ನಿರಾಶ್ರಿತರ ಭರವಸೆಯಾಗಿ ಬರಲಿದೆ ಆ್ಯಪ್‌


Team Udayavani, Feb 3, 2019, 6:34 AM IST

nirashrita.jpg

ಬೆಂಗಳೂರು: ಮನೆ ತೊರೆದು ಬಂದು ಬೆಂಗಳೂರಿನ ಹಾದಿ-ಬೀದಿಯಲ್ಲಿ ವಾಸವಿರುವ ನಿರಾಶ್ರಿತರ ನೆರವಿಗೆ ಬಿಬಿಎಂಪಿ ಧಾವಿಸಿದ್ದು, ಮರಳಿ ಅವರನ್ನು ಕುಟುಂಬದ ಜತೆ ಸೇರಿಸಲು ವಿಶೇಷ ಆ್ಯಪ್‌ ಅಭಿವೃದ್ಧಿಪಡಿಸಲಿದೆ.

ಬೆಂಗಳೂರಿನ ಕೇಂದ್ರ ಭಾಗದ ಮೂರು ವಲಯಗಳಲ್ಲಿ ವಸತಿ ರಹಿತ ನಿರಾಶ್ರಿತರ ಸಮೀಕ್ಷೆ ಪೂರ್ಣಗೊಳಿಸಿರುವ ಅಧಿಕಾರಿಗಳು, ಉಳಿದ ಐದು ವಲಯಗಳಲ್ಲಿಯೂ ಸಮೀಕ್ಷೆ ಆರಂಭಿಸಿದ್ದಾರೆ. ಸಮೀಕ್ಷೆಯ ವೇಳೆ ದೇಶದ ನಾನಾ ರಾಜ್ಯಗಳಿಂದ ಹಾಗೂ ರಾಜ್ಯ ವಿವಿಧ ಜಿಲ್ಲೆಗಳಿಂದ ಜನರು ಬೆಂಗಳೂರಿಗೆ ಬಂದು ಫ‌ುಟ್‌ಪಾತ್‌, ಉದ್ಯಾನಗಳಲ್ಲಿ ವಾಸಿಸುತ್ತಿರುವುದು ಬೆಳಕಿಗೆ ಬಂದಿದೆ.

ಕುಟುಂಬ ಕಲಹಗಳಿಂದ ಬೇಸರಗೊಂಡು, ಗುಣವಾಗದ ಕಾಯಿಲೆಯಿಂದ ಬಳಲುತ್ತಿರುವ ಹಾಗೂ ಮರೆವು ಕಾಯಿಲೆಯವರು ನಗರಕ್ಕೆ ಬಂದಿರುವ ಉದಾಹರಣೆಗಳಿವೆ. ನಗರಕ್ಕೆ ಬಂದು ಹಲವು ವರ್ಷ ಕಳೆದರೂ ಅವರು ವಾಪಸ್‌ ಹೋಗಿಲ್ಲ. ಜತೆಗೆ ತಮ್ಮ ಊರು, ಕುಟುಂಬದವರನ್ನು ಮರೆತಿರುವುದು ಸಮೀಕ್ಷೆಯಿಂದ ತಿಳಿದುಬಂದಿದೆ.

ಮನೆ ತೊರೆದು ಬಂದವರನ್ನು ಮತ್ತೆ ಕುಟುಂಬದ ಜತೆ ಸೇರಿಸುವ ಪ್ರಯತ್ನಕ್ಕೆ ಪಾಲಿಕೆ ಕೈ ಹಾಕಿದ್ದು, ಕಳೆದು ಹೋದವರನ್ನು ಹುಡುಕುವ ವಿಶೇಷ ಆ್ಯಪ್‌ ಅಭಿವೃದ್ಧಿಪಡಿಸಲು ತೀರ್ಮಾನಿಸಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ತಪ್ಪಿ ಹೋದವರನ್ನು ಮರಳಿ ಕುಟುಂಬ ಸೇರಿಸುವ ಕಾರ್ಯದಲ್ಲಿ ತೊಡಗಿರುವ ಸ್ವಯಂ ಸೇವಾ ಸಂಘಗಳೊಂದಿಗೆ ಮಾತುಕತೆ ನಡೆಸಿರುವ ಅಧಿಕಾರಿಗಳು, ರಾಜ್ಯ ಪೊಲೀಸ್‌ ಇಲಾಖೆ ಸಹಕಾರ ಪಡೆಯಲು ನಿರ್ಧರಿಸಿದೆ.

