ನಗರದಲ್ಲಿ ಭಾರೀ ಮಳೆ; ನಾಗರಿಕರ ಪರದಾಟ


Team Udayavani, Feb 10, 2019, 6:34 AM IST

nagarada.jpg

ಬೆಂಗಳೂರು: ತಮಿಳುನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ (ಕಡಿಮೆ ಒತ್ತಡದ ತಗ್ಗು) ಟ್ರಫ್ ಉಂಟಾದ ಪರಿಣಾಮ ರಾಜಧಾನಿಯಲ್ಲಿ ಶನಿವಾರ ಸತತ ಮೂರು ಗಂಟೆಗಳ ಕಾಲ ಸುರಿದ ಮಳೆಗೆ ಸಾರ್ವಜನಿಕರು ಪರದಾಡಿದರು.

ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆರಂಭವಾದ ಮಳೆ ಸಂಜೆ 7.30ವರೆಗೆ ಭರ್ಜರಿ ಮಳೆ ಸುರಿದು ನಗರವನ್ನು ತಂಪಾಗಿಸಿದೆ. ಕೆಲ ದಿನಗಳಿಂದ ತಾಪಮಾನ ನಿಧಾನವಾಗಿ 32 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಾಣುತ್ತಿದ್ದು, ಈ ಅಂಶವೂ ಕೂಡಾ ಮಳೆ ಸುರಿಯಲು ಕಾರಣವಾಗಿದೆ.

ಸಂಜೆ ವೇಳೆ ಮಳೆ ಸುರಿದಿದ್ದರಿಂದ ಕಚೇರಿಗಳಿಂದ ಮನೆ ಸೇರುವವರು, ಕಾಲೇಜು ವಿದ್ಯಾರ್ಥಿಗಳು, ಬೀದಿ ಬದಿ ವ್ಯಾಪಾರಸ್ಥರು ಸೇರಿದಂತೆ ನಗರದ ಜನತೆ ತೊಂದರೆ ಅನುಭವಿಸುವಂತಾಯಿತು. ಮುಖ್ಯವಾಗಿ ಪುರಭವನ, ಮೈಸೂರು ರಸ್ತೆ ಜಂಕ್ಷನ್‌, ಯಶವಂತಪುರ, ಮೆಜೆಸ್ಟಿಕ್‌, ಚಾಲಕ್ಯ ಸರ್ಕಲ್‌ ಸೇರಿದಂತೆ ಹಲವೆಡೆ ಸಿಗ್ನಲ್‌ಗ‌ಳಲ್ಲಿ ವಾಹನ ದಟ್ಟಣೆ ಕಂಡುಬಂತು. 

ರಸ್ತೆ ಹಾಗೂ ಪಾದಾಚಾರಿ ಮಾರ್ಗದಲ್ಲಿನ ಗುಂಡಿಗಳಲ್ಲಿ ನೀರುತುಂಬಿ, ಮಾರ್ಗ ಕಾಣದಂತಾಗಿ ವಾಹನ ಸವಾರರು ಮತ್ತು ಪಾದಚಾರಿಗಳು ತೊಂದರೆಗೀಡಾದರು. ಓಕಳಿಪುರ ಕೆಳಸೇತುವೆ, ನಾಯಂಡಹಳ್ಳಿ, ಮಂತ್ರಿ ಮಾಲ್‌ ಎದುರು, ಮೆಜೆಸ್ಟಿಕ್‌ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ವಾಹನ ಸವಾರರು ಪರದಾಡಿದರು. ಜತೆಗೆ ತಗ್ಗು ಪ್ರದೇಶಗಳಿರುವ ಬಡಾವಣೆಗಳ ಕೆಲ ಮನೆಗಳಿಗೆ ನೀರು ನುಗ್ಗಿದೆ. ಜಯನಗರ ಮೆಟ್ರೋ ನಿಲ್ದಾಣದ ಬಳಿ ನಿಲ್ಲಿಸಿದ್ದ ಕಾರಿನ ಒಳಗೆ ನೀರು ನುಗ್ಗಿದ ಘಟನೆ ನಡೆದಿದೆ.

