ಅನಂತ್‌ ಮಾತಿನಂತೆ ರಾಜಕೀಯಕ್ಕೆ ತೇಜಸ್ವಿನಿ


Team Udayavani, Jan 28, 2019, 6:35 AM IST

ananth-tej.jpg

ಬೆಂಗಳೂರು: “ನಮ್ಮಿಬ್ಬರಲ್ಲಿ ಒಬ್ಬರು ರಾಜಕೀಯ ಕ್ಷೇತ್ರದಲ್ಲಿರಬೇಕು ಎಂದು ಹಿಂದೆ ಅನಂತಕುಮಾರ್‌ ಅವರು ಹೇಳಿದ್ದರು. ಅವರ ಮಾತಿನಂತೆ ರಾಜಕೀಯದಲ್ಲಿರಲು ನಿರ್ಧರಿಸಿದ್ದೇನೆ!’ ಇದು ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್‌ ಅವರ ಪತ್ನಿ ತೇಜಸ್ವಿನಿ ಅನಂತ್‌ ಕುಮಾರ್‌ ಅವರ ಮಾತು. ಅನಂತಕುಮಾರ್‌ ಅವರು ಅಕಾಲಿಕವಾಗಿ ವಿಧಿವಶರಾದ ಬಳಿಕ ರಾಜಕೀಯ ಕ್ಷೇತ್ರದಿಂದ ದೂರವಿರಲು ಬಯಸಿದ್ದರು.

ಆದರೆ ಜನರ ಒತ್ತಾಯ, ಅನಂತಕುಮಾರ್‌ ಅವರು ಹೇಳಿದ್ದ ಮಾತಿನಂತೆ ಕೊನೆಗೂ ರಾಜಕೀಯದಲ್ಲಿರಲು ತೀರ್ಮಾನಿಸಿದ್ದಾರೆ. ಪಕ್ಷ ಬಯಸಿದರೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. “ಉದಯವಾಣಿ’ಯೊಂದಿಗೆ ಹಂಚಿಕೊಂಡ ಮಾತುಗಳ ಸಾರ ಇಲ್ಲಿದೆ.

ನಾನು ರಾಜಕೀಯದಲ್ಲಿ ಇರದಿದ್ದರೂ ಎರಡು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲೇ ಕಳೆದಿದ್ದೇನೆ. 1997ರಲ್ಲಿ ಅದಮ್ಯ ಚೇತನ ಸಂಸ್ಥೆ ಸ್ಥಾಪನೆಯಾಯಿತು. ಅನಂತಕುಮಾರ್‌ ಅವರು 1998ರ ಲೋಕಸಭಾ ಚುನಾವಣೆಯಿಂದಲೂ ಪ್ರಚಾರ ಇತರೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಹಾಗಿದ್ದರೂ ರಾಜಕೀಯ ಕ್ಷೇತ್ರದಲ್ಲಿರುವ ಇಚ್ಛೆ ಇರಲಿಲ್ಲ ಎಂದು ತೇಜಸ್ವಿನಿ ಅನಂತಕುಮಾರ್‌ ತಿಳಿಸಿದರು.

ರಾಜಕೀಯದ ವಿಚಾರ ಕುರಿತು ಚರ್ಚಿಸುವಾಗ ನಮ್ಮಿಬ್ಬರಲ್ಲಿ ಒಬ್ಬರು ರಾಜಕೀಯದಲ್ಲಿರಬೇಕು ಎಂದು ಅನಂತಕುಮಾರ್‌ ಹೇಳಿದ್ದರು. ಆದರೆ ಅಕಾಲಿಕವಾಗಿ ಅವರನ್ನು ಕಳೆದುಕೊಳ್ಳಬೇಕಾಯಿತು. ನಂತರವೂ ನಾನು ರಾಜಕೀಯದಲ್ಲಿರಲು ಬಯಸಿರಲಿಲ್ಲ. ಅದಮ್ಯ ಚೇತನ ಸಂಸ್ಥೆಯ ಮೂಲಕವೇ ಸಮಾಜ ಸೇವೆ ಮುಂದುವರಿಸಲು ಚಿಂತಿಸಿದ್ದೆ.

