ತ್ಯಾಜ್ಯ ವಿಂಗಡಣೆಯಲ್ಲಿ ವಿನಾಯ್ತಿಯಿಲ್ಲ


Team Udayavani, Feb 7, 2019, 4:15 AM IST

blore-1.jpg

ಬೆಂಗಳೂರು: ಸಮರ್ಪಕ ತ್ಯಾಜ್ಯ ವಿಲೇವಾರಿಗೆ ವಾರ್ಡ್‌ವಾರು ಆಹ್ವಾನಿಸಿದ ಟೆಂಡರ್‌ನಲ್ಲಿರುವ ಕೆಲ ಅಂಶಗಳನ್ನು ಬದಲಿಸಲು ನಿರ್ಧರಿಸಿದ್ದು, ತ್ಯಾಜ್ಯ ವಿಂಗಡಣೆ ವಿಚಾರದಲ್ಲಿ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಸ್ಪಷ್ಟಪಡಿಸಿದರು.

ವಾರ್ಡ್‌ವಾರು ತ್ಯಾಜ್ಯ ವಿಲೇವಾರಿ ಟೆಂಡರ್‌ನಲ್ಲಿರುವ ಅಂಶಗಳ ಕುರಿತು ಸಲಹೆ ನೀಡಲು ಪಾಲಿಕೆ ನೇಮಿಸಿರುವ ಸಮಿತಿಯೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಸಮರ್ಪಕವಾಗಿ ತ್ಯಾಜ್ಯ ವಿಂಗಡಣೆಯಾಗದ ಹೊರತು ನಗರದಲ್ಲಿನ ತ್ಯಾಜ್ಯ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ. ಹೀಗಾಗಿ ತ್ಯಾಜ್ಯ ವಿಂಗಡಣೆ ವಿಚಾರದಲ್ಲಿ ವಿನಾಯಿತಿ ನೀಡುವುದಿಲ್ಲ ಎಂದರು.

ಟೆಂಡರ್‌ ಅವಧಿ ಕೇವಲ ಒಂದು ವರ್ಷ ಮಾತ್ರವಿರುವ ಕಾರಣ ಗುತ್ತಿಗೆದಾರರು ಟೆಂಡರ್‌ನಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಿದ್ದು, ಮೂರು ವರ್ಷಗಳಿಗೆ ಒಂದು ಬಾರಿ ಟೆಂಡರ್‌ ಕರೆಯಬೇಕೆಂಬ ಮನವಿ ಕೇಳಿಬಂದಿದೆ. ಆದರೆ, ಹೈಕೋರ್ಟ್‌ ಆದೇಶದಂತೆ ಮೂರು ವರ್ಷಗಳಿಗೆ ಟೆಂಡರ್‌ ಆಹ್ವಾನಿಸುವಂತಿಲ್ಲ. ಹೀಗಾಗಿ ಒಂದು ವರ್ಷದ ಅವಧಿಯ ಬಳಿಕ ಎರಡು ವರ್ಷಗಳಿಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಪಾಲಿಕೆಯಿಂದ ಹಸಿ ಹಾಗೂ ಸ್ಯಾನಿಟರಿ ತ್ಯಾಜ್ಯ ವಿಲೇವಾರಿಗೆ ಮಾತ್ರ ಟೆಂಡರ್‌ ಆಹ್ವಾನಿಸಿದೆ. ಒಣ ತ್ಯಾಜ್ಯವನ್ನು ಸ್ವಯಂ ಸೇವಕ ಸಂಘಗಳು, ಎನ್‌ಜಿಒಗಳು ಹಾಗೂ ಚಿಂದಿ ಆಯುವವರಿಗೆ ನೀಡಲಾಗುತ್ತದೆ. ಜತೆಗೆ ಅವರ ಅನುಕೂಲಕ್ಕಾಗಿ ಪ್ರತಿ ವಾರ್ಡ್‌ಗೆ ಮೂರು ಆಟೋ ಟಿಪ್ಪರ್‌ಗಳನ್ನು ಪಾಲಿಕೆಯಿಂದಲೇ ಖರೀದಿಸಿ ಕೊಡಲಾಗುವುದು ಎಂದು ಮಾಹಿತಿ ನೀಡಿದರು.

