೆನ್ನಟ್ಟಿದ್ದ ಪೊಲೀಸರು: ರಾತ್ರಿ 11ಗಂಟೆ ವೇಳೆಗಾಗಲೇ ಆರೋಪಿಗಳಾದ ಅನ್ಬುಕುಮಾರ್‌, ಯೋಗೇಶ್‌, ಮಂಜುನಾಥ್‌ನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದ ಪೊಲೀಸರು, ಮಗು ಖರೀದಿಸಿದ ತಮಿಳುನಾಡಿನ ದಂಪತಿ ಹೋಗುತ್ತಿರುವ ಮಾರ್ಗದ ಬಗ್ಗೆ ಆರೋಪಿಗಳಿಂದ ಮಾಹಿತಿ ಪಡೆದುಕೊಂಡರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರ ತಂಡ, ಥಾಮಸ್‌ ದಂಪತಿಯನ್ನು ಹಿಂಬಾಲಿಸಿದೆ. ಜ.17ರ ನಸುಕಿನ 5 ಗಂಟೆ ಸುಮಾರಿಗೆ ಸೇಲಂ ಬಳಿ ಥಾಮಸ್‌ ದಂಪತಿ ಹೋಗುತ್ತಿದ್ದ ಕಾರುನ್ನು ಅಡ್ಡಗಟ್ಟಿದ ಪೊಲೀಸರು, ಮಗುವನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಒಂದು ತಿಂಗಳ ಹಿಂದೆಯೇ ಸಂಚು: ಪ್ರಕರಣದ ಪ್ರಮುಖ ಆರೋಪಿ ಅನ್ಬುಕುಮಾರ್‌ ಹಾಗೂ ತಮಿಳುನಾಡಿನ ತೂತುಕುಡಿ ಮೂಲದ ಥಾಮಸ್‌ ದಂಪತಿ ನಡುವೆ ಒಂದು ತಿಂಗಳ ಹಿಂದೆಯೇ ಹೆಣ್ಣು ಮಗು ಅಪಹರಣದ ಕುರಿತು ಚರ್ಚೆ ನಡೆದಿತ್ತು. ಸಂಚು ಕೂಡ ರೂಪಿಸಿದ್ದರು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮಗು ಅಪಹರಣಕ್ಕೂ ಎರಡು ದಿನ ಮೊದಲೇ ಆರೋಪಿ ಅನ್ಬುಕುಮಾರ್‌, ತಮಿಳುನಾಡಿನಿಂದ ಥಾಮಸ್‌ ದಂಪತಿಯನ್ನು ಕರೆಸಿಕೊಂಡಿದ್ದ.

ಅಲ್ಲದೆ, ಇಬ್ಬರಿಗೂ ತನ್ನ ಮನೆಯಲ್ಲೇ ವಾಸ್ತವ್ಯ ಕಲ್ಪಿಸಿದ್ದ. ಹೀಗಾಗಿ ಮಗುವನ್ನು ಅಪಹರಣ ಮಾಡುತ್ತಿದ್ದಂತೆ ದಂಪತಿಗೆ ಮಗು ಒಪ್ಪಿಸಿ, ಹಣ ಪಡೆದು ಕಳುಹಿಸಿಕೊಟ್ಟಿದ್ದ ಎಂದು ಪೊಲೀಸರು ಹೇಳಿದರು. ಆದರೆ, ಮಗುವನ್ನು ಯಾವ ಕಾರಣಕ್ಕೆ ಅಪಹರಣ ಮಾಡಿದ್ದಾರೆ ಎಂಬುದು ತಿಳಿದಿಲ್ಲ. ದಂಪತಿಗೆ ಮಕ್ಕಳು ಇದ್ದಾರೋ? ಇಲ್ಲವೋ? ಅಥವಾ ದಂಪತಿ ಮಕ್ಕಳ ಮಾರಾಟ ಜಾಲದಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.