9ಕ್ಕೂ ಹೆಚ್ಚು ಮರಗಳು ಧರೆಗೆ: ಜೋರಾಗಿ ಸುಳಿದ ಮಳೆಯಿಂದಾಗಿ ಗಾಂಧಿನಗರದಲ್ಲಿ 2, ಎಂ.ಜಿ.ರಸ್ತೆ, ಬಸವನಗುಡಿ, ನಿಮಾನ್ಸ್‌ ಆಸ್ಪತ್ರೆ, ಕೆ.ಆರ್‌.ರಸ್ತೆ, ಕೋರಮಂಗಲ, ವಿಜಯನಗರ, ಬಸವೇಶ್ವರ ನಗರ, ಮಹಾಲಕ್ಷ್ಮೀ ಬಡಾವಣೆಯಲ್ಲಿ ತಲಾ 1 ಮರ ಸೇರಿದಂತೆ 9ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಮರಗಳ ತೆರವು ಕಾರ್ಯಕ್ಕೆ ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ ಧಾವಿಸಿದ್ದು, ರಾತ್ರಿವರೆಗೂ ತೆರವು ಕಾರ್ಯಾಚರಣೆ ನಡೆಸಿದರು.

ಮಳೆಯ ಪ್ರಮಾಣ: ಸಂಪಂಗಿರಾಮ ನಗರದಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಮಳೆಯ ಪ್ರಮಾಣ 67 ಮಿ.ಮೀ. ದಾಖಲಾಗಿದೆ. ಬಸವನಗಡಿ 66 ಮಿ.ಮೀ., ಪಟ್ಟಾಭಿರಾಮನಗರ 58 ಮಿ.ಮೀ., ಹೊಯ್ಸಳನಗರ 43 ಮಿ.ಮೀ., ಲಾಲ್‌ಬಾಗ್‌ 38 ಮಿ.ಮೀ., ಎಚ್‌ಎಸ್‌ಆರ್‌ ಲೇಔಟ್‌ 36 ಮಿ.ಮೀ., ಕೊನೇನ ಅಗ್ರಹಾರ 24 ಮಿ.ಮೀ., ಬೆಳ್ಳಂದೂರು 17 ಮಿ.ಮೀ.,

ರಾಜರಾಜೇಶ್ವರಿ ನಗರ 16 ಮಿ.ಮೀ., ಅಟ್ಟೂರು 13 ಮಿ.ಮೀ., ಯಲಹಂಕ, ಸಾರಕ್ಕಿ 12 ಮಿ.ಮೀ., ಬೊಮ್ಮನಹಳ್ಳಿ 10 ಮಿ.ಮೀ. ಮಳೆಯ ಬಿದ್ದಿರುವುದಾಗಿ ದಾಖಲಾಗಿದೆ. ಉಳಿದಂತೆ ತಾವರೆಕೆರೆ, ಯಶವಂತಪುರ, ಕೆಂಗೇರಿ, ಕೋರಮಂಗಲ, ಬಿಳೇಕಹಳ್ಳಿ, ದೊರೆಸಾನಿಪಾಳ್ಯ, ಅಗ್ರಹಾರ ದಾಸರಹಳ್ಳಿ, ರಾಜಮಹಲ್‌ ಗುಟ್ಟಹಳ್ಳಿ, ದಯಾನಂದ ನಗರ ಸೇರಿದಂತೆ ವಿವಿಧೆಡೆ ತುಂತುರು ಮಳೆ ಬಿದ್ದಿದೆ.

ಮಳೆ ಮುಂಜಾಗ್ರತೆಗೆ ಡಿಸಿಎಂ ಸೂಚನೆ: ನಗರದಲ್ಲಿ ಅಕಾಲಿಕ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌ ಸೂಚಿಸಿದ್ದಾರೆ. ಶನಿವಾರ ಸಂಜೆ ದಿಢೀರ್‌ ಮಳೆ ಆರಂಭವಾದ ಹಿನ್ನೆಲೆಯಲ್ಲಿ ನಗರದ ಕೆಲ ರಸ್ತೆಗಳಲ್ಲಿ ದಟ್ಟಣೆ ಉಂಟಾಗಿತ್ತು.

ಜತೆಗೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಮರಗಳು ಉರುಳಿದರಿಂದ ಜನರು ತೊಂದರೆ ಅನುಭವಿಸುವಂತಾಗಿತ್ತು. ನಗರದಲ್ಲಿ ಇನ್ನೂ ಎರಡು ದಿನಗಳು ಮಳೆಯಾಗುವ ಸಾಧ್ಯತೆಯಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದರೊಂದಿಗೆ ಪಾಲಿಕೆಯ ನಿಯಂತ್ರಣ ಕೊಠಡಿಗಳು 24 ಗಂಟೆಗಳು ಕಾರ್ಯನಿರ್ವಹಿಸುವಂತೆ ಹಾಗೂ ಸಮಸ್ಯೆಗಳಿಗೆ ಪರಿಹಾರ ತಂಡಗಳು ಶೀಘ್ರ ತೆರಳಲು ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.