ಪಾಕ್‌ಗೆ ತಲೆಬಾಗಲೂ ಕಾಂಗ್ರೆಸ್‌ ಹಿಂಜರಿಯದು


Team Udayavani, Feb 11, 2019, 6:16 AM IST

pak.jpg

ಬೆಂಗಳೂರು: ಕಾಂಗ್ರೆಸ್‌ ನಾಯಕರು ಅಧಿಕಾರದ ಆಸೆಗಾಗಿ “ಏನಾದರೂ ಮಾಡಿ ಮೋದಿಯನ್ನು ತೊಲಗಿಸು’ವಂತೆ (ಕುಛ್ ಭಿ ಕರೋ ಮೋದಿ ಕೊ ಹಠಾವೊ) ಬದ್ಧವೈರಿ ಪಾಕಿಸ್ತಾನದ ಮುಂದೆ ಗೋಗರೆಯಲಿಕ್ಕೂ ಹಿಂಜರಿಯುವುದಿಲ್ಲ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಸ್ಮತಿ ಇರಾನಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಭಾರತೀಯ ವಿದ್ಯಾಭವನದಲ್ಲಿ ಭಾನುವಾರ ಬಿಜೆಪಿ ಬೆಂಗಳೂರು ಘಟಕ ಹಮ್ಮಿಕೊಂಡಿದ್ದ “ಪ್ರಬುದ್ಧರ ಗೋಷ್ಠಿ’ಯಲ್ಲಿ ಮಾತನಾಡಿದ ಅವರು, “ಅಧಿಕಾರದಿಂದ ವಂಚಿತರಾಗಿದ್ದಕ್ಕೆ ಕಾಂಗ್ರೆಸ್‌ ನಾಯಕರು ಲಂಡನ್‌ನಲ್ಲಿ ಸುದ್ದಿಗೋಷ್ಠಿ ಕರೆದು, ದೇಶದ ಚುನಾವಣಾ ಆಯೋಗದ ವಿರುದ್ಧ ದೂರಿದರು. ಈ ಮೂಲಕ ಜಾಗತಿಕ ಮಟ್ಟದಲ್ಲಿ ದೇಶದ ಪ್ರತಿಷ್ಠೆ ಹರಾಜು ಹಾಕಿದರು. ಸೇನಾ ಮುಖ್ಯಸ್ಥರನ್ನು ಗೂಂಡಾ ಎಂದು ಜರಿದರು.

ಈಗ ಎಷ್ಟರಮಟ್ಟಿಗೆ ಹತಾಶರಾಗಿದ್ದಾರೆಂದರೆ, ಪಾಕಿಸ್ತಾನಕ್ಕೆ ತೆರಳಿ ಏನಾದರೂ ಮಾಡಿ ಮೋದಿಯನ್ನು ತೊಲಗಿಸಿ ಎಂದು ಮನವಿ ಮಾಡಲಿಕ್ಕೂ ಹಿಂಜರಿಯುವುದಿಲ್ಲ’ ಎಂದು ಆರೋಪಿಸಿದರು. ತನ್ನ ಗುರಿ ಸಾಧನೆಗಾಗಿ ದೇಶದ ಯಾವುದೇ ಸಂಸ್ಥೆಯನ್ನು ನಾಶಗೊಳಿಸಲು ಕಾಂಗ್ರೆಸ್‌ ತಯಾರಾಗಿದೆ. ಈ ಮಧ್ಯೆ 2019ರ ಲೋಕಸಭಾ ಚುನಾವಣೆಗೆ “ಮಹಾ ಕಲಬೆರಕೆ’ ಮತ್ತೆ ಒಟ್ಟಾಗಿ ಜನರ ಬಳಿ ಬರಲು ಸಜ್ಜಾಗಿದೆ.

ಅದರ ಮುಖ್ಯಗುರಿ ಜನರನ್ನು ನ್ಯಾಯವಂಚಿತರನ್ನಾಗಿ ಮಾಡುವುದು ಹಾಗೂ ಅದರ ಕಣ್ಣು ನಿಮ್ಮ ಜೇಬಿನ ಮೇಲೆಯೇ ಇರುತ್ತದೆ. ಈ ಮಹಾ ಕಲಬೆರಕೆ ಒಂದೆಡೆಯಾದರೆ, 55 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಲಾಗದ ಸಾಧನೆಯನ್ನು ಕೇವಲ 55 ತಿಂಗಳಲ್ಲಿ ಮಾಡಿತೋರಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತೂಂದೆಡೆ ಇದ್ದಾರೆ. ಆಯ್ಕೆ ನಿಮ್ಮ ಮುಂದಿದೆ ಎಂದು ಹೇಳಿದರು. 