ಆದರೆ ಸಾಕಷ್ಟು ಮಂದಿ ರಾಜಕೀಯದಲ್ಲಿರುವಂತೆ ಮನವಿ, ಒತ್ತಾಯ ಮಾಡುತ್ತಿದ್ದರು. ಅನಂತಕುಮಾರ್‌ ಅವರು ಹೇಳಿದ ಮಾತುಗಳು ನೆನಪಾಗುತ್ತಿದ್ದವು. ಅವರ ಕನಸು, ಆಶಯವನ್ನು ಮುಂದುವರಿಸುವ ಉದ್ದೇಶದಿಂದ ರಾಜಕೀಯ ಕ್ಷೇತ್ರದಲ್ಲಿರಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ಬೆಂಗಳೂರು ದಕ್ಷಿಣ ಕ್ಷೇತ್ರವು ಬಹಳ ವಿಶಿಷ್ಟತೆಗಳಿಂದ ಕೂಡಿದೆ. ದೇಶ ಹಾಗೂ ಜಗತ್ತಿಗೆ ಉತ್ತಮ ಪ್ರತಿಭೆಗಳನ್ನು ನೀಡಿದ ಶಿಕ್ಷಣ ಸಂಸ್ಥೆಗಳು ದಕ್ಷಿಣ ಭಾಗದಲ್ಲಿವೆ. ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಏರೋಸ್ಪೇಸ್‌ ಇತರೆ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದೆ. ಜತೆಗೆ ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಿಕೊಂಡು ಬಂದಿದೆ.

ಜತೆಗೆ ಪರಿಸರ ಸಂರಕ್ಷಣೆಗೂ ವಿಶೇಷ ಒತ್ತು ನೀಡಲಾಗಿದೆ. ಈ ಎಲ್ಲ ಕಾರಣಗಳಿಂದಾಗಿ ಬೆಂಗಳೂರು ದಕ್ಷಿಣ ಕ್ಷೇತ್ರ ಎಲ್ಲ ದೃಷ್ಟಿಯಿಂದಲೂ ವಿಶೇಷವೆನಿಸಿದೆ. ಹಣ, ತೋಳ್ಬಲವಿಲ್ಲದ ಮಧ್ಯಮ ವರ್ಗದವರು ಚುನಾವಣೆಯಲ್ಲಿ ಗೆಲ್ಲಬಹುದು ಎಂಬುದನ್ನು ಅನಂತಕುಮಾರ್‌ ಅವರು ತೋರಿಸಿಕೊಟ್ಟಿದ್ದಾರೆ. ಅದು ಮುಂದುವರಿಯಬೇಕಿದೆ. ಪಕ್ಷ ಬಯಸಿದರೆ ಈ ಕ್ಷೇತ್ರದಿಂದಲೇ ಸ್ಪರ್ಧಿಸಲು ಚಿಂತಿಸಿದ್ದೇನೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರ ಕೈಬಲಪಡಿಸಬೇಕಿದೆ. ಅವರ ಆಶಯದಂತೆ ದೇಶವನ್ನು ಅಭಿವೃದ್ಧಿಪಡಿಸುವಂತೆ ಎಲ್ಲ ಹಂತಗಳಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕಿದೆ. ನಾನು ಪಕ್ಷದ ಸದಸ್ಯತ್ವವನ್ನೂ ಪಡೆದಿದ್ದೇನೆ. ಅನಂತಕುಮಾರ್‌ಅವರನ್ನು ವಿವಾಹದಾಗಲೇ ಪಕ್ಷವನ್ನೂ ಸೇರಿದ್ದೇನೆ. ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಅನಂತಕುಮಾರ್‌ ಸಾಕಷ್ಟು ಕನಸು ಕಂಡಿದ್ದರು. ಅದನ್ನು ಮುಂದುವರಿಸುವ ಜತೆಗೆ ಜನರ ಒತ್ತಾಸೆಯಂತೆ ಸ್ಪರ್ಧಿಸಲು ಚಿಂತಿಸಿದ್ದೇನೆ ಎಂದು ತಿಳಿಸಿದರು.

ಪಕ್ಷ ಇಚ್ಛಿಸಿ ಸೂಚಿಸಿದರೆ ಸ್ಪರ್ಧೆ: ಅನಂತಕುಮಾರ್‌ ಅವರು ವಿಧಿವಶರದ ಬಳಿಕ ರಾಜಕೀಯದಲ್ಲಿರುವಂತೆ ಪಕ್ಷದ ಹಿರಿಯ ನಾಯಕರೆಲ್ಲಾ ಮೌಖೀಕವಾಗಿ ಸೂಚಿಸುತ್ತಿದ್ದರು. ಇಂತಹ ಹೊತ್ತಿನಲ್ಲಿ ರಾಜಕೀಯದಿಂದ ದೂರ ಉಳಿಯುವ ಮಾತುಗಳನ್ನಾಡಬಾರದು. ಅನಂತಕುಮಾರ್‌ ಅವರ ಆಶಯಗಳನ್ನು ಜಾರಿಗೊಳಿಸಲು ರಾಜಕೀಯ ಪ್ರವೇಶಿಸಬೇಕು ಎಂದು ಹಿರಿಯ ನಾಯಕರು ಹೇಳಿದ್ದರು. ಹಾಗಾಗಿ ಪಕ್ಷ ಇಚ್ಛಿಸಿ ಸ್ಪರ್ಧಿಸುವಂತೆ ಸೂಚಿಸಿದರೆ ಸ್ಪರ್ಧಿಸುತ್ತೇನೆ ಎಂದು ತೇಜಸ್ವಿನಿ ತಿಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.