ನೌಕರರ ಚುನಾವಣೆಯಲ್ಲಿ ಬೆಳ್ಳಿ, ಹಣದ ಉಡುಗೊರೆ
Team Udayavani, Jan 28, 2019, 6:35 AM IST
ಬೆಂಗಳೂರು: ಬಿಬಿಎಂಪಿ ನೌಕರರ ಸಹಕಾರ ಸಂಘದ 13 ನಿರ್ದೇಶಕರ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ವ್ಯಾಪಕ ಹಣ ಹಂಚಿದ ಆರೋಪಗಳ ಹಿನ್ನೆಲೆಯಲ್ಲಿ ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ.
ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿ ಆಯೋಜನೆಯಾದ ಮತದಾನದ ವೇಳೆ ಸಂಘದ ಸದಸ್ಯರನ್ನು ಸೆಳೆಯಲು ಅಭ್ಯರ್ಥಿಗಳ ಬೆಂಬಲಿಗರು ಬೆಳ್ಳಿ ನಾಣ್ಯ ಹಾಗೂ ಹಣ ಹಂಚಿಕೆ ಮಾಡಿದ ಆರೋಪ ಕೇಳಿಬಂದಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಈ ವಿಚಾರ ಚುನಾವಣಾ ಕಣದಲ್ಲಿದ್ದ ಎರಡು ಬಣಗಳ ಬೆಂಬಲಿಗರು ಕೈ ಕೈ ಮಿಲಾಯಿಸುವ ಮಟ್ಟಿಗೆ ಹೋಯಿತು. ಕೊನೆಗೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದರು.
ಇದೇ ವೇಳೆ ಹಣ ಹಾಗೂ ಬೆಳ್ಳಿ ವಸ್ತುಗಳನ್ನು ಮತದಾರರಿಗೆ ಹಂಚಿಕೆ ಮಾಡುತ್ತಿದ್ದ ಆರೋಪದ ಮೇಲೆ ಕೆಲವರನ್ನು ಪೊಲೀಸರು ಬಂಧಿಸಿದರು. ಇದರಿಂದ 38 ಸದಸ್ಯರು ಮತದಾನದಿಂದ ವಂಚಿತರಾಗಬೇಕಾಯಿತು. ಅಂತಿಮವಾಗಿ ಸಂಜೆ ಚುನಾವಣೆಯ ಫಲಿತಾಂಶವನ್ನು ಪೊಲೀಸ್ ಭದ್ರತೆಯಲ್ಲಿ ಘೋಷಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