ನಿಯಮ ಬಾಹಿರ ಜಾಬ್ಕೋಡ್
Team Udayavani, Feb 16, 2019, 6:30 AM IST
ಬೆಂಗಳೂರು: ಸರ್ಕಾರ ಅನುದಾನ ಬಿಡುಗಡೆ ಮಾಡುವ ಮೊದಲೇ ಆಯ್ದ ವಿಧಾನಸಭಾ ಕ್ಷೇತ್ರಗಳಿಗೆ 55 ಕೋಟಿ ರೂ.ಗಳ ಜಾಬ್ಕೋಡ್ ನೀಡಿ ಕಾಮಗಾರಿ ಆರಂಭಿಸಿದ್ದು, ಕೂಡಲೇ ಜಾಬ್ಕೋಡ್ ಹಿಂಪಡೆಯಬೇಕೆಂದು ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ಆಗ್ರಹಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಣಕಾಸು ಆಯೋಗ (ಎಸ್ಎಫ್ಸಿ) ಅನುದಾನದಡಿ ನಡೆದ ಹಂಚಿಕೆಯಲ್ಲಿ ಈಗಾಗಲೇ ತಾರತಮ್ಯ ಮಾಡುತ್ತಿರುವ ಕಾಂಗ್ರೆಸ್-ಜೆಡಿಎಸ್ ಆಡಳಿತ, ಇದೀಗ ಸರ್ಕಾರದ ಪಾರದರ್ಶಕ ಕಾಯ್ದೆ ಉಲ್ಲಂ ಸಿ ಎಸ್ಎಫ್ಸಿ ಅನುದಾನ ಬಿಡುಗಡೆಗೂ ಮೊದಲೇ ಆಯ್ದ ವಿಧಾನಸಭಾ ಕ್ಷೇತ್ರಗಳಲ್ಲಿ ಕಾನೂನು ಬಾಹಿರವಾಗಿ ಕಾಮಗಾರಿ ಆರಂಭಿಸಲು ಜಾಬ್ಕೋಡ್ ನೀಡಿದ್ದಾರೆ ಎಂದು ಆರೋಪಿಸಿದರು.
ಮೂರು ವರ್ಷಗಳಲ್ಲಿ ಪಾಲಿಕೆಗೆ 12,368 ಕೋಟಿ ರೂ. ಅನುದಾನ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ, ಈವರೆಗೆ 6,892 ಕೋಟಿ ರೂ. ಬಿಡುಗಡೆಯಾಗಿದ್ದು, ಉಳಿದ 5,476 ಕೋಟಿ ರೂ. ಬಿಡುಗಡೆ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ಇದೀಗ ಮುಂದಿನ ಮೂರು ವರ್ಷಗಳಿಗೆ 8,015 ಕೋಟಿ ರೂ. ಘೋಷಿಸಿದೆ. ಆದರೆ, ಕಳೆದ ಎರಡು ವರ್ಷಗಳಿಂದ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಬಿಲ್ ಪಾವತಿಸದ ಸರ್ಕಾರ, ಹೊಸ ಕಾಮಗಾರಿಗಳಿಗೆ ಅನುದಾನ ಎಲ್ಲಿಂದ ಕೊಡುತ್ತದೆ ಎಂದು ಪ್ರಶ್ನಿಸಿದರು.
