ಶಾಲಾ ಮಕ್ಕಳ ಸುರಕ್ಷತೆಗೆ ಲೋಕಾಸಕ್ತಿ


Team Udayavani, Jan 31, 2019, 5:44 AM IST

blore-1.jpg

ಬೆಂಗಳೂರು: ಮಕ್ಕಳ ಸುರಕ್ಷತಾ ನಿಯಮಗಳನ್ನು ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ, ಬೆಂಗಳೂರು ನಗರ ವ್ಯಾಪ್ತಿಯ ಖಾಸಗಿ ಶಾಲೆಗಳ ಪೈಕಿ ಶೇ.10ರಷ್ಟು ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಿಗೆ (ಎಡಿಜಿಪಿ) ಸೂಚಿಸಿದ್ದಾರೆ.

ಭೇಟಿ ನೀಡುವ ಖಾಸಗಿ ಶಾಲೆಗಳಲ್ಲಿ ಮಕ್ಕಳ ಶಿಕ್ಷಣ ನೀತಿ-2016ರ ಅನ್ವಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿಯೇ? ಇಲ್ಲವೇ? ಮಕ್ಕಳ ಸುರಕ್ಷಾ ಸಮಿತಿ ರಚನೆಯಾಗಿಯೇ? ಮಕ್ಕಳ ಭದ್ರತೆ ಬಗ್ಗೆ ಶಾಲೆಗಳ ಕ್ರಮಗಳೇನು? ಹಾಗೂ ಶಾಲಾ ಸಿಬ್ಬಂದಿ ಹಿನ್ನೆಲೆ, ಶಾಲಾ ವಾಹನಗಳ ಸುರಕ್ಷತೆ ಸೇರಿ ಪ್ರಮುಖ ಮಾಹಿತಿಗಳನ್ನು ಸಂಗ್ರಹಿಸಿ ವರದಿ ಸಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ.

ಖಾಸಗಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡದಿರುವ ಕುರಿತು ‘ಮಕ್ಕಳ ಸುರಕ್ಷಾ ನಿಯಮಗಳಿಗೆ ಕಿಮ್ಮತ್ತು ನೀಡದ ಖಾಸಗಿ ಶಾಲೆಗಳು’ ಎಂಬ ಶೀರ್ಷಿಕೆಯಡಿ 2018ರ ಜುಲೈ 2ರಂದು ‘ಉದಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. ವರದಿ ಆಧರಿಸಿ, ಲೋಕಾಯುಕ್ತ ಸಂಸ್ಥೆ, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಈ ಸಂಬಂಧ ಈಗಾಗಲೇ ಬೆಂಗಳೂರು ನಗರದಲ್ಲಿರುವ ಖಾಸಗಿ ಶಾಲೆಗಳ ಪಟ್ಟಿ ಸಿದ್ಧಪಡಿಸಿ ಕೊಂಡಿರುವ ಲೋಕಾಯುಕ್ತ ಪೊಲೀಸರು, ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ ನಗರದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಿವೆ. ಈ ಪೈಕಿ ಶೇ.10ರಷ್ಟು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲು ಕಾಲವಕಾಶ ಬೇಕಿದೆ ಎಂದು ಲೋಕಾಯುಕ್ತ ಅಧಿಕಾರಿಗಳ ಬಳಿ ಪೊಲೀಸರು ಮನವಿ ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಮತ್ತೂಂದೆಡೆ ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಮ್ಮ ವ್ಯಾಪ್ತಿಯಲ್ಲಿರುವ ಖಾಸಗಿ ಶಾಲೆಗಳು ಕೈಗೊಂಡಿರುವ ಮಕ್ಕಳ ಸುರಕ್ಷತಾ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಲೋಕಾಯುಕ್ತ ಸಂಸ್ಥೆಗೆ ವರದಿ ಸಲ್ಲಿಸಿದ್ದಾರೆ. ಈ ಪೈಕಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿ ಕಾರಿಗಳು ವರದಿ ಸಲ್ಲಿಸಿದ್ದು, ನಾಲ್ಕು ತಾಲೂಕುಗಳ 236 ಖಾಸಗಿ ಶಾಲೆಗಳ ಪೈಕಿ ದೊಡ್ಡಬಳ್ಳಾಪುರದ ಖಾಸಗಿ ಶಾಲೆಯೊಂದು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲೇ ಸಮಿತಿಯಿಲ್ಲ: ಬೆಂಗಳೂರು ಉತ್ತರ ಜಿಲ್ಲಾ ವ್ಯಾಪ್ತಿಯ ವಲಯ 1, ವಲಯ 2, ವಲಯ 3 ಹಾಗೂ ವಲಯ 4ರಲ್ಲಿ 1.477 ಖಾಸಗಿ ಅನುದಾನರಹಿತ ಶಾಲೆಗಳಿದ್ದು, ಈ ಪೈಕಿ ವಲಯ 4ರ ಎರಡು ಶಾಲೆಗಳು ಮಾತ್ರ ಮಕ್ಕಳ ರಕ್ಷಣಾ ಸಮಿತಿ ರಚನೆ ಮಾಡಿಕೊಂಡಿಲ್ಲ. ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯ ವಲಯ 1, ವಲಯ 2, ವಲಯ 3, ವಲಯ 4 ಮತ್ತು ಆನೇಕಲ್‌ ತಾಲೂಕಿನಲ್ಲಿ 953 ಸರ್ಕಾರಿ, 309 ಅನುದಾನಿತ ಹಾಗೂ 2.231 ಅನುದಾನರಹಿತ ಸೇರಿ ಒಟ್ಟು 3.493 ಶಾಲೆಗಳಿವೆ. ಈ ಪೈಕಿ 3.179 ಶಾಲೆಗಳು ಸಮಿತಿ ರಚಿಸಿಕೊಂಡಿದ್ದು, ಆನೇಕಲ್‌ನ 36 ಸರ್ಕಾರಿ ಶಾಲೆಗಳಲ್ಲೇ ಮಕ್ಕಳ ರಕ್ಷಣಾ ಸಮಿತಿ ರಚಿಸಿಕೊಂಡಿಲ್ಲ ಎಂದು ವರದಿಯಲ್ಲೇ ಉಲ್ಲೇಖೀಸಲಾಗಿದೆ. 2018ರ ಜುಲೈ 2ರಂದು ‘ಉದಯವಾಣಿ’ ಪ್ರಕಟಿಸಿದ್ದ ವಿಶೇಷ ವರದಿ.