ತ್ಯಾಜ್ಯ ವಿಲೇವಾರಿಗೆ ಹೊಸ ವಾಹನಗಳ ಬಳಸುವ ನಿಯಮ ಸಡಿಲಿಸಬೇಕೆಂದು ಸಮಿತಿ ಕೋರಿದ್ದು, ಅದರಂತೆ ಸಾರಿಗೆ ಇಲಾಖೆಯ ಅಧಿಕಾರಿಗಳ ಮೂಲಕ ಪರಿಶೀಲಿಸಿ ವಾಹನಗಳು ಉತ್ತಮವಾಗಿದ್ದರೆ ನಾಲ್ಕು ವರ್ಷದೊಳಗಿನ ವಾಹನಗಳನ್ನು ವಿಲೇವಾರಿಗೆ ಬಳಸಲು ಅವಕಾಶ ನೀಡಲಾಗುವುದು. ಟೆಂಡರ್‌ ಸಲ್ಲಿಸುವ ಕೊನೆಯ ದಿನಾಂಕವನ್ನು 15 ದಿನಗಳು ವಿಸ್ತರಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.

ಟೆಂಡರ್‌ ಪ್ರಕ್ರಿಯೆಯಲ್ಲಿ ಹೊಸಬರು ಭಾಗವಹಿಸಬೇಕೆಂಬ ಉದ್ದೇಶದಿಂದ ಒಂದು ವರ್ಷಕ್ಕೆ ಟೆಂಡರ್‌ ಆಹ್ವಾನಿಸಿದ್ದು, ಒಬ್ಬರು ಗುತ್ತಿಗೆದಾರರಿಗೆ ಕೇವಲ ಒಂದು 5 ವಾರ್ಡ್‌ಗಳನ್ನು ನೀಡಲಾಗುತ್ತದೆ. ಸದಸ್ಯರು ವಾರ್ಡ್‌ಗಳ ಸಂಖ್ಯೆ ಹೆಚ್ಚಿಸಬೇಕೆಂದು ಕೋರಿದರೂ, ಹೈಕೋರ್ಟ್‌ ಆದೇಶದಂತೆ ಒಬ್ಬ ಗುತ್ತಿಗೆದಾರರಿಗೆ ಐದು ವಾರ್ಡ್‌ಗಳನ್ನು ಮಾತ್ರ ನೀಡಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು.

ಪಾಲಿಕೆಯಿಂದ 750 ಮನೆಗಳಿಗೆ ಒಂದು ಆಟೋ ಟಿಪ್ಪರ್‌ ನಿಯೋಜಿಸಿರುವ ಬಗ್ಗೆಯೂ ಆಕ್ಷೇಪಗಳು ವ್ಯಕ್ತವಾಗಿದ್ದು, ಈ ಬಗ್ಗೆ ಮರು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಜತೆಗೆ ಪಾಲಿಕೆಯ ವೈದ್ಯಾಧಿಕಾರಿಗಳನ್ನು ಘನತ್ಯಾಜ್ಯ ನಿರ್ವಹಣೆ ವಿಭಾಗದ ಕಾರ್ಯಗಳಿಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು. ಮೇಯರ್‌ ಗಂಗಾಂಬಿಕೆ, ಉಪಮೇಯರ್‌ ಭದ್ರೇಗೌಡ, ಆಡಳಿತ ಪಕ್ಷ ನಾಯಕ ಅಬ್ದುಲ್‌ ವಾಜೀದ್‌ ಸೇರಿದಂತೆ ಪ್ರಮುಖರು ಹಾಜರಿದ್ದರು.

ಬಿಲ್‌ ಪಾವತಿಗೆ ಪ್ರತ್ಯೇಕ ಖಾತೆ
ತ್ಯಾಜ್ಯ ಗುತ್ತಿಗೆದಾರರಿಗೆ ಪ್ರತಿಯೊಂದು ಬಿಲ್‌ ಪಾವತಿಸಬೇಕೆಂಬ ಉದ್ದೇಶದಿಂದ ಪ್ರತ್ಯೇಕ ಬ್ಯಾಂಕ್‌ ಖಾತೆ ತೆರೆಯಲು ಸರ್ಕಾರ ಅನುಮೋದನೆ ನೀಡಿದೆ. ಅದರಂತೆ ತ್ಯಾಜ್ಯ ನಿರ್ವಹಣೆಗೆ ಸರ್ಕಾರದಿಂದ ಬರುವ ಹಾಗೂ ಪಾಲಿಕೆಯಿಂದ ಮೀಸಲಿಟ್ಟರುವ ಅನುದಾನ ನೇರವಾಗಿ ಖಾತೆಗೆ ಹೋಗಲಿದ್ದು, ಜಿಪಿಎಸ್‌ ಹಾಗೂ ಆರ್‌ಐಎಫ್ಡಿಗಳನ್ನು ಪರಿಶೀಲಿಸಿ ಪ್ರತಿ ತಿಂಗಳು ಬಿಲ್‌ ಪಾವತಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯುಕ್ತರು ಹೇಳಿದರು.