ಸರ್ಕಾರ 2018-19ನೇ ಸಾಲಿನಲ್ಲಿ ಪಾಲಿಕೆಗೆ 271.21 ಕೋಟಿ ರೂ. ಎಸ್ಎಫ್ಸಿ ಅನುದಾನ ನೀಡಿದೆ. ಆ ಪೈಕಿ ಈಗಾಗಲೇ 233 ಕೋಟಿ ರೂ.ಗಳಿಗೆ ಪಾಲಿಕೆ ಅಧಿಕಾರಿಗಳು ಜಾಬ್ಕೋಡ್ ನೀಡಿದ್ದಾರೆ. ಆದರೆ, ಪಾಲಿಕೆಗೆ ಈವರೆಗೆ 68 ಕೋಟಿ ರೂ. ಮಾತ್ರ ಬಂದಿದ್ದು, ಇನ್ನೂ 165 ಕೋಟಿ ರೂ. ಬರಬೇಕಿದೆ. ಆದರೂ, ಅಧಿಕಾರಿಗಳು ಮಾತ್ರ ಅನುದಾನ ಬರುವ ಮೊದಲೇ ಜಾಬ್ಕೋಡ್ ನೀಡಿ ಕೆಲಸ ಆರಂಭಿಸುತ್ತಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಸಂಶಯ ವ್ಯಕ್ತಪಡಿಸಿದರು.
ಎರಡು ಕ್ಷೇತ್ರಗಳಿಗೆ 55 ಕೋಟಿ ರೂ. ಜಾಬ್ಕೋಡ್: ಜೆಡಿಎಸ್ ಶಾಸಕರು ಪ್ರತಿನಿಧಿಸುವ ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ 30 ಕೋಟಿ ರೂ. ಹಾಗೂ ಮಹಾಲಕ್ಷ್ಮೀ ಲೇಔಟ್ಗೆ 25 ಕೋಟಿ ರೂ. ಸೇರಿ ಒಟ್ಟು 55 ಕೋಟಿ ರೂ.ಗಳಿಗೆ ಅನುದಾನ ಬರುವ ಮೊದಲೇ ಜಾಬ್ಕೋಡ್ ನೀಡಿ, ಕಾಮಗಾರಿ ಆರಂಭಿಸಲಾಗಿದೆ.
ಆದರೆ, ಕಳೆದ ವರ್ಷ ಪುಲಿಕೇಶಿ ನಗರಕ್ಕೆ 25 ಕೋಟಿ ರೂ. ಹಾಗೂ ಚಾಮರಾಜಪೇಟೆಗೆ 30 ಕೋಟಿ ರೂ.ಗಳನ್ನು ಎಸ್ಎಫ್ಸಿ ಅನುದಾನದಲ್ಲಿ ನೀಡುವುದಾಗಿ ಕಾಮಗಾರಿ ಆರಂಭಿಸಲು ಸರ್ಕಾರ ಆದೇಶಿಸಿತ್ತು. ಆದರೆ, ಈವರೆಗೆ ಕಾಮಗಾರಿಗಳಿಗೆ ಜಾಬ್ಕೋಡ್ ನೀಡಿಲ್ಲ. ಹೀಗಾಗಿ ಸರ್ಕಾರದ ಆದೇಶದಂತೆ ಎಸ್ಎಫ್ಸಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಮುಂದಾದರೆ ಪಾಲಿಕೆಯ ಬೊಕ್ಕಸಕ್ಕೆ ನಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಿವಿಸಿಸಿ, ಬಿಎಂಟಿಎಫ್ಗೆ ದೂರು: ಅನುದಾನ ಬಿಡುಗಡೆಯಾಗುವ ಮೊದಲೇ ಬೇಕಾಬಿಟ್ಟಿಯಾಗಿ ಜಾಬ್ಕೋಡ್ ನೀಡಿರುವುದನ್ನು ಕೂಡಲೇ ಉಪಮುಖ್ಯಮಂತ್ರಿಗಳು ತಡೆಹಿಡಿದು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಜತೆಗೆ ಪಾಲಿಕೆ ಆಯುಕ್ತರು ಕೂಡಲೇ ಜಾಬ್ಕೋಡ್ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ ಪದ್ಮನಾಭರೆಡ್ಡಿ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಸೋಮವಾರ ಟಿವಿಸಿಸಿ ಹಾಗೂ ಬಿಎಂಟಿಎಫ್ಗೆ ದೂರು ಸಲ್ಲಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು