ಮೈತ್ರಿ ಬಿರುಕಿಗೆ ತೇಪೆ ಹಚ್ಚಲು ಪರಮೇಶ್ವರ್‌ ಯತ್ನ


Team Udayavani, Feb 4, 2019, 6:35 AM IST

maitri.jpg

ಬೆಂಗಳೂರು: ಮೈತ್ರಿ ಪಕ್ಷದಲ್ಲಿ ನಾಯಕರ ನಡುವಿನ ಮನಸ್ತಾಪದಿಂದ ಎರಡೂ ಪಕ್ಷಗಳ ಮುಖಂಡರ ನಡುವೆ ಅಂತರ ಹೆಚ್ಚಾಗುತ್ತಿದ್ದು, ದೋಸ್ತಿ ಪಕ್ಷಗಳ ನಡುವೆ ಒಗ್ಗಟ್ಟು ಮೂಡಿಸಲು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಪ್ರಯತ್ನ ಆರಂಭಿಸಿದ್ದಾರೆ.

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯರ ಆಪ್ತ ಶಾಸಕರು ಸಮ್ಮಿಶ್ರ ಸರ್ಕಾರದಲ್ಲಿ ಸಿದ್ದರಾಮಯ್ಯರೇ ತಮ್ಮ ಮುಖ್ಯಮಂತ್ರಿ ಎಂದು ಹೇಳಿದ್ದರಿಂದ ಮಾಜಿ ಪ್ರಧಾನಿ ದೇವೇಗೌಡರು ಆಕ್ರೋಶ ಗೊಂಡಿದ್ದು, ನೇರವಾಗಿ ಸಿದ್ದರಾಮಯ್ಯ ವಿರುದ್ಧ ಸಮಾಧಾನ ಹೊರ ಹಾಕಿದ್ದರು. ಅದು ಇಬ್ಬರೂ ನಾಯಕರ ನಡುವಿನ ಅಂತರ ಹೆಚ್ಚಾಗುವಂತೆ ಮಾಡಿದ್ದು, ಮೈತ್ರಿ ಸರ್ಕಾರದಲ್ಲಿ ಮತ್ತಷ್ಟು ವೈಮಸ್ಸಿನಗೆ ಕಾರಣವಾಗಿತ್ತು.

ಇದೇ ಕಾರಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಕೂಡ ಸಿದ್ದರಾಮಯ್ಯರನ್ನು ದೆಹಲಿಗೆ ಕರೆಸಿ ಲೋಕಸಭೆ ಚುನಾವಣೆ ಮುಗಿಯುವವರೆಗೂ ಯಾವುದೇ ಗೊಂದಲ ಮಾಡಿಕೊಳ್ಳದಂತೆ ಸಲಹೆ ನೀಡಿದ್ದರು. ಆದರೆ, ಸಿದ್ದರಾಮಯ್ಯ ಕೂಡ ಜೆಡಿಎಸ್‌ ವಿರುದ್ಧ ದೂರು ನೀಡಿ ಬಂದಿದ್ದು, ದೇವೇಗೌಡರು ಮತ್ತಷ್ಟು ಮುನಿಸಿಕೊಳ್ಳುವಂತೆ ಮಾಡಿತ್ತು.

ಆ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳ ನಾಯಕರ ನಡುವಿನ ಅಂತರ ಕಡಿಮೆ ಮಾಡಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮುಂದಾಗಿದ್ದು, ಭಾನುವಾರ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರನ್ನು ಆರೋಗ್ಯ ವಿಚಾರಣೆ ನೆಪದಲ್ಲಿ  ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ. 

ಫೆ.6ರಿಂದ ಅಧಿವೇಶನ ಆರಂಭವಾಗುವುದರಿಂದ ಮೈತ್ರಿ ಪಕ್ಷದಲ್ಲಿ ಗೊಂದಲ ಉಂಟಾದರೆ, ಪ್ರತಿಪಕ್ಷ ಅದನ್ನೇ ದೊಡ್ಡ ಅಸ್ತ್ರವಾಗಿ ಬಳಸಿಕೊಳ್ಳುವ ಸಾಧ್ಯತೆ ಇರುವುದರಿಂದ “ಡ್ಯಾಮೇಜ್‌ ಕಂಟ್ರೋಲ್‌’ಗೆ ಪರಮೇಶ್ವರ್‌ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಜಂಟಿ ಭೋಜನ ಕೂಟ: ಮೈತ್ರಿ ಸರ್ಕಾರದ ಎರಡೂ ಪಕ್ಷದ ಶಾಸಕರು ಹಾಗೂ ಸಚಿವರು ಬಹಿರಂಗವಾಗಿ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿರುವುದು ಕೂಡ ಮೈತ್ರಿ ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಹೀಗಾಗಿ ಎಲ್ಲರಲ್ಲೂ ವಿಶ್ವಾಸ ಮೂಡಿಸಲು ಪರಮೇಶ್ವರ್‌ ಫೆ.6ರಂದು ಎರಡೂ ಪಕ್ಷಗಳ ಶಾಸಕರು, ಸಚಿವರು ಹಾಗೂ ಸಂಸದರಿಗೆ ಜಂಟಿ ಭೋಜನ ಕೂಟ ಏರ್ಪಡಿಸಿದ್ದಾರೆ.

ಖಾಸಗಿ ಹೊಟೇಲ್‌ನಲ್ಲಿ ಏರ್ಪಡಿಸಿರುವ ಭೋಜನ ಕೂಟಕ್ಕೆ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರಿಗೂ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ. ಅದೇ ನೆಪದಲ್ಲಿ ಎರಡೂ ಪಕ್ಷಗಳ ಶಾಸಕರು ಹಾಗೂ ಸಚಿವರ ಜೊತೆಗೆ ನಾಯಕರು ಅನೌಪಚಾರಿಕ ಮಾತುಕತೆ ನಡೆಸಿ, ಗೊಂದಲದ ಹೇಳಿಕೆಗಳನ್ನು ನೀಡದಂತೆ ಮನವಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಜಂಟಿ ಶಾಸಕಾಂಗ ಸಭೆ: ಅದರ ಬೆನ್ನಲ್ಲೇ ಫೆ.7 ರಂದು ಜಂಟಿ ಶಾಸಕಾಂಗ ಸಭೆಯನ್ನೂ ನಡೆಸಲು ಕಾಂಗ್ರೆಸ್‌ ಮುಂದಾಗಿದ್ದು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಎರಡೂ ಪಕ್ಷಗಳ ಶಾಸಕಾಂಗ ಪಕ್ಷದ ಸಭೆ ಕರೆದಿ ದ್ದು, ಶಾಸಕರು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆ ಕುರಿತಂತೆ ನೇರವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿ ಹೇಳಿಕೊಳ್ಳಲು ಅವಕಾಶ ಕಲ್ಪಿಸಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದಾರೆ. 

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.