ಸಗಟು ಉತ್ಪಾದಕರ ಪರಿಶೀಲನೆ
ನಗರದಲ್ಲಿ 50 ಯೂನಿಟ್‌ಗಳಿಗಿಂತ ಹೆಚ್ಚಿರುವ ಅಪಾರ್ಟ್‌ಮೆಂಟ್ ಹಾಗೂ 10 ಕಿಲೋ ಗ್ರಾಂಗಿಂತಲೂ ಹೆಚ್ಚಿನ ತ್ಯಾಜ್ಯ ಉತ್ಪಾದನೆ ಮಾಡುವಂತಹ ವಾಣಿಜ್ಯ ಮಳಿಗೆಗಳಿಂದ ತ್ಯಾಜ್ಯ ಸಂಗ್ರಹಿಸಲು ಕೆಲವೊಂದು ಏಜೆನ್ಸಿಗಳನ್ನು ಗುರುತಿಸಲಾಗಿದೆ. ಆದರೆ, ಏಜೆನ್ಸಿಗಳು ಅಪಾರ್ಟ್‌ಮೆಂಟ್ ಹಾಗೂ ಮಳಿಗೆಗಳಿಂದ ಸಂಗ್ರಹಿಸಿದ ತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳು ಹಾಗೂ ಕ್ವಾರಿಗಳಿಗೆ ನೀಡುತ್ತಿದ್ದಾರೆಂಬ ಆರೋಪಗಳಿವೆ. ಆ ಹಿನ್ನೆಲೆಯಲ್ಲಿ ಪಾಲಿಕೆಯಿಂದ ಗುರುತಿಸಿರುವ ಏಜೆನ್ಸಿಗಳನ್ನು ಪರಿಶೀಲಿಸಲಾಗುವುದು ಎಂದರು.

ರಸ್ತೆ ಗುಡಿಸಲು 100 ಯಂತ್ರಗಳು
ಪಾಲಿಕೆಯ ವ್ಯಾಪ್ತಿಯಲ್ಲಿ ಸದ್ಯ 9 ಯಾಂತ್ರಿಕೃತ ಕಸ ಗುಡಿಸುವ ಯಂತ್ರಗಳಿದ್ದು, ಪಾಲಿಕೆಯಿಂದ 17 ಹಾಗೂ ಗುತ್ತಿಗೆದಾರರ ಮೂಲಕ 17 ಯಂತ್ರಗಳ ಸೇವೆ ಪಡೆಯಲು ನಿರ್ಧರಿಸಲಾಗಿದೆ. ಆದರೆ, ಆರ್ಟಿರಿಯಲ್‌ ಹಾಗೂ ಸಬ್‌ ಆರ್ಟಿರಿಯಲ್‌ ರಸ್ತೆಗಳಲ್ಲಿ ಪೌರಕಾರ್ಮಿಕರಿಂದ ಸ್ವಚ್ಛತಾ ಕಾರ್ಯ ನಡೆಸಲು ಸಾಧ್ಯವಿಲ್ಲ. ಹೀಗಾಗಿ ನಗರದ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಕನಿಷ್ಠ 100 ಯಂತ್ರಗಳ ಅಗತ್ಯವಿದೆ ಎಂದು ಆಯುಕ್ತರು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯಿಂದ 1000 ಆಟೋ
ಟೆಂಡರ್‌ ಪ್ರಕ್ರಿಯೆಯಲ್ಲಿ ಭಾಗವಹಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಸಮಾಜ ಕಲ್ಯಾಣ ಇಲಾಖೆಯಿಂದಲೇ ಒಂದು ಸಾವಿರ ಆಟೋ ಟಿಪ್ಪರ್‌ಗಳು ದೊರೆಯಲಿವೆ. ಆದರೆ, ಆಟೋ ನಿರ್ವಹಣೆಯನ್ನು ಗುತ್ತಿಗೆದಾರರೇ ನೋಡಿಕೊಳ್ಳಬೇಕಾಗುತ್ತದೆ ಎಂದು ಮಂಜುನಾಥ ಪ್ರಸಾದ್‌ ತಿಳಿಸಿದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.