ನಿರಾಶ್ರಿತರ ಸಂಪೂರ್ಣ ಮಾಹಿತಿ ಲಭ್ಯ: ಸಮೀಕ್ಷೆಯ ವೇಳೆ ಅಧಿಕಾರಿಗಳು ನಿರಾಶ್ರಿತರನ್ನು ಭೇಟಿ ಮಾಡಿ, ಅವರು ಎಲ್ಲಿಂದ ಬಂದಿದ್ದಾರೆ, ವಯಸ್ಸು, ಆರೋಗ್ಯದ ಸ್ಥಿತಿ, ನಗರಕ್ಕೆ ಬಂದು ಎಷ್ಟು ಕಾಲವಾಗಿದೆ, ಮನೆ ಬಿಟ್ಟು ಬರಲು ಕಾರಣವೇನು? ಎಂಬ ಪ್ರಶ್ನೆಗಳಿಗೆ ಅವರಿಂದ ಉತ್ತರ ಪಡೆದಿದ್ದಾರೆ. ಜತೆಗೆ ಅವರು ಯಾವ ಭಾಷೆ ಮಾತನಾಡುತ್ತಿದ್ದಾರೆ ಎಂಬ ಮಾಹಿತಿಯೊಂದಿಗೆ ಅವರ ಫೋಟೋ ಸಂಗ್ರಹಿಸಲಾಗಿದೆ.

40 ವರ್ಷ ಮೀರಿದವರೇ ಹೆಚ್ಚು: ಪಾಲಿಕೆಯಿಂದ ಈವರೆಗೆ ನಡೆಸಿರುವ ಸಮೀಕ್ಷೆಯಲ್ಲಿ 40 ವರ್ಷ ಮೀರಿದ ನಿರಠಾಶ್ರಿತರೇ ಹೆಚ್ಚಿನ ಸಂಖ್ಯೆಯಲ್ಲಿರುವುದು ಕಂಡುಬಂದಿದೆ. ಪ್ರಮುಖವಾಗಿ ಕೌಟುಂಬಿಕ ಕಲಹ ಹಾಗೂ ಗುಣವಾಗದ ಕಾಯಿಲೆಗೆ ಒಳಗಾಗಿ ಕುಟುಂಬದವರಿಗೆ ಹೊರೆಯಾಗದಿರಲು ನಿರ್ಧರಿಸಿ ಮನೆ ತೊರೆದಿರುವುದು ಕಂಡು ಬಂದಿದೆ. ನಿರಾಶ್ರಿತರಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆ, ಪಂಜಾಬಿ ಭಾಷಿಗರಿದ್ದು, ಉತ್ತರ ಕರ್ನಾಟಕ, ಮೈಸೂರು, ಮಂಡ್ಯ, ಕರಾವಳಿ ಹೀಗೆ ರಾಜ್ಯದ ಎಲ್ಲ ಭಾಗಗಳ ಜನ ಸಿಕ್ಕಿದ್ದಾರೆ.

ಆ್ಯಪ್‌ ಹೇಗೆ ಕೆಲಸ ಮಾಡುತ್ತದೆ?: ಪಾಲಿಕೆ ಅಭಿವೃದ್ಧಿಪಡಿಸುತ್ತಿರುವ ಆ್ಯಪ್‌ನಲ್ಲಿ ಸಮೀಕ್ಷೆಗೆ ಒಳಪಟ್ಟ ಎಲ್ಲ ನಿರಾಶ್ರಿತರ ಮಾಹಿತಿಯನ್ನು ಫೋಟೋ ಸಹಿತ ಅಪ್‌ಲೋಡ್‌ ಮಾಡಲಾಗುತ್ತದೆ. ಬಳಿಕ ಕಳೆದು ಹೋದವರನ್ನು ಹುಡುಕುವ ಕಾರ್ಯದಲ್ಲಿ ತೊಡಗಿರುವ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿರುವ ಇತರೆ ರಾಜ್ಯಗಳಲ್ಲಿನ ಸಂಸ್ಥೆಗಳಿಗೆ ಆ್ಯಪ್‌ ಕುರಿತು ಮಾಹಿತಿ ನೀಡಲಾಗುತ್ತದೆ.

ಜತೆಗೆ ವ್ಯಕ್ತಿ ಕಳೆದುಹೋದಾಗ ಸಂಬಂಧಿಕರು ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸುವುದರಿಂದ ಪೊಲೀಸರ ಜತೆ ಸಮನ್ವಯ ಸಾಧಿಸಿದರೆ, ನಿರಾಶ್ರಿತರನ್ನು ಬೇಗ ಮನೆಗೆ ತಲುಪಿಸಬಹುದು. ಆ ಹಿನ್ನೆಲೆಯಲ್ಲಿ ಈ ಕುರಿತು ಹಿರಿಯ ಅಧಿಕಾರಿಗಳು ಪೊಲೀಸ್‌ ಇಲಾಖೆಯೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಲೈಂಗಿಕ ಅಲ್ಪಸಂಖ್ಯಾತರಿಗೆ ಸೂರು, ತರಬೇತಿ: ನಗರದ ಎಲ್ಲಾ ವಲಯಗಳಲ್ಲಿ ಸಮೀಕ್ಷೆ ನಡೆಸಿ ನಿರಾಶ್ರಿತರಿಗೆ ಸೂರು ಕಲ್ಪಿಸಲು ನಿರ್ಧರಿಸಿರುವ ಅಧಿಕಾರಿಗಳು, ಲೈಂಗಿಕ ಅಲ್ಪಸಂಖ್ಯಾತರಿಗೆ ವಸತಿ ಸೌಲಭ್ಯ ಒದಗಿಸಲು ಯೋಜನೆ ರೂಪಿಸಿದ್ದಾರೆ. ಜತೆಗೆ ಅವರನ್ನು ಸ್ವವಲಂಬಿಗಳನ್ನಾಗಿಸುವ ಉದ್ದೇಶದಿಂದ ಟೈಲರಿಂಗ್‌, ಕ್ಯಾಂಡಲ್‌ ತಯಾರಿಕೆ, ಕೈತೋಟ, ಕಂಪ್ಯೂಟರ್‌ ತರಬೇತಿಯಂತಹ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.

ಈಗಾಗಲೇ ಉಪ್ಪಾರಪೇಟೆ ಪೊಲೀಸ್‌ಠಾಣೆ ಸಮೀಪವಿರುವ ಪಾಲಿಕೆಯ ಕಟ್ಟಡದಲ್ಲಿ 100 ಜನರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಲೈಂಗಿಕ ಅಲ್ಪಸಂಖ್ಯಾತರಿಗಾಗಿ ಕೆಲಸ ಮಾಡುತ್ತಿರುವ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಪಾಲಿಕೆಯ ಕಲ್ಯಾಣ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದರು. 

ಐದು ವಲಯಗಳಲ್ಲಿ ನಿರಾಶ್ರಿತರ ಸಮೀಕ್ಷೆ ನಡೆಸುತ್ತಿದ್ದು, ಮನೆ ಬಿಟ್ಟು ಬಂದವರನ್ನು ಮರಳಿ ಮನೆಗೆ ಸೇರಿಸುವ ಉದ್ದೇಶದಿಂದ ಆ್ಯಪ್‌ ಅಭಿವೃದ್ಧಿಸಲಾಗುತ್ತಿದೆ. ಜತೆಗೆ ಮನೆಯಿಂದ ಹೊರದೂಡಲ್ಪಟ್ಟ ಲೈಂಗಿಕ ಅಲ್ಪಸಂಖ್ಯಾತರು ಬದಕು ರೂಪಿಸಿಕೊಳ್ಳಲು ವಸತಿ, ತರಬೇತಿ ಕಲ್ಪಿಸುವ ಚಿಂತನೆಯಿದೆ.
-ಜಗದೀಶ್‌, ಉಪ ಆಯುಕ್ತರು (ಕಲ್ಯಾಣ)

* ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.