ಪಾಕ್‌ಗೆ ತಲೆಬಾಗಲೂ ಕಾಂಗ್ರೆಸ್‌ ಹಿಂಜರಿಯದು


Team Udayavani, Feb 11, 2019, 6:16 AM IST

pak.jpg

ಬೆಂಗಳೂರು: ಕಾಂಗ್ರೆಸ್‌ ನಾಯಕರು ಅಧಿಕಾರದ ಆಸೆಗಾಗಿ “ಏನಾದರೂ ಮಾಡಿ ಮೋದಿಯನ್ನು ತೊಲಗಿಸು’ವಂತೆ (ಕುಛ್ ಭಿ ಕರೋ ಮೋದಿ ಕೊ ಹಠಾವೊ) ಬದ್ಧವೈರಿ ಪಾಕಿಸ್ತಾನದ ಮುಂದೆ ಗೋಗರೆಯಲಿಕ್ಕೂ ಹಿಂಜರಿಯುವುದಿಲ್ಲ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಸ್ಮತಿ ಇರಾನಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಭಾರತೀಯ ವಿದ್ಯಾಭವನದಲ್ಲಿ ಭಾನುವಾರ ಬಿಜೆಪಿ ಬೆಂಗಳೂರು ಘಟಕ ಹಮ್ಮಿಕೊಂಡಿದ್ದ “ಪ್ರಬುದ್ಧರ ಗೋಷ್ಠಿ’ಯಲ್ಲಿ ಮಾತನಾಡಿದ ಅವರು, “ಅಧಿಕಾರದಿಂದ ವಂಚಿತರಾಗಿದ್ದಕ್ಕೆ ಕಾಂಗ್ರೆಸ್‌ ನಾಯಕರು ಲಂಡನ್‌ನಲ್ಲಿ ಸುದ್ದಿಗೋಷ್ಠಿ ಕರೆದು, ದೇಶದ ಚುನಾವಣಾ ಆಯೋಗದ ವಿರುದ್ಧ ದೂರಿದರು. ಈ ಮೂಲಕ ಜಾಗತಿಕ ಮಟ್ಟದಲ್ಲಿ ದೇಶದ ಪ್ರತಿಷ್ಠೆ ಹರಾಜು ಹಾಕಿದರು. ಸೇನಾ ಮುಖ್ಯಸ್ಥರನ್ನು ಗೂಂಡಾ ಎಂದು ಜರಿದರು.

ಈಗ ಎಷ್ಟರಮಟ್ಟಿಗೆ ಹತಾಶರಾಗಿದ್ದಾರೆಂದರೆ, ಪಾಕಿಸ್ತಾನಕ್ಕೆ ತೆರಳಿ ಏನಾದರೂ ಮಾಡಿ ಮೋದಿಯನ್ನು ತೊಲಗಿಸಿ ಎಂದು ಮನವಿ ಮಾಡಲಿಕ್ಕೂ ಹಿಂಜರಿಯುವುದಿಲ್ಲ’ ಎಂದು ಆರೋಪಿಸಿದರು. ತನ್ನ ಗುರಿ ಸಾಧನೆಗಾಗಿ ದೇಶದ ಯಾವುದೇ ಸಂಸ್ಥೆಯನ್ನು ನಾಶಗೊಳಿಸಲು ಕಾಂಗ್ರೆಸ್‌ ತಯಾರಾಗಿದೆ. ಈ ಮಧ್ಯೆ 2019ರ ಲೋಕಸಭಾ ಚುನಾವಣೆಗೆ “ಮಹಾ ಕಲಬೆರಕೆ’ ಮತ್ತೆ ಒಟ್ಟಾಗಿ ಜನರ ಬಳಿ ಬರಲು ಸಜ್ಜಾಗಿದೆ.

ಅದರ ಮುಖ್ಯಗುರಿ ಜನರನ್ನು ನ್ಯಾಯವಂಚಿತರನ್ನಾಗಿ ಮಾಡುವುದು ಹಾಗೂ ಅದರ ಕಣ್ಣು ನಿಮ್ಮ ಜೇಬಿನ ಮೇಲೆಯೇ ಇರುತ್ತದೆ. ಈ ಮಹಾ ಕಲಬೆರಕೆ ಒಂದೆಡೆಯಾದರೆ, 55 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಲಾಗದ ಸಾಧನೆಯನ್ನು ಕೇವಲ 55 ತಿಂಗಳಲ್ಲಿ ಮಾಡಿತೋರಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತೂಂದೆಡೆ ಇದ್ದಾರೆ. ಆಯ್ಕೆ ನಿಮ್ಮ ಮುಂದಿದೆ ಎಂದು ಹೇಳಿದರು. 

2014ರಲ್ಲಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಅವರು, ಸಂಸತ್‌ ಎಂಬ ದೇವಾಲಯಕ್ಕೆ ಸಾಷ್ಟಾಂಗ ನಮನ ಸಲ್ಲಿಸಿ ಒಳಪ್ರವೇಶಿಸಿದರು. ದೇವಸ್ಥಾನದ ಒಳಗೆ ಹೋದ ನಂತರ ಮೊದಲು ಮಾಡಬೇಕಾದ ಕೆಲಸ ಸ್ವತ್ಛಗೊಳಿಸುವುದು. ನಿಮ್ಮ ಪ್ರಧಾನ ಸೇವಕ (ಪ್ರಧಾನಿ) ಮಾಡಿದ್ದೂ ಇದನ್ನೇ ಎಂದು ವಿಶ್ಲೇಷಿಸಿದ ಸ್ಮತಿ ಇರಾನಿ, ಗಾಂಧೀಜಿಯವರ ಕನಸು ಸ್ವತ್ಛ ಭಾರತಕ್ಕೆ ಚಾಲನೆ ನೀಡಿದರು.

ಇದರ ಪರಿಣಾಮ ಬಯಲು ಬಹಿರ್ದೆಸೆ ವೇಳೆ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿದ್ದ ದೌರ್ಜನ್ಯ ಕಡಿಮೆಯಾಯಿತು. ಮೂರು ಲಕ್ಷ ಜನ ಈ ಬಯಲು ಬಹಿರ್ದೆಸೆಯಿಂದ ಹಲವು ರೋಗಗಳಿಗೆ ತುತ್ತಾಗುವುದು ತಪ್ಪಿತು. ಕೇವಲ 55 ತಿಂಗಳಲ್ಲಿ 13 ಕೋಟಿ ಜನರಿಗೆ ಎಲ್‌ಪಿಜಿ ಸಂಪರ್ಕ ನೀಡಲಾಯಿತು. ಈ ಪೈಕಿ ಪ್ರಧಾನಿ ಕರೆಗೆ ಓಗೊಟ್ಟು ಒಂದು ಕೋಟಿ ಗ್ರಾಹಕರು ತಮ್ಮ ಸಬ್ಸಿಡಿ ಹಿಂತಿರುಗಿಸಿದ್ದಾರೆ.

ಇಂತಹ ಸಣ್ಣ-ಸಣ್ಣ ಬದಲಾವಣೆಗಳು ದೊಡ್ಡವರ ಗಮನಕ್ಕೆ ಬರುವುದೇ ಇಲ್ಲ. ಯಾಕೆಂದರೆ, ಅವರಾರಿಗೂ ಈ ಸಮಸ್ಯೆಗಳ ಬಗ್ಗೆ ಅರಿವೇ ಇಲ್ಲ ಎಂದು ಟೀಕಿಸಿದರು. ಇದಕ್ಕೂ ಮುನ್ನ ಸಂಸದ ಪಿ.ಸಿ.ಮೋಹನ್‌ ಮಾತನಾಡಿ, ಅತಿ ಹೆಚ್ಚು ಕಾಲ ದೇಶವನ್ನು ಆಳಿದ ಕಾಂಗ್ರೆಸ್‌ ಹಗರಣಗಳನ್ನು ಹೊರತುಪಡಿಸಿ ಬೇರೇನೂ ಮಾಡಲಿಲ್ಲ. ರಾಜ್ಯ ಸರ್ಕಾರವಂತೂ ಸಂಪೂರ್ಣ ಮಲಗಿಬಿಟ್ಟಿದೆ.

ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ಮುಂದಾಗಿದ್ದರೂ, ರಾಜ್ಯ ಸರ್ಕಾರ ಹತ್ತಾರು ಷರತ್ತುಗಳ ಮೂಲಕ ಅದಕ್ಕೆ ಕೊಕ್ಕೆಹಾಕಿದೆ. ಷರತ್ತುಗಳನ್ನು ಸಡಿಲಗೊಳಿಸದಿದ್ದರೆ, ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಅಶ್ವತ್ಥ್ ನಾರಾಯಣ, ಮಾಧ್ಯಮ ಸಹ ಸಂಚಾಲಕ ಪ್ರಕಾಶ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.