ರಾಜ್ಯದ ಎಲ್ಲ ಡಿಡಿಪಿಐಗಳಿಗೆ ಸೂಚನೆ
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಮಾತ್ರವಲ್ಲದೆ, ರಾಜ್ಯದ ಎಲ್ಲ ಉಪ ನಿರ್ದೇಶಕರಿಗೂ ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ವಸ್ತುನಿಷ್ಠ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಪ್ರಮುಖವಾಗಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರತಿ ಶಾಲಾ ಮುಖ್ಯಸ್ಥರಿಂದ ಮಾಹಿತಿ ಪಡೆದು ಅಗತ್ಯ ಮಾರ್ಗದರ್ಶನ ನೀಡಬೇಕು ಮತ್ತು ಅನುಪಾಲನಾ ವರದಿ ಸಲ್ಲಿಸಬೇಕು. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಇಲಾಖಾ ತರಬೇತಿಗಳನ್ನು ನೀಡುವ ಮಾದರಿಯಲ್ಲಿಯೇ ಖಾಸಗಿ ಶಾಲಾ ಶಿಕ್ಷಕರುಗಳಿಗೂ ಸಹ ಆಯಾ ಆಡಳಿತ ಮಂಡಳಿ ಯಿಂದ ತರಬೇತಿಗಳನ್ನು ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡುವುದು, ಸರ್ಕಾರಿ ಶಾಲೆಗಳ ಎಸ್‌ಡಿಎಂ ಸಮಿತಿಗಳ ಕಾರ್ಯನಿರ್ವಹಣೆ ಬಗ್ಗೆ ಕಾಲಕಾಲಕ್ಕೆ ಪರಿಶೀಲನೆ ನಡೆಸುವುದು, ಖಾಸಗಿ ಶಾಲೆಗಳಲ್ಲಿ ಪೋಷಕ-ಶಿಕ್ಷಕ ಸಮಿತಿಯ ಸಭೆಯು ನಿಯಮಿತವಾಗಿ ನಡೆಯುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಯನ್ನು ಪಾಲಿಸಿರುವ ಬಗ್ಗೆ ನಿಗದಿತ ನಮೂನೆಯಲ್ಲಿ ಮಾಹಿತಿ ಪಡೆದು ಖಾತ್ರಿ ಪಡಿಸಿಕೊಂಡು ವರದಿಯನ್ನು ಸಲ್ಲಿಸಬೇಕು ಎಂದು ಲೋಕಾಯುಕ್ತರು ಸೂಚಿಸಿದ್ದಾರೆ.

ವರದಿಯಲ್ಲಿ ಏನಿರಬೇಕು?
•ಖಾಸಗಿ ಶಾಲೆಗಳಲ್ಲಿ ಮಕ್ಕಳ ಶಿಕ್ಷಣ ನೀತಿ-2016ರ ಅನ್ವಯ ಸುರಕ್ಷತಾ ಕ್ರಮಗಳ ಅನುಷ್ಠಾನವಾಗಿದೆಯೇ?
•ಮಕ್ಕಳ ಸುರಕ್ಷಾ ಸಮಿತಿ ರಚನೆಯಾಗಿಯೇ?
•ಮಕ್ಕಳ ಭದ್ರತೆ ಕುರಿತಂತೆ ಶಾಲೆಗಳು ಕೈಗೊಂಡಿರುವ ಕ್ರಮಗಳೇನು?
•ಶಾಲಾ ಸಿಬ್ಬಂದಿ ಹಿನ್ನೆಲೆ, ಶಾಲಾ ವಾಹನಗಳ ಸುರಕ್ಷತೆ ಸೇರಿ ಪ್ರಮುಖ ಮಾಹಿತಿ ಸಂಗ್ರಹ

ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.