2014ರಲ್ಲಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಅವರು, ಸಂಸತ್‌ ಎಂಬ ದೇವಾಲಯಕ್ಕೆ ಸಾಷ್ಟಾಂಗ ನಮನ ಸಲ್ಲಿಸಿ ಒಳಪ್ರವೇಶಿಸಿದರು. ದೇವಸ್ಥಾನದ ಒಳಗೆ ಹೋದ ನಂತರ ಮೊದಲು ಮಾಡಬೇಕಾದ ಕೆಲಸ ಸ್ವತ್ಛಗೊಳಿಸುವುದು. ನಿಮ್ಮ ಪ್ರಧಾನ ಸೇವಕ (ಪ್ರಧಾನಿ) ಮಾಡಿದ್ದೂ ಇದನ್ನೇ ಎಂದು ವಿಶ್ಲೇಷಿಸಿದ ಸ್ಮತಿ ಇರಾನಿ, ಗಾಂಧೀಜಿಯವರ ಕನಸು ಸ್ವತ್ಛ ಭಾರತಕ್ಕೆ ಚಾಲನೆ ನೀಡಿದರು.

ಇದರ ಪರಿಣಾಮ ಬಯಲು ಬಹಿರ್ದೆಸೆ ವೇಳೆ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿದ್ದ ದೌರ್ಜನ್ಯ ಕಡಿಮೆಯಾಯಿತು. ಮೂರು ಲಕ್ಷ ಜನ ಈ ಬಯಲು ಬಹಿರ್ದೆಸೆಯಿಂದ ಹಲವು ರೋಗಗಳಿಗೆ ತುತ್ತಾಗುವುದು ತಪ್ಪಿತು. ಕೇವಲ 55 ತಿಂಗಳಲ್ಲಿ 13 ಕೋಟಿ ಜನರಿಗೆ ಎಲ್‌ಪಿಜಿ ಸಂಪರ್ಕ ನೀಡಲಾಯಿತು. ಈ ಪೈಕಿ ಪ್ರಧಾನಿ ಕರೆಗೆ ಓಗೊಟ್ಟು ಒಂದು ಕೋಟಿ ಗ್ರಾಹಕರು ತಮ್ಮ ಸಬ್ಸಿಡಿ ಹಿಂತಿರುಗಿಸಿದ್ದಾರೆ.

ಇಂತಹ ಸಣ್ಣ-ಸಣ್ಣ ಬದಲಾವಣೆಗಳು ದೊಡ್ಡವರ ಗಮನಕ್ಕೆ ಬರುವುದೇ ಇಲ್ಲ. ಯಾಕೆಂದರೆ, ಅವರಾರಿಗೂ ಈ ಸಮಸ್ಯೆಗಳ ಬಗ್ಗೆ ಅರಿವೇ ಇಲ್ಲ ಎಂದು ಟೀಕಿಸಿದರು. ಇದಕ್ಕೂ ಮುನ್ನ ಸಂಸದ ಪಿ.ಸಿ.ಮೋಹನ್‌ ಮಾತನಾಡಿ, ಅತಿ ಹೆಚ್ಚು ಕಾಲ ದೇಶವನ್ನು ಆಳಿದ ಕಾಂಗ್ರೆಸ್‌ ಹಗರಣಗಳನ್ನು ಹೊರತುಪಡಿಸಿ ಬೇರೇನೂ ಮಾಡಲಿಲ್ಲ. ರಾಜ್ಯ ಸರ್ಕಾರವಂತೂ ಸಂಪೂರ್ಣ ಮಲಗಿಬಿಟ್ಟಿದೆ.

ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ಮುಂದಾಗಿದ್ದರೂ, ರಾಜ್ಯ ಸರ್ಕಾರ ಹತ್ತಾರು ಷರತ್ತುಗಳ ಮೂಲಕ ಅದಕ್ಕೆ ಕೊಕ್ಕೆಹಾಕಿದೆ. ಷರತ್ತುಗಳನ್ನು ಸಡಿಲಗೊಳಿಸದಿದ್ದರೆ, ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಅಶ್ವತ್ಥ್ ನಾರಾಯಣ, ಮಾಧ್ಯಮ ಸಹ ಸಂಚಾಲಕ ಪ್ರಕಾಶ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.