ಒತ್ತುವರಿ: 12 ಮಂದಿಗೆ ಸಜೆ


Team Udayavani, Feb 7, 2019, 6:21 AM IST

blore-8.jpg

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಬಸವಳ್ಳಿ ಗ್ರಾಮದಲ್ಲಿ 43 ಎಕರೆಗೂ ಹೆಚ್ಚು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದ 12 ಮಂದಿ ಒತ್ತುವರಿದಾರರಿಗೆ ಒಂದು ವರ್ಷ ಜೈಲು ಹಾಗೂ ತಲಾ ಐದು ಸಾವಿರ ರೂ ದಂಡ ವಿಧಿಸಿ ಭೂ ಕಬಳಿಕೆ ವಿಶೇಷ ನ್ಯಾಯಾಲಯ ಬುಧವಾರ ಆದೇಶ ನೀಡಿದೆ.

ಬಸವಳ್ಳಿ ಗ್ರಾಮದ ವಿವಿಧ ಸರ್ವೇ ನಂಬರ್‌ಗಳಲ್ಲಿದ್ದ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದ 12 ಮಂದಿ ಒತ್ತುವರಿದಾರರ ವಿರುದ್ಧ ಹಳಿಯಾಳ ತಹಶೀಲ್ದಾರ್‌ ವಿಶೇಷ ನ್ಯಾಯಾಲಯದಲ್ಲಿ ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದರು. ಪ್ರಕರಣಗಳ ವಿಚಾರಣೆ ನಡೆಸಿದ ಭೂ ಕಬಳಿಕೆ ವಿಶೇಷ ನ್ಯಾಯಾಲಯ, ಆರೋಪಿಗಳ ವಿರುದ್ಧದ ಸಾಕ್ಷ್ಯಾಧಾರಗಳು ಹಾಗೂ ಪ್ರಾಸಿಕ್ಯೂಶನ್‌ ವಾದ ಪುರಸ್ಕರಿಸಿ 12 ಮಂದಿ ಭೂ ಒತ್ತುವರಿದಾರ ಆರೋಪಿಗಳಿಗೆ 1 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಿ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಆರ್‌.ಎಚ್ ರದ್ದಿ ಹಾಗೂ ಕಂದಾಯ ಸದಸ್ಯರಾದ ನಿರಂಜನ್‌ ಅವರಿದ್ದ ಪೀಠ ಆದೇಶ ನೀಡಿದೆ. ಜತೆಗೆ ಒತ್ತುವರಿ ಭೂಮಿಯನ್ನು ತೆರವುಗೊಳಿಸುವ ಸಂಬಂಧ ಕ್ರಮ ವಹಿಸುವಂತೆ ಹಳಿಯಾಳ ತಹಶೀಲ್ದಾರ್‌ಗೆ ನಿರ್ದೇಶಿಸಿದೆ. ಹನ್ನೊಂದು ಪ್ರತ್ಯೇಕ ಪ್ರಕರಣಗಳಲ್ಲಿ ಸರ್ಕಾರಿ ಅಭಿಯೋಜಕರಾಗಿ ಶೈಲಜಾ ಕೃಷ್ಣಾನಾಯಕ್‌ ವಾದ ಮಂಡಿಸಿದ್ದರು.

ಬಸವಳ್ಳಿ ಗ್ರಾಮದಲ್ಲಿ ನಡೆದಿದ್ದ ಭೂ ಒತ್ತುವರಿಗೆ ಸಂಬಂಧಿಸಿದಂತೆ ತಹಶೀಲ್ದಾರರು ದಾಖಲಿಸಿದ್ದ 12 ಪ್ರತ್ಯೇಕ ಭೂ ಒತ್ತುವರಿ ಪ್ರಕರಣಗಳಲ್ಲಿ, ಚಂದ್ರಕಾಂತ ನಾರಾಯಣ ಬಣದುರ್ಕಾರ, ಬಸವೆಣ್ಣಪ್ಪ ಪರಸಪ್ಪ ಹುಣಸಿಕಟ್ಟಿ, ಬಾಬು ಯಲ್ಲಪ್ಪ ದೊಡ್ಮನಿ ಗಂಗಾರಾಮು ಅಪ್ಪಯ್ಯ ಕರ್ಲಕೊಪ್ಪ, ಪುಂಡ್ಲೀಕ್‌ ಹೂವಣ್ಣ ಮಿರಾಶಿ, ಗೋವಿಂದ ಹೂವಣ್ಣ ರಾಚೋಟ್ಕರ್‌,ದುಂಡಯ್ಯ ಶೇಖರಯ್ಯ ಹಿರೇಮಠ, ಪಾರ್ವತಿ ಬಸವೆಣ್ಣಪ್ಪ ಕಾಟೆನ್ನವರ್‌, ಕೃಷ್ಣ ವಿಠuಲ ಮಿರಾಶಿ, ಪುಂಡಲೀಕ ಗಂಗಪ್ಪ ಖಾನಾಪುರಕರ, ಹನುಮಂತ ಗಂಗಪ್ಪ ಖಾನಾಪುರಕರ, ಪುಂಡಲೀಕ ಬಸವಂತ ಖಂಡೇಕರ ಎಂಬುವವರಿಗೆ ಒಂದು ವರ್ಷ ಜೈಲು ಹಾಗೂ ತಲಾ 5 ಸಾವಿರ ಜೈಲುಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ ಎಂದು ಸರ್ಕಾರಿ ಅಭಿಯೋಜಕಿ ಶೈಲಜಾ ಕೃಷ್ಣಾನಾಯಕ್‌ ತಿಳಿಸಿದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.